AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ರಾಘವೇಂದ್ರ ‘ರುದ್ರಾಭಿಷೇಕಂ’ ಹಾಡು ಬಿಡುಗಡೆ: ಗಮನ ಸೆಳೆದ ‘ನವರತ್ನ’ಗಳು

Rudrabhishekam Kannada movie: ವಿಜಯ್ ರಾಘವೇಂದ್ರ ನಟಿಸಿರುವ ಭಿನ್ನ ಕತೆಯುಳ್ಳ ‘ರುದ್ರಾಭಿಷೇಕಂ’ ಸಿನಿಮಾದ ಹಾಡೊಂದು ಇಂದು ಬಿಡುಗಡೆ ಆಯ್ತು. ಆಡಿಯೋ ಲಾಂಚ್​​ನಲ್ಲಿ ಸಿನಿಮಾದ ನಿರ್ಮಾಪಕರುಗಳು ಗಮನ ಸೆಳೆದರು. ಒಂಬತ್ತು ಮಂದಿ ಕೃಷಿಕ ಗೆಳೆಯರು ಸೇರಿಕೊಂಡು ನಿರ್ಮಾಣ ಮಾಡುತ್ತಿರುವ ವಿಶಿಷ್ಟವಾದ ಸಿನಿಮಾ ಇದಾಗಿದೆ. ಮಾಹಿತಿ ಇಲ್ಲಿದೆ...

ವಿಜಯ್ ರಾಘವೇಂದ್ರ ‘ರುದ್ರಾಭಿಷೇಕಂ’ ಹಾಡು ಬಿಡುಗಡೆ: ಗಮನ ಸೆಳೆದ ‘ನವರತ್ನ’ಗಳು
Rudrabishekam
ಮಂಜುನಾಥ ಸಿ.
|

Updated on: May 09, 2026 | 8:12 PM

Share

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ನಗರದ ಜಿಟಿ ಮಾಲ್​​ನಲ್ಲಿ ಅದ್ಧೂರಿಯಾಗಿ ಆಯೋಜಿಸಿತ್ತು. ವಿಜಯ್ ರಾಘವೇಂದ್ರ, ಸಂಗೀತ ನಿರ್ದೇಶಕ ವಿ ಮನೋಹರ್ ಸೇರಿದಂತೆ ಚಿತ್ರತಂಡದ ಹಲವು ಪ್ರಮುಖರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದನ್ನು ಸಹ ನೀಡಲಾಯ್ತು. ಭಿನ್ನ ಕತೆಯುಳ್ಳ ಈ ಸಿನಿಮಾವನ್ನು ‘ನವರತ್ನ’ಗಳು ನಿರ್ಮಾಣ ಮಾಡಿರುವುದು ವಿಶೇಷ.

‘ರುದ್ರಾಭಿಷೇಕಂ’, ಹೆಸರೇ ಸೂಚಿಸುತ್ತಿರುವಂತೆ ಪೌರಾಣಿಕ ಹಿನ್ನೆಲೆಯುಳ್ಳ, ಗ್ರಾಮ್ಯ ಕತೆಯನ್ನು ಸಿನಿಮಾ ಒಳಗೊಂಡಿದ್ದು, ವಿಜಯ್ ರಾಘವೇಂದ್ರ ಜೊತೆಗೆ ಪ್ರಿಯಾಂಕಾ ತಿಮ್ಮೇಶ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ರೊಮ್ಯಾಂಟಿಕ್ ಹಾಡೊಂದನ್ನು ಚಿತ್ರತಂಡ ಒಟ್ಟಿಗೆ ಬಿಡುಗಡೆ ಮಾಡಿದ್ದು, ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಸಿನಿಮಾದ ಒಂಬತ್ತು ನಿರ್ಮಾಪಕರು ಗಮನ ಸೆಳೆದರು. ಸಿನಿಮಾದ ಸಂಗೀತ ನಿರ್ದೇಶಕ ವಿ ಮನೋಹರ್, ಒಂಬತ್ತು ಉತ್ಸಾಹಿ ನಿರ್ಮಾಪಕರನ್ನು ‘ನವರತ್ನ’ಗಳೆಂದು ಕರೆದು ಕೊಂಡಾಡಿದರು.

‘ರುದ್ರಾಭಿಷೇಕಂ’ ಸಿನಿಮಾವನ್ನು ಒಂಬತ್ತು ಮಂದಿ ಗೆಳೆಯರು ಸೇರಿ ನಿರ್ಮಿಸಿದ್ದಾರೆ. ವಿಶೇಷವೆಂದರೆ ಆ ಒಂಬತ್ತೂ ಮಂದಿಯೂ ಕೃಷಿಯ ಹಿನ್ನೆಲೆಯಿಂದ ಬಂದವರು. ಕೃಷಿಕರೇ ಸೇರಿ ನಿರ್ಮಾಣ ಮಾಡಿರುವ ಸಿನಿಮಾ ‘ರುದ್ರಾಭಿಷೇಕಂ’. ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕರು, ಸಿನಿಮಾದ ಬಗೆಗಿನ ತಮ್ಮ ಪ್ರೀತಿ, ಆಸಕ್ತಿಯನ್ನು ವಿವರಿಸಿದರು. ನಾಯಕ ವಿಜಯ್ ರಾಘವೇಂದ್ರ, ನಾಯಕಿ ಪ್ರಿಯಾಂಕಾ ಸೇರಿದಂತೆ ಇತರೆ ಕಲಾವಿದರು, ತಂತ್ರಜ್ಞರು ನೀಡಿದ ಬೆಂಬಲ, ಸಿನಿಮಾ ನಿರ್ಮಾಣದಲ್ಲಿ ಹಾಕಿದ ಶ್ರಮವನ್ನು ಕೊಂಡಾಡಿದರು.

ಇದನ್ನೂ ಓದಿ:ವೀರಗಾಸೆ ವೇಷದಲ್ಲಿ ವಿಜಯ್ ರಾಘವೇಂದ್ರ: ‘ರುದ್ರಾಭಿಷೇಕಂ’ ಅದ್ಧೂರಿ ಕ್ಲೈಮ್ಯಾಕ್ಸ್

ನಟ ವಿಜಯ್ ರಾಘವೇಂದ್ರ ಮಾತನಾಡಿ, ಇಂಥಹಾ ಒಂದು ಪಾತ್ರದಲ್ಲಿ ನಟಿಸಲು ಬಹಳ ವರ್ಷಗಳಿಂದಲೂ ಕಾಯುತ್ತಿದ್ದುದಾಗಿ ಹೇಳಿದರು. ಸಿನಿಮಾನಲ್ಲಿ ಅವರು ಹಲವು ಶೇಡ್​​ಗಳಲ್ಲಿ ಕಾಣಿಸಿಕೊಂಡಿದ್ದಾರಂತೆ. ಅದರಲ್ಲೂ ವೀರಗಾಸೆಯ ಲುಕ್ ಹಾಗೂ ವೀರಗಾಸೆಯ ದೃಶ್ಯಗಳು ಇಡೀ ಸಿನಿಮಾದ ಹೈಲೆಟ್ ಎಂದರು. ನಿರ್ಮಾಪಕರು ತಮಗಿತ್ತ ಸಹಕಾರ, ನೋಡಿಕೊಂಡ ರೀತಿಯನ್ನು ಕೊಂಡಾಡಿದ ಅವರು ಇಂಥಹಾ ನಿರ್ಮಾಪಕರುಗಳು ಚಿತ್ರರಂಗಕ್ಕೆ ಬೇಕೆಂದರು.

ನಾಯಕಿ ಪ್ರಿಯಾಂಕಾ ತಿಮ್ಮೇಶ್, ನಿರ್ದೇಶಕ ವಸಂತ್ ಕುಮಾರ್, ಸಂಗೀತ ನಿರ್ದೇಶಕ ವಿ ಮನೋಹರ್, ನಟ ಬಾಲರಾಜ್ವಾಡಿ ಇನ್ನೂ ಹಲವರು ಸಿನಿಮಾದ ಬಗ್ಗೆ, ಸಿನಿಮಾ ಶೂಟಿಂಗ್​​ನ ಅನುಭವಗಳ ಬಗ್ಗೆ ಮಾತನಾಡಿದರು. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಕ್ರಿಯೇಶನ್ಸ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು, ಲಾಯರ್ ಜಯರಾಮ್, ವೆಂಕಟೇಶ್, ಮಂಜುನಾಥ್, ರವಿಕುಮಾರ್, ಸುರೇಶ್ ಬಾಬು, ಚಿದಾನಂದ ಮೂರ್ತಿ, ಅಶ್ವತ್ಥನಾರಾಯಣ, ಶಿವಕುಮಾರ್, ಕುಸುಮಾ ವಸಂತ್ ಅವರುಗಳು ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್