Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪತ್ನಿಗೆ ಸಂಕಷ್ಟ, ವಿಜಯಲಕ್ಷ್ಮಿ ಎ1, ದರ್ಶನ್ ಎ3

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆಗಿದ್ದಾರೆ. ಆದರೆ ಈಗ ದರ್ಶನ್​ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷ್ಮಿ ದರ್ಶನ್ ಎ3 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ. ಪ್ರಕರಣದ ಚಾರ್ಜ್​ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆದಿದೆ.

ದರ್ಶನ್ ಪತ್ನಿಗೆ ಸಂಕಷ್ಟ, ವಿಜಯಲಕ್ಷ್ಮಿ ಎ1, ದರ್ಶನ್ ಎ3
ವಿಜಯಲಕ್ಷ್ಮಿ ದರ್ಶನ್
Follow us
ಮಂಜುನಾಥ ಸಿ.
|

Updated on: Jun 18, 2024 | 2:02 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan Thoogudeepa) ಎರಡನೇ ಆರೋಪಿ ಆಗಿದ್ದಾರೆ. ನಟಿ, ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದಾರೆ. ದರ್ಶನ್​ರ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಪರವಾಗಿ ಹೋರಾಟ ನಡೆಸುತ್ತಿದ್ದು, ವಕೀಲರನ್ನು ನೇಮಿಸಿ ದರ್ಶನ್​ರ ಬಿಡುಗಡೆಗೆ ಯತ್ನಿಸುತ್ತಿದ್ದಾರೆ. ಬೇರೆ-ಬೇರೆ ವಕೀಲರ ಭೇಟಿ ಮಾಡುತ್ತಿದ್ದಾರೆ. ಇದರ ನಡುವೆ ವಿಜಯಲಕ್ಷ್ಮಿ ಅವರಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷ್ಮಿ ಅವರನ್ನು ಎ1 ಆರೋಪಿಯನ್ನಾಗಿಸಲಾಗಿದ್ದು, ಪ್ರಕರಣದ ಬಗ್ಗೆ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ.

ಕಳೆದ ವರ್ಷ ಜನವರಿಯಲ್ಲಿ ದರ್ಶನ್​ರ ಮೈಸೂರಿನ ಫಾರಂ ಹೌಸ್​ ಮೇಲೆ ದಾಳಿ ಮಾಡಿದ್ದ ಪೊಲೀಸರು, ದರ್ಶನ್ ಅಕ್ರಮವಾಗಿ ಸಾಕಿಕೊಂಡಿದ್ದ ಬಾರ್ ಹೆಡೆಡ್ ಗೂಸ್ (ಬಾರ್ ಹೆಡೆಡ್ ಹೆಬ್ಬಾತು) ಪಕ್ಷಿಗಳನ್ನು ವಶಪಡಿಸಿಕೊಂಡಿದ್ದರು. ಈ ಪಕ್ಷಿಗಳನ್ನು ಸಾಕುವುದು ಕಾನೂನು ಪ್ರಕಾರ ಅಪರಾಧ. ಹಾಗಾಗಿ ಪಕ್ಷಿಗಳನ್ನು ವಶಪಡಿಸಿಕೊಂಡಿದ್ದ ಅರಣ್ಯ ಇಲಾಖೆ, ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ನಿಯಮ ಬಾಹಿರವಾಗಿ ಪಕ್ಷಿಗಳನ್ನು ಸಾಕಿದ್ದ ಕಾರಣ, ಮೈಸೂರು ಫಾರಂ ಹೌಸ್ ನ ಮಾಲೀಕರಾಗಿರುವ ವಿಜಯಲಕ್ಷ್ಮಿ ದರ್ಶನ್, ಮ್ಯಾನೇಜರ್ ನಾಗರಾಜು ಹಾಗೂ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆಗೆ ಕರೆಯಲಾಗಿತ್ತು. ಈ ಪ್ರಕರಣದಲ್ಲಿ ವಿಜಯಲಕ್ಷ್ಮಿ ಎ1, ನಾಗರಾಜು ಎ2 ಹಾಗೂ ದರ್ಶನ್ ಎ3 ಆಗಿದ್ದರು. ಆದರೆ ಯಾರೂ ಸಹ ವಿಚಾರಣೆಗೆ ಬಂದಿರಲಿಲ್ಲ. ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದಾರೆ.

ಇದನ್ನೂ ಓದಿ:ವಿಜಯಲಕ್ಷ್ಮಿ ದರ್ಶನ್​ಗೆ ಪ್ರತಿಕ್ರಿಯೆ: ಹಳೆ ವಿಷಯ ಕೆದಕಿದ ಪವಿತ್ರಾ ಗೌಡ

ಈಗಾಗಲೇ ಕೊಲೆ ಪ್ರಕರಣದಲ್ಲಿ ಸಿಲುಕಿರುವ ದರ್ಶನ್​ಗೆ ಈಗ ಅರಣ್ಯ ಇಲಾಖೆ ಪ್ರಕರಣವೂ ತಡಕಾಗಿ ಪರಿಣಮಿಸಲಿದೆ. ಈ ಪ್ರಕರಣದಲ್ಲಿ ವಿಜಯಲಕ್ಷ್ಮಿ ಎ1 ಆಗಿದ್ದು, ಅವರೂ ಸಹ ವಿಚಾರಣೆಗೆ ಹಾಜರಾಗಬೇಕಿದೆ. ಚಾರ್ಜ್​ ಶೀಟ್ ಸಲ್ಲಿಸಿದ ಬಳಿಕ ನ್ಯಾಯಾಲಯ ಯಾವ ಆದೇಶ ನೀಡುತ್ತದೆ ಎಂಬುದು ಸಹ ಕುತೂಹಲ ಕೆರಳಿಸಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಪವಿತ್ರಾ ಗೌಡ ಆರೋಪಿ ಸಂಖ್ಯೆ 1 ಆಗಿದ್ದಾರೆ. ಇಂದು (ಜೂನ್ 18) ದರ್ಶನ್ ಅನ್ನು ಮೈಸೂರಿಗೆ ಕರೆದೊಯ್ದು ಅಲ್ಲಿ ಸ್ಥಳ ಮಹಜರು ಮಾಡಲಾಗುತ್ತಿದೆ. ಕೊಲೆ ನಡೆದ ಬಳಿಕ ದರ್ಶನ್ ತಮ್ಮ ಆಪ್ತರ ಜೊತೆಗೆ ಮೈಸೂರಿಗೆ ತೆರಳಿದ್ದರು, ಹಾಗಾಗಿ ಅಲ್ಲಿ ಸ್ಥಳ ಮಹಜರು ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ