Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ

VijayRaghavendra-SpandanaVijayRaghavendra Wedding Anniversary: ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. ಕೆಫೆ ಕಾಫಿ ಡೇದಲ್ಲಿ ಸ್ಪಂದನಾ ಅವರನ್ನು ವಿಜಯ್ ನೋಡಿದ್ದರು. ಮೊದಲ ನೋಟದಲ್ಲೇ ಅವರಿಗೆ ಸ್ಪಂದನಾ ಇಷ್ಟವಾದರು. ಇಬ್ಬರ ಮಧ್ಯೆ ಪರಿಚಯ ಬೆಳೆಯಿತು. ಪರಿಚಯ ಪ್ರೀತಿ ಆಯಿತು. ಇಬ್ಬರೂ 2007ರ ಆಗಸ್ಟ್ 26ರಂದು ಮದುವೆ ಆದರು.

‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ
ವಿಜಯ್-ಶೌರ್ಯ-ಸ್ಪಂದನಾ
Follow us
ರಾಜೇಶ್ ದುಗ್ಗುಮನೆ
|

Updated on:Aug 26, 2023 | 12:45 PM

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ (Spandana) ದಂಪತಿಗೆ ಇಂದು (ಆಗಸ್ಟ್ 26) ವಿವಾಹ ವಾರ್ಷಿಕೋತ್ಸವ. ಈ ವಿಶೇಷ ದಿನವನ್ನು ಇಬ್ಬರೂ ಸೆಲೆಬ್ರೇಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ, ವಿಧಿಯ ಆಟ ಬೇರೆಯದೇ ಇತ್ತು. ಆಗಸ್ಟ್ 6ರಂದು ಸ್ಪಂದನಾ ಥೈಲ್ಯಾಂಡ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಈ ನೋವು ವಿಜಯ್ ರಾಘವೇಂದ್ರ (Vijay Raghavendra) ಅವರಿಗೆ ಎಂದಿಗೂ ಮರೆಯಾಗುವಂಥದ್ದಲ್ಲ. ವಿವಾಹ ವಾರ್ಷಿಕೋತ್ಸವ ಆಚರಿಸಲು ಪತ್ನಿಯೇ ಇಲ್ಲ ಎಂಬುದನ್ನು ನೆನೆದು ವಿಜಯ್​ಗೆ ಬೇಸರ ಆಗಿದೆ. ಅವರು ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. ಕೆಫೆ ಕಾಫಿ ಡೇದಲ್ಲಿ ಸ್ಪಂದನಾ ಅವರನ್ನು ವಿಜಯ್ ನೋಡಿದ್ದರು. ಮೊದಲ ನೋಟದಲ್ಲೇ ಅವರಿಗೆ ಸ್ಪಂದನಾ ಇಷ್ಟವಾದರು. ಬಳಿಕ ಧೈರ್ಯದಿಂದ ಅವರನ್ನು ಮಾತನಾಡಿಸಿದರು. ಇಬ್ಬರ ಮಧ್ಯೆ ಪರಿಚಯ ಬೆಳೆಯಿತು. ಪರಿಚಯ ಪ್ರೀತಿ ಆಯಿತು. ಬಳಿಕ ಕುಟುಂಬದವರ ಒಪ್ಪಿಗೆ ಪಡೆದ ಇಬ್ಬರೂ 2007ರ ಆಗಸ್ಟ್ 26ರಂದು ಮದುವೆ ಆದರು.

ಹಲವು ವರ್ಷಗಳ ಕಾಲ ವಿಜಯ್ ಹಾಗೂ ಸ್ಪಂದನಾ ಸಂಸಾರ ನಡೆಸಿದರು. ಇವರಿಗೆ ಶೌರ್ಯ ಹೆಸರಿನ ಮಗನಿದ್ದಾನೆ. ಹಾಯಾಗಿ ಸಂಸಾರ ನಡೆಸಿಕೊಂಡಿದ್ದ ವಿಜಯ್ ರಾಘವೇಂದ್ರ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ನೋವಿನಿಂದ ಅವರು ಸ್ಪಂದನಾ ಬಗ್ಗೆ ಭಾವುಕರಾಗಿ ಸಾಲುಗಳನ್ನು ಬರೆದು ಓದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

‘ಚಿನ್ನಾ.. ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ

ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ

ಬದುಕನ್ನು ಕಟ್ಟಿ ಸರ್ವಸ್ವವಾದೆ

ಉಸಿರಲ್ಲಿ ಬೆರೆತು ಜೀವಂತವಾದೆ

ಮುದ್ದಾದ ನಗುವಿನಲ್ಲಿದ್ದಿದ್ದ ಶಕ್ತಿ ಪರ್ವತದಷ್ಟು

ಮರೆಯದೆ.. ತೊರೆಯದೆ ಎದೆಗೊತ್ತಿ ಪ್ರೀತಿಸುವೆ

ಶೌರ್ಯನಲ್ಲಿ ನಾನಿನ್ನ ಬಿಗಿದಪ್ಪುವಷ್ಟು..

ಇದನ್ನೂ ಓದಿ: ಸ್ಪಂದನಾ ಅಗಲಿಕೆ ಹಿನ್ನೆಲೆ; ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ರಿಲೀಸ್ ದಿನಾಂಕ ಮುಂದಕ್ಕೆ

ವಿಜಯ್ ರಾಘವೇಂದ್ರ ಹಂಚಿಕೊಂಡಿರುವ ಈ ವಿಡಿಯೋ ನೋಡಿ ಫ್ಯಾನ್ಸ್​​ ಕೂಡ ಭಾವುಕರಾಗಿದ್ದಾರೆ. ಅವರು ಬಗೆಬಗೆಯಲ್ಲಿ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ. ವಿಜಯ್ ರಾಘವೇಂದ್ರ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಆಗಸ್ಟ್ 25ರಂದು ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿರುವುದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:19 pm, Sat, 26 August 23

ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ