AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Sethupathi: ‘ಶುಗರ್​ಲೆಸ್’​ ಚಿತ್ರಕ್ಕೆ ವಿಜಯ್​ ಸೇತುಪತಿ ಅಭಿನಂದನೆ; ಪರಭಾಷೆ ಮಂದಿಯ ಗಮನ ಸೆಳೆದ ಕನ್ನಡ ಸಿನಿಮಾ

Sugarless Kannada Cinema: ವಿಶೇಷ ಕಥಾಹಂದರ ಇಟ್ಟುಕೊಂಡು ‘ಶುಗರ್​ಲೆಸ್​’ ಸಿನಿಮಾ ಮಾಡಲಾಗಿದೆ. ಈ ಚಿತ್ರದ ಗೆಲುವಿಗೆ ವಿಜಯ್​ ಸೇತುಪತಿ ಅಭಿನಂದನೆ ತಿಳಿಸಿದ್ದಾರೆ.

Vijay Sethupathi: ‘ಶುಗರ್​ಲೆಸ್’​ ಚಿತ್ರಕ್ಕೆ ವಿಜಯ್​ ಸೇತುಪತಿ ಅಭಿನಂದನೆ; ಪರಭಾಷೆ ಮಂದಿಯ ಗಮನ ಸೆಳೆದ ಕನ್ನಡ ಸಿನಿಮಾ
ವಿಜಯ್​ ಸೇತುಪತಿ, ಶುಗರ್​ಲೆಸ್​ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Jul 13, 2022 | 8:50 AM

Share

ಕನ್ನಡದ ಸಿನಿಮಾಗಳು (Kannada Cinema) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಮಾಡಿದ ಮೋಡಿ ಸಣ್ಣದೇನಲ್ಲ. ಹಾಗಂತ ಕೇವಲ ಹೈ ಬಜೆಟ್​ನ ಸಿನಿಮಾಗಳು ಮಾತ್ರ ಈ ರೀತಿ ಸದ್ದು ಮಾಡುತ್ತಿಲ್ಲ. ಬದಲಿಗೆ, ಒಳ್ಳೆಯ ಕಥಾವಸ್ತು ಇರುವ ಕನ್ನಡದ ಹಲವು ಸಿನಿಮಾಗಳು ಪರಭಾಷೆ ಮಂದಿಯ ಗಮನ ಸೆಳೆಯುತ್ತಿವೆ. ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ಭಾರಿ ಯಶಸ್ಸು ಕಂಡಿತು. ಈಗಿನದ್ದು ‘ಶುಗರ್​ಲೆಸ್​’ (Sugarless Movie) ಸಿನಿಮಾದ ಸರದಿ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಕ್ಕ-ಪಕ್ಕದ ರಾಜ್ಯಗಳ ಸೆಲೆಬ್ರಿಟಿಗಳು ಕೂಡ ಈ ಸಿನಿಮಾವನ್ನು ಹೊಗಳುತ್ತಿದ್ದಾರೆ. ದಕ್ಷಿಣ ಭಾರತದ ಸ್ಟಾರ್​ ನಟ ವಿಜಯ್​ ಸೇತುಪತಿ (Vijay Sethupathi) ಅವರು ‘ಶುಗರ್​ಲೆಸ್​’ ಚಿತ್ರಕ್ಕೆ ಅಭಿನಂದನೆ ತಿಳಿಸಿದ್ದಾರೆ.

ವಿಶೇಷ ಕಥಾಹಂದರ ಇಟ್ಟುಕೊಂಡು ‘ಶುಗರ್​ಲೆಸ್​’ ಸಿನಿಮಾ ಮಾಡಲಾಗಿದೆ. ಯೌವನದಲ್ಲೇ ಮಧುಮೇಹದಿಂದ ಬಳಲುವ ಯುವಕನ ಕುರಿತಾದ ಕಥೆ ಈ ಚಿತ್ರದಲ್ಲಿದೆ. ನಾಯಕನಾಗಿ ‘ದಿಯಾ’ ಸಿನಿಮಾ ಖ್ಯಾತಿಯ ಪೃಥ್ವಿ ಅಂಬಾರ್​ ನಟಿಸಿದ್ದಾರೆ. ನಿರ್ಮಾಪಕ ಕೆ.ಎಂ. ಶಶಿಧರ್​ ಅವರು ಬಂಡವಾಳ ಹೂಡುವುದರ ಜೊತೆಗೆ ನಿರ್ದೇಶಕವನ್ನೂ ಮಾಡಿ ಸೈ ಎನಿಸಿಕೊಂಡಿದ್ದಾರೆ. ಅವರ ಚೊಚ್ಚಲ ಆ್ಯಕ್ಷನ್​-ಕಟ್​ ಪ್ರಯತ್ನಕ್ಕೆ ಜನರು ಭೇಷ್​ ಎಂದಿದ್ದಾರೆ.

ಇದನ್ನೂ ಓದಿ
Image
ಅಂಕು ಡೊಂಕು ದಾರಿಯಲ್ಲಿ ಬಂದ ‘ಹೇ ಫಕೀರಾ’; ಪ್ರೇಕ್ಷಕರಿಗೆ ಇಷ್ಟವಾಯ್ತು ‘ವಿಕ್ರಾಂತ್ ರೋಣ’ ಹೊಸ ಹಾಡು
Image
‘ಘೋಸ್ಟ್​’ ಸ್ವಾಗತಿಸಿದ ಕಿಚ್ಚ ಸುದೀಪ್​; ಶಿವರಾಜ್​ಕುಮಾರ್ ಲುಕ್ ನೋಡಿ ಫ್ಯಾನ್ಸ್ ಫಿದಾ
Image
Gaalipata 2: ಯೋಗರಾಜ್​ ಭಟ್​ ಲೇಖನಿಯಲ್ಲಿ ಮತ್ತೊಂದು ಎಣ್ಣೆ ಸಾಂಗ್​; ‘ಗಾಳಿಪಟ 2’ ಚಿತ್ರದಲ್ಲಿ ಹಿಟ್​ ಕಾಂಬಿನೇಷನ್​
Image
ಜೊತೆಯಾಗಿ ಬಂದು ‘ಶುಗರ್​ಲೆಸ್​’ ಸಿನಿಮಾ ನೋಡಿದ ಮಿಲನಾ ನಾಗರಾಜ್​-ಡಾರ್ಲಿಂಗ್​ ಕೃಷ್ಣ ದಂಪತಿ

ಈ ಸಿನಿಮಾದಲ್ಲಿ ಪೃಥ್ವಿ ಅಂಬಾರ್​ ಅವರಿಗೆ ಜೋಡಿಯಾಗಿ ಪ್ರಿಯಾಂಕಾ ತಿಮ್ಮೇಶ್​ ನಟಿಸಿದ್ದಾರೆ. ಧರ್ಮಣ್ಣ ಅವರು ಪ್ರೇಕ್ಷಕರಿಗೆ ಕಾಮಿಡಿ ಕಚಗುಳಿ ಇಟ್ಟಿದ್ದಾರೆ. ವಿಮರ್ಶಕರು ಕೂಡ ‘ಶುಗರ್​ಲೆಸ್​’ಗೆ ಮನಸೋತಿದ್ದಾರೆ. ಇಷ್ಟೆಲ್ಲ ಸದ್ದು ಮಾಡುತ್ತಿರುವ ಚಿತ್ರದ ಬಗ್ಗೆ ಸ್ಟಾರ್​ ನಟ ವಿಜಯ್​ ಸೇತುಪತಿ ಅವರು ಟ್ವೀಟ್​ ಮಾಡಿದ್ದಾರೆ. ‘ಭಾರಿ ಯಶಸ್ಸು ಕಂಡ ಶುಗರ್​ಲೆಸ್​ ಚಿತ್ರಕ್ಕೆ ಅಭಿನಂದನೆಗಳು’ ಎಂದು ಬರೆದುಕೊಂಡಿರುವ ಅವರು, ಈ ಸಿನಿಮಾದ ಪೋಸ್ಟರ್​ ಶೇರ್​ ಮಾಡಿಕೊಂಡಿದ್ದಾರೆ. ಇದರಿಂದ ಚಿತ್ರತಂಡದ ಖುಷಿ ಹೆಚ್ಚಿದೆ.

ಪೃಥ್ವಿ ಅಂಬಾರ್​ ಅವರಿಗೆ ಜುಲೈ ತಿಂಗಳು ತುಂಬ ಸ್ಪೆಷಲ್​. ಶಿವರಾಜ್​ಕುಮಾರ್​ ಜೊತೆ ಅವರು ನಟಿಸಿದ ‘ಬೈರಾಗಿ’ ಚಿತ್ರ ಜುಲೈ 1ರಂದು ತೆರೆಕಂಡಿತು. ಜುಲೈ 8ಕ್ಕೆ ‘ಶುಗರ್​ಲೆಸ್​’ ಬಿಡುಗಡೆ ಆಯಿತು. ಎರಡು ಸಿನಿಮಾಗಳ ಮೂಲಕ ಅವರು ಚಿತ್ರಮಂದಿರದಲ್ಲಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇನ್ನೂ ಅನೇಕ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳಿಗಾಗಿ ‘ಶುಗರ್​ಲೆಸ್​’ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ