AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ ಎಂದಿದ್ದಾರೆ.

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​
ರಾಮ್​ ಚರಣ್​-ವಿಜಯ್​ ಸೇತುಪತಿ
TV9 Web
| Edited By: |

Updated on: Nov 03, 2021 | 10:00 PM

Share

ನಟ ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ ನಂತರದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ ಕುಟುಂಬಕ್ಕೆ ಹಾಗೂ ಶಿವರಾಜ್​​ಕುಮಾರ್​ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಸ್ಯಾಂಡಲ್​ವುಡ್​ನಿಂದ ಮಾತ್ರವಲ್ಲದೆ, ಟಾಲಿವುಡ್​ ಹಾಗೂ ಕಾಲಿವುಡ್​ ಮಂದಿ ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು (ನವೆಂಬರ್​ 3) ತೆಲುಗು ನಟ ರಾಮ್​ ಚರಣ್​ ಹಾಗೂ ತಮಿಳು ನಟ ವಿಜಯ್​ ಸೇತುಪತಿ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಇಂದು ಬೆಳಗ್ಗೆ ಟಾಲಿವುಡ್ ನಟ ರಾಮ್​ ಚರಣ್ ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಂತರ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಶಿವರಾಜ್​ಕುಮಾರ್ ನಿವಾಸಕ್ಕೆ ತೆರಳಿ ಅವರ​ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಮ್​ ಚರಣ್ ಪುನೀತ್ ಭಾವಚಿತ್ರಕ್ಕೆ ಕೈಮುಗಿದು ನಮನ ಸಲ್ಲಿಸಿದ್ದಾರೆ.

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ‘ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ದೂರವಾಣಿ ಕರೆ ಮಾಡಿ ಒಂದು ಬಾರಿ ಮಾತನಾಡಿದ್ದೆ.ಅವರು ಬಹಳ ಪ್ರೀತಿಯಿಂದ ಮಾತನಾಡಿಸಿದ್ದರು. ನನ್ನ ಸಿನಿಮಾ ನೋಡಿ ನನಗೆ ಕಾಲ್ ಮಾಡಿ ಮಾತಾಡಿದ್ದರು. ಪುನೀತ್​​ ಇಲ್ಲ ಅನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​​ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ವಿಜಯ್ ಸೇತುಪತಿ ಹೇಳಿದ್ದಾರೆ.

ವಿಜಯ್​ ಸೇತುಪತಿ ಮೇಲೆ ಹಲ್ಲೆ

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

Follow Us
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು