AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ

ಪವಿತ್ರಾಗಾಗಿ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್​ನ ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ-ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 12, 2024 | 7:36 AM

Share

ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಈ ಘಟನೆ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.

ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಈಗ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ.

ಇದನ್ನೂ ಓದಿ: ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ

ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ದರ್ಶನ್ ಜೈಲು ಸೇರಿದ ದುಃಖದಲ್ಲೇ ಈ ರೀತಿ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 12 June 24

Follow Us
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?