AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

O Manase: ‘ಓ ಮನಸೇ’ ಚಿತ್ರದ ಆಡಿಯೋ ರಿಲೀಸ್​; ವಿಜಯ್​ ರಾಘವೇಂದ್ರ ಸಿನಿಮಾದಲ್ಲಿ ತ್ರಿಕೋನ ಪ್ರೇಮಕಥೆ

Vijay Raghavendra | O Manase Movie: ವಿಜಯ್​ ರಾಘವೇಂದ್ರ ಅವರು ‘ಓ ಮನಸೇ' ಸಿನಿಮಾದಲ್ಲಿ ಪೊಲೀಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಟ್ರೇಲರ್​ ಬಳಿಕ ಈಗ ಈ ಚಿತ್ರದ ಹಾಡುಗಳು ಗಮನ ಸೆಳೆಯುತ್ತಿವೆ.

O Manase: ‘ಓ ಮನಸೇ’ ಚಿತ್ರದ ಆಡಿಯೋ ರಿಲೀಸ್​; ವಿಜಯ್​ ರಾಘವೇಂದ್ರ ಸಿನಿಮಾದಲ್ಲಿ ತ್ರಿಕೋನ ಪ್ರೇಮಕಥೆ
ವಿಜಯ್ ರಾಘವೇಂದ್ರ, ಸಂಚಿತಾ ಪಡುಕೋಣೆ, ಧರ್ಮ ಕೀರ್ತಿರಾಜ್
ಮದನ್​ ಕುಮಾರ್​
|

Updated on: Jan 31, 2023 | 4:58 PM

Share

ವಿಜಯ ರಾಘವೇಂದ್ರ (Vijay Raghavendra), ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಅವರು ನಟಿಸಿರುವ ‘ಓ ಮನಸೇ’ ಸಿನಿಮಾದ ಆಡಿಯೋ ಬಿಡುಗಡೆ ಮಾಡಲಾಗಿದೆ. ‘A2 ಮ್ಯೂಸಿಕ್‌’ ಮೂಲಕ ಹೊರಬಂದಿರುವ ಹಾಡುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ, ನಟಿ ಶಾನ್ವಿ ಶ್ರೀವಾತ್ಸವ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಅಣಜಿ ನಾಗರಾಜ್, ಪುಟ್ಟಣ್ಣ ಮುಂತಾದವರು ಅಥಿತಿಗಳಾಗಿ ಆಗಮಿಸಿದ್ದರು. ಕವಿರಾಜ್, ವಿ. ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜನೆ ಮಾಡಿದ್ದಾರೆ. 2 ಗೀತೆಗಳನ್ನು ಥೈಲ್ಯಾಂಡ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ‘ಓ ಮನಸೇ’ (O Manase Movie) ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿವೆ.

‘ಶ್ರೀ ಫ್ರೆಂಡ್ಸ್ ಮೂವೀ ಮೇಕರ್ಸ್’ ಬ್ಯಾನರ್​ ಮೂಲಕ ಎಂ.ಎನ್. ಭೈರೆಗೌಡ, ಕೆ.ಹೆಚ್. ಧನಂಜಯ, ಕೆ. ವೆಂಕಟೇಶ್, ಸು.ಕಾ. ರಾಮು, ಯುವರಾಜ್ ಕೆ.ಎ. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ಗೆ ಜನಮೆಚ್ಚುಗೆ ಸಿಕ್ಕಿರುವುದು ನಿರ್ಮಾಪಕರಿಗೆ ಖುಷಿ ನೀಡಿದೆ. ಹಾಡುಗಳು ಕೂಡ ಈಗ ಗಮನ ಸೆಳೆಯುತ್ತಿವೆ.

ಇದನ್ನೂ ಓದಿ: ‘ಸರ್ಕಾರದ ನಿರ್ಧಾರಗಳ ಹಿಂದೆ ಒಂದು ಅರ್ಥ ಇರುತ್ತದೆ’; ವಿಜಯ್​ ರಾಘವೇಂದ್ರ

ಇದನ್ನೂ ಓದಿ
Image
ಮುಂಬೈನಲ್ಲಿ ಒಟ್ಟಾಗಿ ಪಾರ್ಟಿ ಮಾಡಿದ ರಶ್ಮಿಕಾ ಮಂದಣ್ಣ-ಸಿದ್ದಾರ್ಥ್ ಮಲ್ಹೋತ್ರ​; ಫೋಟೋ ವೈರಲ್
Image
Swetha Changappa: ಕಿರುತೆರೆಯಲ್ಲಿ 20 ವರ್ಷ ಪೂರೈಸಿದ ಶ್ವೇತಾ ಚಂಗಪ್ಪ; ಸಿನಿಮಾದಲ್ಲೂ ನಟಿಯ ಯಶಸ್ವಿ ಪಯಣ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Rajamouli: ಹಾಲಿವುಡ್​ನಲ್ಲಿ ಸಿನಿಮಾ ಮಾಡಲು ರಾಜಮೌಳಿಗೆ ‘ಅವತಾರ್​’ ನಿರ್ದೇಶಕನಿಂದ ಆಹ್ವಾನ

ಉಮೇಶ್ ಗೌಡ ಅವರು ‘ಓ ಮನಸೇ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ತ್ರಿಕೋನ ಪ್ರೇಮಕಥೆ ಇದೆ. ನೈಜ ಘಟನೆ ಆಧರಿಸಿ ಈ ಚಿತ್ರ ಮೂಡಿಬಂದಿದೆ ಎಂಬುದು ವಿಶೇಷ. ಈ ಸಿನಿಮಾದಲ್ಲಿ ನಟಿಸಿದ್ದಕ್ಕೆ ತುಂಬ ಖುಷಿ ಇದೆ ಎಂದಿದ್ದಾರೆ ನಾಯಕಿ ಸಂಚಿತಾ ಪಡುಕೋಣೆ. ನಟ ಧರ್ಮ ಕೀರ್ತಿರಾಜ್​ ಅವರು ಲವರ್​ ಬಾಯ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಕೊರೊನಾ ಸಮಯದಲ್ಲಿ ನನಗೆ ಈ ಸಿನಿಮಾ ಸಿಕ್ಕಿದ್ದು, ಇದನ್ನು ನನ್ನ ಕಮ್ ಬ್ಯಾಕ್ ಚಿತ್ರ ಎನ್ನಬಹುದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಶ್ವಿನಿ, ತಾರಾ ಅನುರಾಧಾ, ವಿಜಯ್​ ಕಿರಗಂದೂರು ಅವರಿಗೆ ‘ರಾಘವೇಂದ್ರ ಚಿತ್ರವಾಣಿ’ ವಿಶೇಷ ಪ್ರಶಸ್ತಿ

ವಿಜಯ್​ ರಾಘವೇಂದ್ರ ಅವರು ಈ ಸಿನಿಮಾದಲ್ಲಿ ಪೊಲೀಸ್​ ಅಧಿಕಾರಿಯ ಪಾತ್ರ ಮಾಡಿದ್ದಾರೆ. ‘ಸಿನಿಮಾ ಪ್ರಚಾರದಲ್ಲಿ ಆಡಿಯೋ ಬಿಡುಗಡೆ ಎಂಬುದು ಬಹಳ ಮುಖ್ಯವಾದ ಹಂತ. ಸಿನಿಮಾ ಮಾಡೋದು ಮುಖ್ಯವಲ್ಲ, ಅದನ್ನು ಜನರಿಗೆ ತಲುಪಿಸುವುದು ಮುಖ್ಯ. ನಿರ್ಮಾಪಕರು ಒಳ್ಳೆಯ ಪ್ರಯತ್ನ ಮಾಡಿದ್ದಾರೆ. ಚಿತ್ರದಲ್ಲಿ ಕಾಮಿಡಿ, ಆ್ಯಕ್ಷನ್, ಲವ್ ಮುಂತಾದ ಎಲ್ಲಾ ಅಂಶಗಳು ಇವೆ. ಹಾಗಾಗಿ ನನಗೆ ಈ ಸಿನಿಮಾ ಸ್ಪೆಷಲ್’ ಎಂದಿದ್ದಾರೆ ವಿಜಯ್​ ರಾಘವೇಂದ್ರ.

ಇದನ್ನೂ ಓದಿ: ‘ಗಂಧದ ಗುಡಿ’ ಬಗ್ಗೆ ಪುನೀತ್ ಏನು ಹೇಳಿದ್ದರು? ವಿಜಯ್ ರಾಘವೇಂದ್ರ ವಿವರಿಸಿದ್ದು ಹೀಗೆ

ಬಂಡೆ ಚಂದ್ರು, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಎಂ.ಆರ್. ಸೀನು ಛಾಯಾಗ್ರಹಣ, ಶ್ರೀನಿವಾಸ್ ಬಾಬು ಸಂಕಲನ ಹಾಗೂ ಧನಂಜಯ ನೃತ್ಯ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು