Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೆಂದೂ ನಿನ್ನವ, ಕೇವಲ ನಿನ್ನವ..’; ಸ್ಪಂದನಾ ಬಗ್ಗೆ ಭಾವುಕ ಸಾಲುಗಳನ್ನು ಹೇಳಿದ ವಿಜಯ್ ರಾಘವೇಂದ್ರ

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಪ್ರೀತಿಸಿ ಮದುವೆ ಆದವರು. ಅವರು ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟರು. ಮೊದಲ ಬಾರಿಗೆ ಪತ್ನಿ ಕುರಿತು ಅವರು ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ.

‘ನಾನೆಂದೂ ನಿನ್ನವ, ಕೇವಲ ನಿನ್ನವ..’; ಸ್ಪಂದನಾ ಬಗ್ಗೆ ಭಾವುಕ ಸಾಲುಗಳನ್ನು ಹೇಳಿದ ವಿಜಯ್ ರಾಘವೇಂದ್ರ
ಸ್ಪಂದನಾ
Follow us
ರಾಜೇಶ್ ದುಗ್ಗುಮನೆ
|

Updated on:Aug 18, 2023 | 10:49 AM

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಮೃತಪಟ್ಟು ಇಂದಿಗೆ (ಆಗಸ್ಟ್ 18) 13 ದಿನಗಳು ಕಳೆದಿವೆ. ಅವರು ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳೋಕೆ ಕುಟುಂಬದವರ ಬಳಿ ಇಂದಿಗೂ ಸಾಧ್ಯವಾಗುತ್ತಿಲ್ಲ. ಸ್ಪಂದನಾ ತಂದೆ ಶಿವರಾಂ, ಪತಿ ವಿಜಯ್ ರಾಘವೇಂದ್ರ, ಮಗ ಶೌರ್ಯ ಹೀಗೆ ಕುಟುಂಬದ ಎಲ್ಲಾ ಸದಸ್ಯರು ದುಃಖದಲ್ಲಿದ್ದಾರೆ. ಪತ್ನಿಯನ್ನು ಕಳೆದುಕೊಂಡ ಬಳಿಕ ವಿಜಯ್ ರಾಘವೇಂದ್ರ (Vijay Raghavendra) ಅವರು ಸೈಲೆಂಟ್ ಆಗಿದ್ದರು. ಈಗ ಇದೇ ಮೊದಲ ಬಾರಿಗೆ ಅವರು ಈ ಬಗ್ಗೆ ಮೌನ ಮುರಿದ್ದಾರೆ. ಪತ್ನಿಯ ಬಗ್ಗೆ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಪ್ರೀತಿಸಿ ಮದುವೆ ಆದವರು. ಅವರು ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟರು. ಆ ನೋವಿನಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಮೊದಲ ಬಾರಿಗೆ ಪತ್ನಿ ಕುರಿತು ಅವರು ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ಪಂದನಾ ವಿಜಯ್ 11ನೇ ದಿನದ ಕಾರ್ಯದಲ್ಲಿ ಸುಮಾರು 4 ಸಾವಿರ ಜನ ಭಾಗಿಯಾಗುವ ನಿರೀಕ್ಷೆ, 75 ಬಾಣಸಿಗರಿಂದ ಅಡುಗೆ ತಯಾರಿ

ಸ್ಪಂದನ.. ಹೆಸರಿಗೆ ತಕ್ಕ ಜೀವ.. ಉಸಿರಿಗೆ ತಕ್ಕ ಭಾವ

ಅಳತೆಗೆ ತಕ್ಕ ನುಡಿ.. ಬದುಕಿಗೆ ತಕ್ಕ ನಡೆ

ನಮಗೆಂದೇ ಮಿಡಿದ ನಿನ್ನ ಹೃದಯವ.. ನಿಲ್ಲದು ನಿನ್ನೊಂದಿಗಿನ ಕಲರವ

ನಾನೆಂದೂ ನಿನ್ನವ.. ಕೇವಲ ನಿನ್ನವ..

ಹೀಗೆ ವಿಜಯ್ ರಾಘವೇಂದ್ರ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ. ಅವರ ಧ್ವನಿಯಲ್ಲಿ ನೋವು ಕಾಣಿಸಿದೆ.

ಆಗಸ್ಟ್ 6ರಂದು ಸ್ಪಂದನಾ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಆಗಸ್ಟ್ 16ರಂದು ಸ್ಪಂದನಾ ಅವರ 11ನೇ ದಿನದ ಕಾರ್ಯ ನಡೆದಿದೆ. ಮಲ್ಲೇಶ್ವರದ ಕಬಡ್ಡಿ ಗ್ರೌಂಡ್​ನಲ್ಲಿ ಸಾರ್ವಜನಿಕರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸ್ಪಂದನಾ ತಂದೆ ಶಿವರಾಂ ಮನೆಯಲ್ಲಿ ಶಾಂತಿ ಹೋಮ ನಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:15 am, Fri, 18 August 23

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ