AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ ಎಂದಿದ್ದಾರೆ.

ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​
ರಾಮ್​ ಚರಣ್​-ವಿಜಯ್​ ಸೇತುಪತಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 03, 2021 | 10:00 PM

Share

ನಟ ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ ನಂತರದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಪುನೀತ್​ ರಾಜ್​ಕುಮಾರ್​ ಕುಟುಂಬಕ್ಕೆ ಹಾಗೂ ಶಿವರಾಜ್​​ಕುಮಾರ್​ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಸ್ಯಾಂಡಲ್​ವುಡ್​ನಿಂದ ಮಾತ್ರವಲ್ಲದೆ, ಟಾಲಿವುಡ್​ ಹಾಗೂ ಕಾಲಿವುಡ್​ ಮಂದಿ ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು (ನವೆಂಬರ್​ 3) ತೆಲುಗು ನಟ ರಾಮ್​ ಚರಣ್​ ಹಾಗೂ ತಮಿಳು ನಟ ವಿಜಯ್​ ಸೇತುಪತಿ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಇಂದು ಬೆಳಗ್ಗೆ ಟಾಲಿವುಡ್ ನಟ ರಾಮ್​ ಚರಣ್ ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಂತರ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಶಿವರಾಜ್​ಕುಮಾರ್ ನಿವಾಸಕ್ಕೆ ತೆರಳಿ ಅವರ​ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಮ್​ ಚರಣ್ ಪುನೀತ್ ಭಾವಚಿತ್ರಕ್ಕೆ ಕೈಮುಗಿದು ನಮನ ಸಲ್ಲಿಸಿದ್ದಾರೆ.

ಪುನೀತ್ ಸಮಾಧಿಗೆ ಭೇಟಿ ಬಳಿಕ ವಿಜಯ್ ಸೇತುಪತಿ ಮಾತನಾಡಿದ್ದಾರೆ. ‘ಪುನೀತ್​ ಅವರನ್ನು ಇದುವರೆಗೆ ಭೇಟಿ ಆಗುವುದಕ್ಕೆ ಆಗಲಿಲ್ಲ. ಪುನೀತ್​ರನ್ನ ಭೇಟಿಯಾಗುವ ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ದೂರವಾಣಿ ಕರೆ ಮಾಡಿ ಒಂದು ಬಾರಿ ಮಾತನಾಡಿದ್ದೆ.ಅವರು ಬಹಳ ಪ್ರೀತಿಯಿಂದ ಮಾತನಾಡಿಸಿದ್ದರು. ನನ್ನ ಸಿನಿಮಾ ನೋಡಿ ನನಗೆ ಕಾಲ್ ಮಾಡಿ ಮಾತಾಡಿದ್ದರು. ಪುನೀತ್​​ ಇಲ್ಲ ಅನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್​​ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ವಿಜಯ್ ಸೇತುಪತಿ ಹೇಳಿದ್ದಾರೆ.

ವಿಜಯ್​ ಸೇತುಪತಿ ಮೇಲೆ ಹಲ್ಲೆ

ಮಂಗಳವಾರ (ನವೆಂಬರ್​ 2) ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ಕಿರಿಕ್ ಆಗಿದೆ. ಸಹ ಪ್ರಯಾಣಿಕ ಕುಡಿದಿದ್ದ ಎನ್ನಲಾಗಿದೆ. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದಾನೆ. ಆ ನಂತರ ಏರ್​​ಪೋಟ್​​​ ಠಾಣೆಗೆ ನಟ ಮತ್ತು ಪ್ರಯಾಣಿಕರು ತೆರಳಿದ್ದರು. ಏರ್​​ಪೋಟ್​​​ ಪೊಲೀಸರು ಕೇಸ್ ದಾಖಲು ಮಾಡದೆ, ಅಪಾಲಜಿ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ