AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ

ಪವಿತ್ರಾಗಾಗಿ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್​ನ ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ-ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 12, 2024 | 7:36 AM

Share

ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಈ ಘಟನೆ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.

ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಈಗ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ.

ಇದನ್ನೂ ಓದಿ: ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ

ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ದರ್ಶನ್ ಜೈಲು ಸೇರಿದ ದುಃಖದಲ್ಲೇ ಈ ರೀತಿ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 12 June 24

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು