AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ

ಪವಿತ್ರಾಗಾಗಿ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್​ನ ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

Vijayalakshmi Darshan: ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಪಿಕ್ಚರ್​ ಡಿಲೀಟ್ ಮಾಡಿ, ದರ್ಶನ್​ನ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ-ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jun 12, 2024 | 7:36 AM

Share

ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಈ ಘಟನೆ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ಆರೋಪದ ಮೇಲೆ ದರ್ಶನ್, ಪವಿತ್ರಾ ಸೇರಿ 13 ಜನರನ್ನು ಬಂಧಿಸಲಾಗಿದೆ.

ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್​ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಈಗ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ. ಜೊತೆಗೆ ಬೇಸರ ಕೂಡ ಮೂಡಿಸಿದೆ.

ಇದನ್ನೂ ಓದಿ: ದರ್ಶನ್ ಮುಖದಲ್ಲಿ ಕಾಡಿದ ಚಿಂತೆಯ ಕಾರ್ಮೋಡ; ಜೈಲ್​ನಲ್ಲಿ ನಿದ್ದೆ ಮಾಡದೆ ಕಳೆದ ನಟ

ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್​ನ ಫಾಲೋ ಮಾಡುತ್ತಿದ್ದರು. ಇನ್ನು, ಇನ್​ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ದರ್ಶನ್ ಜೈಲು ಸೇರಿದ ದುಃಖದಲ್ಲೇ ಈ ರೀತಿ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Wed, 12 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು