ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ ಎಂದಿದ್ದಾರೆ.

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​
ರಾಮ್​ ಚರಣ್​-ವಿಜಯ್​ ಸೇತುಪತಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Nov 03, 2021 | 10:00 PM

ನಟ ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ ನಂತರದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ ಕುಟುಂಬಕ್ಕೆ ಹಾಗೂ ಶಿವರಾಜ್​​ಕುಮಾರ್​ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಸ್ಯಾಂಡಲ್​ವುಡ್​ನಿಂದ ಮಾತ್ರವಲ್ಲದೆ, ಟಾಲಿವುಡ್​ ಹಾಗೂ ಕಾಲಿವುಡ್​ ಮಂದಿ ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು (ನವೆಂಬರ್​ 3) ತೆಲುಗು ನಟ ರಾಮ್​ ಚರಣ್​ ಹಾಗೂ ತಮಿಳು ನಟ ವಿಜಯ್​ ಸೇತುಪತಿ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಇಂದು ಬೆಳಗ್ಗೆ ಟಾಲಿವುಡ್ ನಟ ರಾಮ್​ ಚರಣ್ ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಂತರ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಶಿವರಾಜ್​ಕುಮಾರ್ ನಿವಾಸಕ್ಕೆ ತೆರಳಿ ಅವರ​ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಮ್​ ಚರಣ್ ಪುನೀತ್ ಭಾವಚಿತ್ರಕ್ಕೆ ಕೈಮುಗಿದು ನಮನ ಸಲ್ಲಿಸಿದ್ದಾರೆ.

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ‘ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ದೂರವಾಣಿ ಕರೆ ಮಾಡಿ ಒಂದು ಬಾರಿ ಮಾತನಾಡಿದ್ದೆ.ಅವರು ಬಹಳ ಪ್ರೀತಿಯಿಂದ ಮಾತನಾಡಿಸಿದ್ದರು. ನನ್ನ ಸಿನಿಮಾ ನೋಡಿ ನನಗೆ ಕಾಲ್ ಮಾಡಿ ಮಾತಾಡಿದ್ದರು. ಪುನೀತ್​​ ಇಲ್ಲ ಅನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​​ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ವಿಜಯ್ ಸೇತುಪತಿ ಹೇಳಿದ್ದಾರೆ.

ವಿಜಯ್​ ಸೇತುಪತಿ ಮೇಲೆ ಹಲ್ಲೆ

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್