AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಲಕ್ಷ್ಮಿ ನೀಡಿದ ದೂರಿಗೆ ಪೊಲೀಸರ ನಿರ್ಲಕ್ಷ್ಯ? ದರ್ಶನ್ ಪತ್ನಿ ಅಸಮಾಧಾನ

ಅಶ್ಲೀಲವಾಗಿ ಕಮೆಂಟ್ ಮಾಡಿದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಅವರು ಇತ್ತೀಚೆಗೆ ದೂರು ನೀಡಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಕೂಡ ಪೊಲೀಸರು ಬಂಧಿಸಿಲ್ಲ. ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಬಳಿಕ ವಿಜಯಲಕ್ಷ್ಮಿ ದರ್ಶನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯಲಕ್ಷ್ಮಿ ನೀಡಿದ ದೂರಿಗೆ ಪೊಲೀಸರ ನಿರ್ಲಕ್ಷ್ಯ? ದರ್ಶನ್ ಪತ್ನಿ ಅಸಮಾಧಾನ
Vijayalakshmi Darshan
ಮದನ್​ ಕುಮಾರ್​
|

Updated on: Dec 31, 2025 | 1:14 PM

Share

ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಮೆಂಟ್ ಮಾಡಲಾಗಿತ್ತು. ಅದರ ವಿರುದ್ಧ ಅವರು ದೂರು ನೀಡಿದ್ದರು. ಆದರೆ ಆ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಗರಂ ಆಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೆ. ಆದರೆ ಪ್ರಾಮಾಣಿಕವಾಗಿ, ಈ ಅನುಭವವು ನನ್ನ ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ’ ಎಂದು ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ಬರೆದುಕೊಂಡಿದ್ದಾರೆ.

‘ನಾನು ದಾಖಲಿಸಿದ ದೂರು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದೆ, ಆದರೆ ಬೇರೊಬ್ಬ ಮಹಿಳೆಯ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂಬುದು ನನಗೆ ಆಶ್ಚರ್ಯ ತಂದಿದೆ. ಇದು ನಿಜವಾಗಿಯೂ ನನಗೆ ಆಶ್ಚರ್ಯವನ್ನುಂಟು ಮಾಡುತ್ತದೆ. ನನ್ನ ದೂರು ಕಡಿಮೆ ಮುಖ್ಯವೇ ಅಥವಾ ಮಾನ್ಯವೇ’ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಪ್ರಶ್ನಿಸಿದ್ದಾರೆ.

‘ನನ್ನ ವಕೀಲರಿಂದ ನಿರಂತರವಾಗಿ ವಿಚಾರಿಸಿದ ನಂತರವೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಂದು, ನನ್ನ ದೂರಿನ ಬಗ್ಗೆ ಗಮನ ಹರಿಸಲು ನಾನು ಇನ್ನೂ ಕಾಯುತ್ತಿದ್ದೇನೆ ಎಂದು ವೈಯಕ್ತಿಕವಾಗಿ ಹೋಗಿ ಅವರಿಗೆ ನೆನಪಿಸಬೇಕಾಯಿತು. ಈ ವಿಳಂಬವು ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವದಿಂದಾಗಿಲ್ಲ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ’ ಎಂದು ವಿಜಯಲಕ್ಷ್ಮಿ ಬರೆದುಕೊಂಡಿದ್ದಾರೆ.

‘ಯಾರು ಭಾಗಿಯಾಗಿದ್ದಾರೆ ಎಂಬುದರ ಮೇಲೆ ನ್ಯಾಯವು ಅವಲಂಬಿತವಾಗಿರಬಾರದು. ಅಂತಹ ನಡವಳಿಕೆಯನ್ನು ಬೆಂಬಲಿಸುವ ಅಥವಾ ಆಶ್ರಯ ನೀಡುವವರಿಗೆ ಬಹುಶಃ ಅಂತಹ ಕಾರ್ಯಗಳನ್ನು ಕುರುಡಾಗಿ ಬೆಂಬಲಿಸುವ ಬದಲು ಉತ್ತಮ ಜೀವನ ನಡೆಸಲು ಆ ಶಕ್ತಿಯನ್ನು ಬಳಸುವ ಸಮಯ ಬಂದಿದೆ. ನಾನು ಇನ್ನೂ ಕಾಯುತ್ತಿದ್ದೇನೆ. ನಾನು ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು’ ವಿಜಯಲಕ್ಷ್ಮಿ ದರ್ಶನ್ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು?

ಡಿಸೆಂಬರ್ 31ರಂದು ವಿಜಯಲಕ್ಷ್ಮಿ ದರ್ಶನ್ ಅವರು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಗರಂ ಆಗಿದ್ದಂತೆ ಕಂಡುಬಂದರು. ವಕೀಲರ ಜೊತೆ ಆಗಮಿಸಿ ತಮ್ಮ ದೂರಿನ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರು. ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಪೋಸ್ಟ್ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ