AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾನ್’ ನಾಯಕನಾಗಿ ವಿಜಯ್ ರಾಘವೇಂದ್ರ, ಶುಭ ಕೋರಿದ ಶಿವಣ್ಣ

Vijay Raghavendra: ನಟ ವಿಜಯ್ ರಾಘವೇಂದ್ರ ಒಂದರ ಹಿಂದೊಂದರಂತೆ ಭಿನ್ನ ಕತೆಗಳುಳ್ಳ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಅವರ ನಟನೆಯ ಹೊಸ ಸಿನಿಮಾ ‘ಮಹಾನ್’ ಸೆಟ್ಟೇರುತ್ತಿದೆ. ಸಿನಿಮಾದ ಟೈಟಲ್ ಅನ್ನು ಇತ್ತೀಚೆಗಷ್ಟೆ ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಮಹಾನ್’ ನಾಯಕನಾಗಿ ವಿಜಯ್ ರಾಘವೇಂದ್ರ, ಶುಭ ಕೋರಿದ ಶಿವಣ್ಣ
Mahan Movie
ಮಂಜುನಾಥ ಸಿ.
|

Updated on: Apr 03, 2025 | 3:24 PM

Share

ನಟ ವಿಜಯ್ ರಾಘವೇಂದ್ರ ಒಂದರ ಹಿಂದೊಂದು ಭಿನ್ನ ಕತೆಗಳ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ‘ರುದ್ರಾಭಿಷೇಕಂ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಅದರ ಬೆನ್ನಲ್ಲೆ ಇದೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ರುದ್ರಾಭಿಷೇಕಂ’ ಹಳ್ಳಿ ಸೊಗಡಿನ, ಜನಪದ ಕತೆಯುಳ್ಳ ಥ್ರಿಲ್ಲರ್ ಸಿನಿಮಾ ಆಗಿದ್ದರೆ ಈಗ ‘ಮಹಾನ್’ ಎಂಬ ಭಿನ್ನ ಕತೆಯ ಸಿನಿಮಾ ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೆ ನಟ ಶಿವರಾಜ್ ಕುಮಾರ್ ಅವರು ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾಕ್ಕೆ ಶುಭ ಕೋರಿದ್ದಾರೆ.

ಕನ್ನಡದಲ್ಲಿ ಈಗಾಗಲೇ ಉತ್ತಮ ಸಿನಿಮಾ ನಿರ್ದೇಶಿಸಿರುವ ಪಿಸಿ ಶೇಖರ್ ನಿರ್ದೇಶನ ಮಾಡುತ್ತಿರುವ ಸಿನಿಮಾ ‘ಮಹಾನ್’ ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗಷ್ಟೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದ್ದಾರೆ.

‘ಮಹಾನ್’ ಸಿನಿಮಾ ರೈತರ ಕುರಿತಾದ ಕತೆಯನ್ನು ಒಳಗೊಂಡಿದೆ. ವಿಜಯ್ ರಾಘವೇಂದ್ರ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಮಹಾನ್’ ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥ ಇದೆ. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಹಾಗಾಗಿ ನಮ್ಮ ಸಿನಿಮಾಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಶೀಘ್ರದಲ್ಲಿಯೇ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಪಿ.ಸಿ ಶೇಖರ್ ಹೇಳಿದ್ದಾರೆ.

ಇದನ್ನೂ ಓದಿ
Image
ಐಶಾರಾಮಿ ಕಾರು ಖರೀದಿ ಮಾಡಿದ ರಶ್ಮಿಕಾ ಮಂದಣ್ಣ, ಬೆಲೆ ಎಷ್ಟು ಕೋಟಿ?
Image
‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಮುಂದೂಡಿದ ಮಂಚು ಮನೋಜ್, ಯಾವುದರ ಭಯ?
Image
ರಶ್ಮಿಕಾಗೆ ಹಿಂದಿ ಕಲಿಯಲು ಆಗಲ್ಲ, ಕಾರಣ ಹೇಳಿದ ಸಲ್ಮಾನ್ ಖಾನ್
Image
ಎಲ್ 2:ಎಂಪುರಾನ್ ಕಲೆಕ್ಷನ್, ಮೂರೇ ದಿನಕ್ಕೆ ಹಳೆ ದಾಖಲೆಗಳು ಉಡೀಸ್

ಇದನ್ನೂ ಓದಿ:ಶೂಟಿಂಗ್ ಮುಗಿಸಿದ ‘ರುದ್ರಾಭಿಷೇಕಂ’, ವಿಭಿನ್ನ ಪಾತ್ರದಲ್ಲಿ ವಿಜಯ್ ರಾಘವೇಂದ್ರ

ನಿರ್ಮಾಪಕ ಪ್ರಕಾಶ್ ಮಾತನಾಡಿ, ‘ಮಹಾನ್’ ಸಿನಿಮಾ ನಮ್ಮ ಭೂಮಿಯ, ನಮ್ಮ ರೈತರ, ಅವರ ಹೋರಾಟದ ಕತೆಯನ್ನು ಪ್ರತಿಬಿಂಬಿಸುತ್ತದೆ. ‘ಮಹಾನ್’ ಕೇವಲ ಸಿನಿಮಾ ಮಾತ್ರವೇ ಅಲ್ಲ, ಇದು ನಾವು ನಮ್ಮ ರೈತರಿಗೆ ನೀಡುವ ಗೌರವ. ನಮ್ಮ ನಿರ್ದೇಶಕ ಪಿಸಿ ಶೇಖರ್ ಅವರ ಕಲ್ಪನಾಶಕ್ತಿ ಹಾಗೂ ಕಥಾನಾಯಕತ್ವ ಈ ಚಿತ್ರದ ಶಕ್ತಿ ಮತ್ತು ನಮ್ಮ ಚಿತ್ರದ ನಾಯಕ ‘ಚಿನ್ನಾರಿ ಮುತ್ತ’ ವಿಜಯ್ ರಾಘವೇಂದ್ರ, ಈ ಪಾತ್ರಕ್ಕೆ ಇವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇರಲಾರರು. ಅವರ ಅಭಿನಯ, ಅವರ ಕನ್ನಡಿಗರ ಜೊತೆಗೆ ಇರುವ ಆತ್ಮೀಯತೆಯು ಈ ಪಾತ್ರಕ್ಕೆ ಜೀವ ತುಂಬಲಿದೆ ಎಂದು ನಿರ್ಮಾಪಕ ಪ್ರಕಾಶ್ ತಿಳಿಸಿದ್ದಾರೆ.

ವಿಜಯ್ ರಾಘವೇಂದ್ರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಎಫ್​ಐಆರ್ 6 ಟು 6’, ‘ರಿಪ್ಪನ್ ಸ್ವಾಮಿ’, ‘ರುದ್ರಾಭಿಷೇಕಂ’ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಒಂದಕ್ಕಿಂತಲೂ ಒಂದು ಭಿನ್ನವಾದ ಕತೆಗಳಲ್ಲಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ