‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ

VijayRaghavendra-SpandanaVijayRaghavendra Wedding Anniversary: ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. ಕೆಫೆ ಕಾಫಿ ಡೇದಲ್ಲಿ ಸ್ಪಂದನಾ ಅವರನ್ನು ವಿಜಯ್ ನೋಡಿದ್ದರು. ಮೊದಲ ನೋಟದಲ್ಲೇ ಅವರಿಗೆ ಸ್ಪಂದನಾ ಇಷ್ಟವಾದರು. ಇಬ್ಬರ ಮಧ್ಯೆ ಪರಿಚಯ ಬೆಳೆಯಿತು. ಪರಿಚಯ ಪ್ರೀತಿ ಆಯಿತು. ಇಬ್ಬರೂ 2007ರ ಆಗಸ್ಟ್ 26ರಂದು ಮದುವೆ ಆದರು.

‘ಮರೆಯದೆ ತೊರೆಯದೆ ಎದೆಗೊತ್ತಿ ಪ್ರೀತಿಸುವೆ’; ವಿವಾಹ ವಾರ್ಷಿಕೋತ್ಸವಕ್ಕೆ ಭಾವುಕ ವಿಡಿಯೋ ಹಂಚಿಕೊಂಡ ವಿಜಯ್ ರಾಘವೇಂದ್ರ
ವಿಜಯ್-ಶೌರ್ಯ-ಸ್ಪಂದನಾ
Follow us
|

Updated on:Aug 26, 2023 | 12:45 PM

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ (Spandana) ದಂಪತಿಗೆ ಇಂದು (ಆಗಸ್ಟ್ 26) ವಿವಾಹ ವಾರ್ಷಿಕೋತ್ಸವ. ಈ ವಿಶೇಷ ದಿನವನ್ನು ಇಬ್ಬರೂ ಸೆಲೆಬ್ರೇಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದರು. ಆದರೆ, ವಿಧಿಯ ಆಟ ಬೇರೆಯದೇ ಇತ್ತು. ಆಗಸ್ಟ್ 6ರಂದು ಸ್ಪಂದನಾ ಥೈಲ್ಯಾಂಡ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಈ ನೋವು ವಿಜಯ್ ರಾಘವೇಂದ್ರ (Vijay Raghavendra) ಅವರಿಗೆ ಎಂದಿಗೂ ಮರೆಯಾಗುವಂಥದ್ದಲ್ಲ. ವಿವಾಹ ವಾರ್ಷಿಕೋತ್ಸವ ಆಚರಿಸಲು ಪತ್ನಿಯೇ ಇಲ್ಲ ಎಂಬುದನ್ನು ನೆನೆದು ವಿಜಯ್​ಗೆ ಬೇಸರ ಆಗಿದೆ. ಅವರು ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. ಕೆಫೆ ಕಾಫಿ ಡೇದಲ್ಲಿ ಸ್ಪಂದನಾ ಅವರನ್ನು ವಿಜಯ್ ನೋಡಿದ್ದರು. ಮೊದಲ ನೋಟದಲ್ಲೇ ಅವರಿಗೆ ಸ್ಪಂದನಾ ಇಷ್ಟವಾದರು. ಬಳಿಕ ಧೈರ್ಯದಿಂದ ಅವರನ್ನು ಮಾತನಾಡಿಸಿದರು. ಇಬ್ಬರ ಮಧ್ಯೆ ಪರಿಚಯ ಬೆಳೆಯಿತು. ಪರಿಚಯ ಪ್ರೀತಿ ಆಯಿತು. ಬಳಿಕ ಕುಟುಂಬದವರ ಒಪ್ಪಿಗೆ ಪಡೆದ ಇಬ್ಬರೂ 2007ರ ಆಗಸ್ಟ್ 26ರಂದು ಮದುವೆ ಆದರು.

ಹಲವು ವರ್ಷಗಳ ಕಾಲ ವಿಜಯ್ ಹಾಗೂ ಸ್ಪಂದನಾ ಸಂಸಾರ ನಡೆಸಿದರು. ಇವರಿಗೆ ಶೌರ್ಯ ಹೆಸರಿನ ಮಗನಿದ್ದಾನೆ. ಹಾಯಾಗಿ ಸಂಸಾರ ನಡೆಸಿಕೊಂಡಿದ್ದ ವಿಜಯ್ ರಾಘವೇಂದ್ರ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ನೋವಿನಿಂದ ಅವರು ಸ್ಪಂದನಾ ಬಗ್ಗೆ ಭಾವುಕರಾಗಿ ಸಾಲುಗಳನ್ನು ಬರೆದು ಓದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

‘ಚಿನ್ನಾ.. ಇಣುಕು ನೋಟ ಬೀರಿ ಹೋದೆ ಬದುಕಿನ ಅಂಗಳದಲಿ

ಎಲ್ಲೆ ಮೀರಿ ಒಲವ ನೀಡಿದೆ ಎದೆಯ ಅಂತರಾಳದಲಿ

ಬದುಕನ್ನು ಕಟ್ಟಿ ಸರ್ವಸ್ವವಾದೆ

ಉಸಿರಲ್ಲಿ ಬೆರೆತು ಜೀವಂತವಾದೆ

ಮುದ್ದಾದ ನಗುವಿನಲ್ಲಿದ್ದಿದ್ದ ಶಕ್ತಿ ಪರ್ವತದಷ್ಟು

ಮರೆಯದೆ.. ತೊರೆಯದೆ ಎದೆಗೊತ್ತಿ ಪ್ರೀತಿಸುವೆ

ಶೌರ್ಯನಲ್ಲಿ ನಾನಿನ್ನ ಬಿಗಿದಪ್ಪುವಷ್ಟು..

ಇದನ್ನೂ ಓದಿ: ಸ್ಪಂದನಾ ಅಗಲಿಕೆ ಹಿನ್ನೆಲೆ; ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ರಿಲೀಸ್ ದಿನಾಂಕ ಮುಂದಕ್ಕೆ

ವಿಜಯ್ ರಾಘವೇಂದ್ರ ಹಂಚಿಕೊಂಡಿರುವ ಈ ವಿಡಿಯೋ ನೋಡಿ ಫ್ಯಾನ್ಸ್​​ ಕೂಡ ಭಾವುಕರಾಗಿದ್ದಾರೆ. ಅವರು ಬಗೆಬಗೆಯಲ್ಲಿ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ. ವಿಜಯ್ ರಾಘವೇಂದ್ರ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಆಗಸ್ಟ್ 25ರಂದು ರಿಲೀಸ್ ಆಗಬೇಕಿತ್ತು. ಆದರೆ, ವಿಜಯ್ ನೋವಿನಲ್ಲಿರುವುದರಿಂದ ಸಿನಿಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:19 pm, Sat, 26 August 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ