AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ ಎಂದಿದ್ದಾರೆ.

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​
ರಾಮ್​ ಚರಣ್​-ವಿಜಯ್​ ಸೇತುಪತಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 03, 2021 | 10:00 PM

ನಟ ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ ನಂತರದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ ಕುಟುಂಬಕ್ಕೆ ಹಾಗೂ ಶಿವರಾಜ್​​ಕುಮಾರ್​ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಸ್ಯಾಂಡಲ್​ವುಡ್​ನಿಂದ ಮಾತ್ರವಲ್ಲದೆ, ಟಾಲಿವುಡ್​ ಹಾಗೂ ಕಾಲಿವುಡ್​ ಮಂದಿ ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು (ನವೆಂಬರ್​ 3) ತೆಲುಗು ನಟ ರಾಮ್​ ಚರಣ್​ ಹಾಗೂ ತಮಿಳು ನಟ ವಿಜಯ್​ ಸೇತುಪತಿ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಇಂದು ಬೆಳಗ್ಗೆ ಟಾಲಿವುಡ್ ನಟ ರಾಮ್​ ಚರಣ್ ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಂತರ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಶಿವರಾಜ್​ಕುಮಾರ್ ನಿವಾಸಕ್ಕೆ ತೆರಳಿ ಅವರ​ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಮ್​ ಚರಣ್ ಪುನೀತ್ ಭಾವಚಿತ್ರಕ್ಕೆ ಕೈಮುಗಿದು ನಮನ ಸಲ್ಲಿಸಿದ್ದಾರೆ.

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ‘ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ದೂರವಾಣಿ ಕರೆ ಮಾಡಿ ಒಂದು ಬಾರಿ ಮಾತನಾಡಿದ್ದೆ.ಅವರು ಬಹಳ ಪ್ರೀತಿಯಿಂದ ಮಾತನಾಡಿಸಿದ್ದರು. ನನ್ನ ಸಿನಿಮಾ ನೋಡಿ ನನಗೆ ಕಾಲ್ ಮಾಡಿ ಮಾತಾಡಿದ್ದರು. ಪುನೀತ್​​ ಇಲ್ಲ ಅನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​​ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ವಿಜಯ್ ಸೇತುಪತಿ ಹೇಳಿದ್ದಾರೆ.

ವಿಜಯ್​ ಸೇತುಪತಿ ಮೇಲೆ ಹಲ್ಲೆ

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!