AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇರವಾಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗುತ್ತಿದೆ ‘ಸಾವಿತ್ರಿ’ ಸಿನಿಮಾ

ವಿಜಯ್ ರಾಘವೇಂದ್ರ, ಪ್ರಕಾಶ್ ಬೆಳವಾಡಿ, ತಾರಾ ನಟನೆಯ ಕನ್ನಡ ಸಿನಿಮಾ ಒಂದು ನೇರವಾಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗುತ್ತಿದೆ.

ನೇರವಾಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗುತ್ತಿದೆ 'ಸಾವಿತ್ರಿ' ಸಿನಿಮಾ
ಸಾವಿತ್ರಿ
ಮಂಜುನಾಥ ಸಿ.
|

Updated on: Jul 06, 2023 | 8:09 PM

Share

ಸಿನಿಮಾಗಳನ್ನು ಪೈರಸಿ (Pracy) ಮಾಡಿ ಯೂಟ್ಯೂಬ್​ನಲ್ಲಿಯೋ (YouTube) ಇನ್ನಿತರೆ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿಬಿಟ್ಟಾರು ಎಂಬ ಭಯದಲ್ಲಿ ನಿರ್ಮಾಪಕರು (Producer) ಇರುವಾಗ ಇಲ್ಲೊಬ್ಬ ಕನ್ನಡ ಸಿನಿಮಾ ನಿರ್ಮಾಪಕರು ತಮ್ಮ ಸಿನಿಮಾವನ್ನು ನೇರವಾಗಿ ಯೂಟ್ಯೂಬ್​ನಲ್ಲಿಯೇ ಬಿಡುಗಡೆ ಮಾಡುತ್ತಿದ್ದಾರೆ. ನೋಡುಗರು ಉಚಿತವಾಗಿ ಸಿನಿಮಾವನ್ನು ಯೂಟ್ಯೂಬ್​ನಲ್ಲಿ ವೀಕ್ಷಣೆ ಮಾಡಬಹುದಾಗಿದೆ.

ವಿಜಯ್ ರಾಘವೇಂದ್ರ, ತಾರಾ, ಪ್ರಕಾಶ್ ಬೆಳವಾಡಿ ಇನ್ನಿತರರು ನಟಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸಾವಿತ್ರಿ ನೇರವಾಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗುತ್ತಿದೆ. ಜುಲೈ 7 ರಂದು ಸಂಜೆ 5:12ಕ್ಕೆ ಸಾವಿತ್ರಿ ಸಿನಿಮಾವನ್ನು ಎಸ್​ಆರ್​ಎಸ್ ವಿಷನ್ ಮೀಡಿಯಾ ಯೂಟ್ಯೂಬ್​ನಲ್ಲಿ ಚಾನೆಲ್​ನಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು, ಆಸಕ್ತರು ಉಚಿತವಾಗಿ ಸಿನಿಮಾವನ್ನು ಯೂಟ್ಯೂಬ್​ನಲ್ಲಿ ವೀಕ್ಷಿಸಬಹುದಾಗಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು ಲಾಜಿಕ್-ಮ್ಯಾಜಿಕ್​ ಹಾಗೂ ಸೈಕಾಲಜಿಗಳ ಸುತ್ತ ಈ ಸಿನಿಮಾ ಸುತ್ತುತ್ತದೆ. ಹಾರರ್ ಎಫೆಕ್ಟ್​ಗಳು ಸಹ ಈ ಸಿನಿಮಾದಲ್ಲಿದ್ದು ದೆವ್ವ, ಮಾಟ-ಮಂತ್ರಗಳ ದೃಶ್ಯಗಳೂ ಸಹ ಇವೆ. ಮಗುವು ಬೆಳೆದ ವಾತಾವರಣ ಹೇಗೆ ಆ ಮಗುವಿನ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಎಂಬ ಕತೆಯನ್ನು ಸಿನಿಮಾ ಒಳಗೊಂಡಿದೆ. ತೀರ ಕಡಿಮೆ ಬಜೆಟ್​ನಲ್ಲಿ ಸಿನಿಮಾದ ಚಿತ್ರೀಕರಣ ನಡೆದಿರುವುದು ಟ್ರೈಲರ್​ನಿಂದಲೇ ತಿಳಿದು ಬರುತ್ತಿದೆ.

ಇದನ್ನೂ ಓದಿ:ಯೂಟ್ಯೂಬ್​ನಲ್ಲಿ ಧೂಳೆಬ್ಬಿಸಿದ ‘K46’ ಸಿನಿಮಾ ಪ್ರೋಮೋ; ಒಟ್ಟೂ ಕಂಡ ವೀಕ್ಷಣೆ ಎಷ್ಟು?

ಸಿನಿಮಾವನ್ನು ದಿನೇಶ್ ಎಂಬುವರು ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಹೃದಯ ಶಿವ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಪ್ರಶಾಂತ್ ಕುಮಾರ್ ಹೀಲಲಿಗೆ. ಸಿನಿಮಾವು ಚಿತ್ರಮಂದಿರ ಅಥವಾ ಒಟಿಟಿಯ ಬದಲಿಗೆ ನೇರವಾಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡುತ್ತಿರುವ ಬಗ್ಗೆ ಆಂಗ್ಲ ಪತ್ರಿಕೆಯೊಂದಕ್ಕೆ ಕಾರಣ ತಿಳಿಸಿರುವ ಪ್ರಶಾಂತ್ ಕುಮಾರ್ ಹೀಲಲಿಗೆ, ”ನನ್ನ ಮೊದಲ ನಿರ್ಮಾಣದ ಸಿನಿಮಾ ಇದು. ಇದನ್ನು ಚಿತ್ರಮಂದಿರ ಅಥವಾ ಒಟಿಟಿಯಲ್ಲಿ ಬಿಡುಗಡೆ ಮಾಡಲು ನನ್ನ ಶಕ್ತ್ಯಾನುಸಾರ ಯತ್ನಿಸಿದೆ ಆದರೆ ಸಾಧ್ಯವಾಗಲಿಲ್ಲ ಹಾಗಾಗಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡುತ್ತಿದ್ದೇನೆ” ಎಂದಿದ್ದಾರೆ.

ಸಿನಿಮಾವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲೆಂದು ಸಿನಿಮಾದ ಸೆನ್ಸಾರ್ ಸಹ ಮಾಡಿಸಿದ್ದರಂತೆ ನಿರ್ಮಾಪಕ ಆದರೆ ಆ ನಂತರ ಅವರು ಅನಾರೋಗ್ಯಕ್ಕೆ ತುತ್ತಾದ್ದರಿಂದ ಆಗ ಅಂದುಕೊಂಡಂತೆ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ. ಅನಾರೋಗ್ಯದ ಕಾರಣದಿಂದ ಉದ್ಯಮದವರನ್ನು ಭೇಟಿಯಾಗಿ ಸಿನಿಮಾವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ನಾನೇ ಡಿಜಿಟಲ್ ಹಕ್ಕನ್ನು ಸಾಧಾರಣ ಮೊತ್ತಕ್ಕೆ ಮಾರಿ ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಸಿನಿಮಾದ ಸ್ಯಾಟಲೈಟ್ ಹಕ್ಕು ಈಗಲೂ ನನ್ನ ಬಳಿಯೇ ಇದೆ” ಎಂದಿದ್ದಾರೆ ನಿರ್ಮಾಪಕ.

ಇನ್ನು ಸಿನಿಮಾದ ನಿರ್ದೇಶಕ ದಿನೇಶ್ ಅವರಿಗೆ ತೀರ ಇತ್ತೀಚೆನ ವರೆಗು ತಮ್ಮ ಸಿನಿಮಾ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗುತ್ತಿರುವ ವಿಷಯವೇ ಗೊತ್ತಿರಲಿಲ್ಲ. ನಾನು ನಿರ್ಮಾಪಕರಿಗೆ ಕರೆ ಮಾಡಿ ಇನ್ನು ಸ್ವಲ್ಪ ದಿನ ಕಾದು ಒಟಿಟಿಯಲ್ಲಿ ಆದರೂ ಬಿಡುಗಡೆ ಮಾಡೋಣ ಎಂದೆ ಆದರೆ ನಿರ್ಮಾಪಕರು ಅದಾಗಲೇ ಸಿನಿಮಾವನ್ನು ಯೂಟ್ಯೂಬ್ ಚಾನೆಲ್​ಗೆ ಕೊಟ್ಟಾಗಿತ್ತು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ