AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೆಂದೂ ನಿನ್ನವ, ಕೇವಲ ನಿನ್ನವ..’; ಸ್ಪಂದನಾ ಬಗ್ಗೆ ಭಾವುಕ ಸಾಲುಗಳನ್ನು ಹೇಳಿದ ವಿಜಯ್ ರಾಘವೇಂದ್ರ

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಪ್ರೀತಿಸಿ ಮದುವೆ ಆದವರು. ಅವರು ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟರು. ಮೊದಲ ಬಾರಿಗೆ ಪತ್ನಿ ಕುರಿತು ಅವರು ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ.

‘ನಾನೆಂದೂ ನಿನ್ನವ, ಕೇವಲ ನಿನ್ನವ..’; ಸ್ಪಂದನಾ ಬಗ್ಗೆ ಭಾವುಕ ಸಾಲುಗಳನ್ನು ಹೇಳಿದ ವಿಜಯ್ ರಾಘವೇಂದ್ರ
ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on:Aug 18, 2023 | 10:49 AM

Share

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಮೃತಪಟ್ಟು ಇಂದಿಗೆ (ಆಗಸ್ಟ್ 18) 13 ದಿನಗಳು ಕಳೆದಿವೆ. ಅವರು ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳೋಕೆ ಕುಟುಂಬದವರ ಬಳಿ ಇಂದಿಗೂ ಸಾಧ್ಯವಾಗುತ್ತಿಲ್ಲ. ಸ್ಪಂದನಾ ತಂದೆ ಶಿವರಾಂ, ಪತಿ ವಿಜಯ್ ರಾಘವೇಂದ್ರ, ಮಗ ಶೌರ್ಯ ಹೀಗೆ ಕುಟುಂಬದ ಎಲ್ಲಾ ಸದಸ್ಯರು ದುಃಖದಲ್ಲಿದ್ದಾರೆ. ಪತ್ನಿಯನ್ನು ಕಳೆದುಕೊಂಡ ಬಳಿಕ ವಿಜಯ್ ರಾಘವೇಂದ್ರ (Vijay Raghavendra) ಅವರು ಸೈಲೆಂಟ್ ಆಗಿದ್ದರು. ಈಗ ಇದೇ ಮೊದಲ ಬಾರಿಗೆ ಅವರು ಈ ಬಗ್ಗೆ ಮೌನ ಮುರಿದ್ದಾರೆ. ಪತ್ನಿಯ ಬಗ್ಗೆ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಪ್ರೀತಿಸಿ ಮದುವೆ ಆದವರು. ಅವರು ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟರು. ಆ ನೋವಿನಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಮೊದಲ ಬಾರಿಗೆ ಪತ್ನಿ ಕುರಿತು ಅವರು ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ಪಂದನಾ ವಿಜಯ್ 11ನೇ ದಿನದ ಕಾರ್ಯದಲ್ಲಿ ಸುಮಾರು 4 ಸಾವಿರ ಜನ ಭಾಗಿಯಾಗುವ ನಿರೀಕ್ಷೆ, 75 ಬಾಣಸಿಗರಿಂದ ಅಡುಗೆ ತಯಾರಿ

ಸ್ಪಂದನ.. ಹೆಸರಿಗೆ ತಕ್ಕ ಜೀವ.. ಉಸಿರಿಗೆ ತಕ್ಕ ಭಾವ

ಅಳತೆಗೆ ತಕ್ಕ ನುಡಿ.. ಬದುಕಿಗೆ ತಕ್ಕ ನಡೆ

ನಮಗೆಂದೇ ಮಿಡಿದ ನಿನ್ನ ಹೃದಯವ.. ನಿಲ್ಲದು ನಿನ್ನೊಂದಿಗಿನ ಕಲರವ

ನಾನೆಂದೂ ನಿನ್ನವ.. ಕೇವಲ ನಿನ್ನವ..

ಹೀಗೆ ವಿಜಯ್ ರಾಘವೇಂದ್ರ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ. ಅವರ ಧ್ವನಿಯಲ್ಲಿ ನೋವು ಕಾಣಿಸಿದೆ.

ಆಗಸ್ಟ್ 6ರಂದು ಸ್ಪಂದನಾ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಆಗಸ್ಟ್ 16ರಂದು ಸ್ಪಂದನಾ ಅವರ 11ನೇ ದಿನದ ಕಾರ್ಯ ನಡೆದಿದೆ. ಮಲ್ಲೇಶ್ವರದ ಕಬಡ್ಡಿ ಗ್ರೌಂಡ್​ನಲ್ಲಿ ಸಾರ್ವಜನಿಕರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸ್ಪಂದನಾ ತಂದೆ ಶಿವರಾಂ ಮನೆಯಲ್ಲಿ ಶಾಂತಿ ಹೋಮ ನಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:15 am, Fri, 18 August 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ