AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಸ್ಪಂದನಾ ಮೃತದೇಹದೊಂದಿಗೆ ಬೆಂಗಳೂರಿಗೆ ಬಂದ ವಿಜಯ್ ರಾಘವೇಂದ್ರ

Vijay Raghavendra: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾರ ಮೃತದೇಹವನ್ನು ಬ್ಯಾಂಕಾಕ್​ನಿಂದ ಬೆಂಗಳೂರಿಗೆ ತರಲಾಗಿದೆ. ಮಲ್ಲೇಶ್ವರಂನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪತ್ನಿ ಸ್ಪಂದನಾ ಮೃತದೇಹದೊಂದಿಗೆ ಬೆಂಗಳೂರಿಗೆ ಬಂದ ವಿಜಯ್ ರಾಘವೇಂದ್ರ
ವಿಜಯ್-ಸ್ಪಂದನಾ
Follow us
ಮಂಜುನಾಥ ಸಿ.
|

Updated on: Aug 09, 2023 | 12:04 AM

ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ (Vijay Raghavendea) ಪತ್ನಿ ಸ್ಪಂದನಾ (Spandana) ಆಗಸ್ಟ್ 06ರಂದು ನಿಧನ ಹೊಂದಿದ್ದರು. ಆಗಸ್ಟ್ 6ರ ರಾತ್ರಿವೇ ಪತ್ನಿಯನ್ನು ಕಾಣಲು ಆಸ್ಪತ್ರೆಗೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಇಂದು (ಆಗಸ್ಟ್ 08)ರ ರಾತ್ರಿ 11:30 ಸುಮಾರಿಗೆ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಜೊತೆಗೆ ಪತ್ನಿಯ ಮೃತದೇಹವನ್ನೂ ತಂದಿದ್ದಾರೆ.

ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಕಾರ್ಗೊ ಮೂಲಕ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬೆಂಗಳೂರಿಗೆ ವಿಜಯ್ ರಾಘವೇಂದ್ರರ ಪತ್ನಿ ಸ್ಪಂದನಾರ ಮೃತದೇಹವನ್ನು ತರಲಾಗಿದೆ. ಈ ವೇಳೆ ವಿಜಯ್ ರಾಘವೇಂದ್ರ ಹಾಗೂ ಸ್ಪಂದನಾರ ಹಲವು ಆಪ್ತರು, ಸಂಬಂಧಿಗಳು ಮೃತದೇಹವನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ವಿಜಯ್ ರಾಘವೇಂದ್ರ ಸಹೋದರ ಶ್ರೀಮುರಳಿ, ಇನ್ನೂ ಕೆಲವು ಹತ್ತಿರದ ಸಂಬಂಧಿಕರ ಜೊತೆಗೆ ಕೆಆರ್​ಜಿಯ ಯೋಗಿ ಗೌಡ ಹಾಗೂ ಕೆಲವು ಗೆಳೆಯರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಸ್ಪಂದನಾರ ಚಿಕ್ಕಪ್ಪ ಆಗಿರುವ ಜನಪ್ರಿಯ ರಾಜಕಾರಣಿ ಬಿಕೆ ಹರಿಪ್ರಸಾದ್ ಸಹ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಜೊತೆಗೆ ಮಾಜಿ ಸಚಿವ ಮುನಿರತ್ನ ಸಹ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

ಇದನ್ನೂ ಓದಿ:ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ

ವಿಜಯ್ ರಾಘವೇಂದ್ರ ಬಂದ ಥಾಯ್ ಏರ್​ವೇಯ್ಸ್​ನ ವಿಮಾನದಲ್ಲಿಯೇ ಕಾರ್ಗೊ ವಿಭಾಗದಲ್ಲಿ ಸ್ಪಂದನಾ ಅವರ ಮೃತದೇಹ ಬಂತು. ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟ ವಿಜಯ್ ರಾಘವೇಂದ್ರ ಅವರನ್ನು ಶ್ರೀಮುರಳಿ ಹಾಗೂ ಅವರ ಗೆಳೆಯರು ವಿಮಾನ ನಿಲ್ದಾಣದಿಂದ ನೇರವಾಗಿ ಮನೆಯತ್ತ ಕರೆದೊಯ್ದರು. ಆದರೆ ಸ್ಪಂದನಾರ ಮೃತದೇಹವನ್ನು ತರಲೆಂದು ಆಂಬುಲೆನ್ಸ್ ನೇಮಿಸಲಾಗಿತ್ತು, ಅಂತೆಯೇ ಎಲ್ಲ ಕೆಲವು ನಿಯಮ ಹಾಗೂ ಪರಿಶೀಲನೆಗಳು ಮುಗಿದ ಬಳಿಕ ಸ್ಪಂದನಾರ ಮೃತದೇವಹವನ್ನು ವಿಮಾನ ನಿಲ್ದಾಣದ ಸಿಬ್ಬಂದಿ ಸ್ಪಂದನಾರ ಕುಟುಂಬಕ್ಕೆ ಹಸ್ತಾಂತರಿಸಿದರು.

ಸ್ಪಂದನಾರ ಮಲ್ಲೇಶ್ವರದ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲಿಯೇ ಆಗಸ್ಟ್ 09ರ ಮಧ್ಯಾಹ್ನದ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಅದಾದ ಬಳಿಕ ಈಡಿಗ ಸಮುದಾಯದ ಪದ್ಧತಿಯಂತೆ ಹರಿಶ್ಚಂದ್ರ ಘಾಟ್​ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು.

ಸ್ಪಂದನಾ ಅವರು ತಮ್ಮ ಕಜಿನ್​ಗಳೊಟ್ಟಿಗೆ ಪ್ರವಾಸಕ್ಕಾಗಿ ಬ್ಯಾಂಕಾಂಕ್​ಗೆ ತೆರಳಿದ್ದರು. ಅಲ್ಲಿ ಅವರಿಗೆ ಲೋ ಬಿಪಿಯಿಂದ ಹೃದಯಾಘಾತವಾಗಿ ಮಲಗಿದ್ದ ಸ್ಥಿತಿಯಲ್ಲಿಯೇ ನಿಧನ ಹೊಂದಿದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ಸ್ಪಂದನಾ ಹಾಗೂ ವಿಜಯ್ ರಾಘವೇಂದ್ರ ಅವರು ಪ್ರೀತಿಸಿ ವಿವಾಹವಾಗಿದ್ದರು. ಅವರಿಗೆ ಶೌರ್ಯ ಹೆಸರಿನ ಮಗನೊಬ್ಬನಿದ್ದಾನೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ