AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೆಂದೂ ನಿನ್ನವ, ಕೇವಲ ನಿನ್ನವ..’; ಸ್ಪಂದನಾ ಬಗ್ಗೆ ಭಾವುಕ ಸಾಲುಗಳನ್ನು ಹೇಳಿದ ವಿಜಯ್ ರಾಘವೇಂದ್ರ

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಪ್ರೀತಿಸಿ ಮದುವೆ ಆದವರು. ಅವರು ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟರು. ಮೊದಲ ಬಾರಿಗೆ ಪತ್ನಿ ಕುರಿತು ಅವರು ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ.

‘ನಾನೆಂದೂ ನಿನ್ನವ, ಕೇವಲ ನಿನ್ನವ..’; ಸ್ಪಂದನಾ ಬಗ್ಗೆ ಭಾವುಕ ಸಾಲುಗಳನ್ನು ಹೇಳಿದ ವಿಜಯ್ ರಾಘವೇಂದ್ರ
ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on:Aug 18, 2023 | 10:49 AM

Share

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಮೃತಪಟ್ಟು ಇಂದಿಗೆ (ಆಗಸ್ಟ್ 18) 13 ದಿನಗಳು ಕಳೆದಿವೆ. ಅವರು ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳೋಕೆ ಕುಟುಂಬದವರ ಬಳಿ ಇಂದಿಗೂ ಸಾಧ್ಯವಾಗುತ್ತಿಲ್ಲ. ಸ್ಪಂದನಾ ತಂದೆ ಶಿವರಾಂ, ಪತಿ ವಿಜಯ್ ರಾಘವೇಂದ್ರ, ಮಗ ಶೌರ್ಯ ಹೀಗೆ ಕುಟುಂಬದ ಎಲ್ಲಾ ಸದಸ್ಯರು ದುಃಖದಲ್ಲಿದ್ದಾರೆ. ಪತ್ನಿಯನ್ನು ಕಳೆದುಕೊಂಡ ಬಳಿಕ ವಿಜಯ್ ರಾಘವೇಂದ್ರ (Vijay Raghavendra) ಅವರು ಸೈಲೆಂಟ್ ಆಗಿದ್ದರು. ಈಗ ಇದೇ ಮೊದಲ ಬಾರಿಗೆ ಅವರು ಈ ಬಗ್ಗೆ ಮೌನ ಮುರಿದ್ದಾರೆ. ಪತ್ನಿಯ ಬಗ್ಗೆ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ.

ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾ ಪ್ರೀತಿಸಿ ಮದುವೆ ಆದವರು. ಅವರು ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟರು. ಆ ನೋವಿನಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಮೊದಲ ಬಾರಿಗೆ ಪತ್ನಿ ಕುರಿತು ಅವರು ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ಪಂದನಾ ವಿಜಯ್ 11ನೇ ದಿನದ ಕಾರ್ಯದಲ್ಲಿ ಸುಮಾರು 4 ಸಾವಿರ ಜನ ಭಾಗಿಯಾಗುವ ನಿರೀಕ್ಷೆ, 75 ಬಾಣಸಿಗರಿಂದ ಅಡುಗೆ ತಯಾರಿ

ಸ್ಪಂದನ.. ಹೆಸರಿಗೆ ತಕ್ಕ ಜೀವ.. ಉಸಿರಿಗೆ ತಕ್ಕ ಭಾವ

ಅಳತೆಗೆ ತಕ್ಕ ನುಡಿ.. ಬದುಕಿಗೆ ತಕ್ಕ ನಡೆ

ನಮಗೆಂದೇ ಮಿಡಿದ ನಿನ್ನ ಹೃದಯವ.. ನಿಲ್ಲದು ನಿನ್ನೊಂದಿಗಿನ ಕಲರವ

ನಾನೆಂದೂ ನಿನ್ನವ.. ಕೇವಲ ನಿನ್ನವ..

ಹೀಗೆ ವಿಜಯ್ ರಾಘವೇಂದ್ರ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ. ಅವರ ಧ್ವನಿಯಲ್ಲಿ ನೋವು ಕಾಣಿಸಿದೆ.

ಆಗಸ್ಟ್ 6ರಂದು ಸ್ಪಂದನಾ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಆಗಸ್ಟ್ 16ರಂದು ಸ್ಪಂದನಾ ಅವರ 11ನೇ ದಿನದ ಕಾರ್ಯ ನಡೆದಿದೆ. ಮಲ್ಲೇಶ್ವರದ ಕಬಡ್ಡಿ ಗ್ರೌಂಡ್​ನಲ್ಲಿ ಸಾರ್ವಜನಿಕರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸ್ಪಂದನಾ ತಂದೆ ಶಿವರಾಂ ಮನೆಯಲ್ಲಿ ಶಾಂತಿ ಹೋಮ ನಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:15 am, Fri, 18 August 23

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?