AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಘನಾ ಮಾತ್ರವಲ್ಲ, ನನ್ನ ಮನಸ್ಸಲ್ಲಿ ಯಾರಿಗೂ ಜಾಗ ಇಲ್ಲ’; ಎರಡನೇ ಮದುವೆ ಬಗ್ಗೆ ವಿಜಯ್ ರಾಘವೇಂದ್ರ ಸ್ಪಷ್ಟ ಮಾತು

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ನಿಧನದ ಬಳಿಕ ಮರುಮದುವೆ ಸುದ್ದಿಗಳನ್ನು ನಿರಾಕರಿಸಿದ್ದಾರೆ. ಮೇಘನಾ ರಾಜ್ ಅವರೊಂದಿಗಿನ ಅವರ ಸ್ನೇಹವನ್ನು ತಿರುಚಿ ಹಬ್ಬಿಸಲಾದ ಸುಳ್ಳು ಸುದ್ದಿಗಳಿಂದ ಅವರಿಗೆ ಬೇಸರವಾಗಿದೆ. ಈ ಸುದ್ದಿಗಳಿಂದ ಅವರ ಕುಟುಂಬದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದ್ದಾರೆ.

‘ಮೇಘನಾ ಮಾತ್ರವಲ್ಲ, ನನ್ನ ಮನಸ್ಸಲ್ಲಿ ಯಾರಿಗೂ ಜಾಗ ಇಲ್ಲ’; ಎರಡನೇ ಮದುವೆ ಬಗ್ಗೆ ವಿಜಯ್ ರಾಘವೇಂದ್ರ ಸ್ಪಷ್ಟ ಮಾತು
ಮೇಘನಾ-ವಿಜಯ್
ರಾಜೇಶ್ ದುಗ್ಗುಮನೆ
|

Updated on:Jul 17, 2025 | 8:56 AM

Share

‘ಚಿನ್ನಾರಿ ಮುತ್ತ’ ವಿಜಯ್ ರಾಘವೇಂದ್ರ (Vijay Raghavendra) ಅವರು ಪತ್ನಿಯನ್ನು ಕಳೆದುಕೊಂಡಿದ್ದಾರೆ. ಸ್ಪಂದನಾ ಅವರು 2023ರ ಆಗಸ್ಟ್​ನಲ್ಲಿ ಥೈಲ್ಯಾಂಡ್​ನ ಬ್ಯಾಂಕಾಕ್​ನಲ್ಲಿ ನಿಧನ ಹೊಂದಿದರು. ಇದಾದ ಬಳಿಕ ಅವರ ಎರಡನೇ ಮದುವೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಅವರ ಹೆಸರು ಹೆಚ್ಚು ತಳುಕು ಹಾಕಿಕೊಂಡಿದ್ದು ಮೇಘನಾ ರಾಜ್ ಜೊತೆ. ಈ ವಿಚಾರಗಳ ಬಗ್ಗೆ ವಿಜಯ್ ರಾಘವೇಂದ್ರ ಅವರು ಒಲ್ಲದ ಮನಸ್ಸಿನಿಂದ ಸ್ಪಷ್ಟೀಕರಣ ನೀಡಿದ್ದಾರೆ.

ಮೇಘನಾ ರಾಜ್ ಹಾಗೂ ವಿಜಯ್ ರಾಘವೇಂದ್ರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಮೇಘನಾ ಅವರ ಪತಿ ಚಿರಂಜೀವಿ ಸರ್ಜಾ ಈ ಮೊದಲು ನಿಧನ ಹೊಂದಿದ್ದರು. ಈ ಕಾರಣದಿಂದಲೇ ಕೆಲ ಫ್ಯಾನ್ಸ್ ಇವರಿಬ್ಬರೂ ಮದುವೆ ಆದರೆ ಚೆನ್ನಾಗಿರುತ್ತದೆ ಎಂದುಕೊಂಡರು. ಕೆಲ ಯೂಟ್ಯೂಬರ್​ಗಳು ಕೆಳ ಹಂತಕ್ಕೆ ಹೋಗಿ ಮೇಘನಾ ಹಾಗೂ ವಿಜಯ್ ವಿವಾಹ ಆಗುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಈ ವಿಚಾರ ವಿಜಯ್​ಗೆ ಬೇಸರ ಮೂಡಿಸಿದೆ. ಅವರು ಎರಡನೇ ಮದುವೆ ಆಲೋನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ
Image
ನಯನತಾರ ಜೊತೆ ಚಿರಂಜೀವಿ ರೊಮ್ಯಾನ್ಸ್ ; 29 ವರ್ಷ ವಯಸ್ಸಿನ ಅಂತರ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 
Image
ಪವನ್ ಕಲ್ಯಾಣ್ ಚಿತ್ರ ‘ಹರಿ ಹರ ವೀರ ಮಲ್ಲು’ಗೆ ಶುರುವಾಗಿದೆ ಕರ್ನಾಟಕದ ಭಯ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್

ವಿಜಯ್ ಆಡಿದ ಮಾತು..

‘ಫಸ್ಟ್​ ಡೇ ಫಸ್ಟ್ ಶೋ’ ಯೂಟ್ಯೂಬ್ ಚಾನೆಲ್​ಗೆ ಮಾತನಾಡಿದ ವಿಜಯ್, ‘ಸ್ಪಷ್ಟೀಕರಣ ಕೊಡಲು ಹಿಂಸೆ ಆಗುತ್ತದೆ, ಕೋಪವೂ ಬರುತ್ತದೆ. ಇವರು ಇನ್ನು ಮುಂದೆ ಹೇಗೆ ಇರುತ್ತಾರೋ ಎಂಬ ಕಾಳಜಿಯಲ್ಲಿ ಪ್ರೀತಿ ತೋರಿಸುತ್ತಾರೆ. ಇದು ಸುದ್ದಿ ಆಗಿ ಹಬ್ಬಿದಾಗ ಕುಟುಂಬಗಳ ಮೇಲೆ ಪ್ರಭಾವ ಬೀರುತ್ತದೆ. ನನಗೆ ಮಗ ಇದ್ದಾನೆ. ನಾನು ಎರಡನೇ ಮದುವೆ ಬಗ್ಗೆ ಮಾತನಾಡಲ್ಲ. ಅದರ ಹಿಂದೆ ಯಾವುದೇ ಸತ್ಯ ಇಲ್ಲ. ಮೇಘನಾ ಆಗಲಿ, ಇನ್ಯಾರದ್ದೇ ಹೆಸರು ಇರಲಿ ಅದು ನಡೆಯೋದಿಲ್ಲ. ನನ್ನ ಬದಕಲ್ಲಿ ಇನ್ನೊಬ್ಬರನ್ನು ಬರಮಾಡಿಕೊಳ್ಳೋದು ಆಗದ ಕೆಲಸ’ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ವೀರಗಾಸೆ ವೇಷದಲ್ಲಿ ವಿಜಯ್ ರಾಘವೇಂದ್ರ: ‘ರುದ್ರಾಭಿಷೇಕಂ’ ಅದ್ಧೂರಿ ಕ್ಲೈಮ್ಯಾಕ್ಸ್

ಸ್ಪಂದನಾ ನಿಧನ ಹೊಂದಿದಾಗ ವಿಜಯ್ ಅವರು ಸಾಕಷ್ಟು ಬೇಸರಗೊಂಡರು. ಆ ಬಳಿಕ ಅವರು ನಿಧಾನವಾಗಿ ನೋವನ್ನು ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇವುಗಳ ಮಧ್ಯೆಯೂ ಈ ರೀತಿಯ ಸುದ್ದಿಗಳು ಬಂದಾಗ ಅವರಿಗೆ ಬೇಸರ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Thu, 17 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು