AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಅಶ್ಲೀಲ ಕಾಮೆಂಟ್‌ಗಳ ವಿರುದ್ಧದ ದೂರಿನಲ್ಲಿ, ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂದು ಬಯಲಾಗಿದೆ. ನಕಲಿ ಐಡಿ ಬಳಸಿ ಕಾಮೆಂಟ್‌ ಮಾಡಿರುವ ಆರೋಪದ ಮೇಲೆ ಬಂಧಿತರು ಸದ್ಯ ಜೈಲಿನಲ್ಲಿದ್ದು, ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

ವಿಜಯಲಕ್ಷ್ಮೀಗೆ ಅವಾಚ್ಯವಾಗಿ ಬೈದವರಲ್ಲಿದ್ದಾರೆ ಸುದೀಪ್ ಫ್ಯಾನ್ಸ್; ಚಾರ್ಜ್​​ಶೀಟ್​​ನಲ್ಲಿ ಶಾಕಿಂಗ್ ವಿಷಯ
ದರ್ಶನ್-ವಿಜಯಲಕ್ಷ್ಮೀ
ರಾಚಪ್ಪಾಜಿ ನಾಯ್ಕ್
| Edited By: |

Updated on:Mar 12, 2026 | 8:47 AM

Share

ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು (Vijayalaxmi) ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಸಮರ ಸಾರಿದ್ದಾರೆ. ಈ ಸಂಬಂಧ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಪೊಲೀಸರು, ಹಲವರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ.

ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು ಆರೋಪಿಗಳ ವಿರುದ್ಧ ಸುಮಾರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್​ನಲ್ಲಿ ಆರು ಆರೋಪಿಗಳ ಹೇಳಿಕೆ ದಾಖಲು ಮಾಡಲಾಗಿದೆ. ಆರೋಪಿಗಳಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂಬ ವಿಷಯ ಬಹಿರಂಗವಾಗಿದೆ. ಎಲ್ಲರೂ ನಕಲಿ ಐಡಿಗಳನ್ನು ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡೋ ಉದ್ದೇಶಕ್ಕೆ ನಕಲಿ ಅಕೌಂಟ್ ಓಪನ್ ಮಾಡಿದ್ದರು ಎಂಬ ವಿಷಯ ಗೊತ್ತಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿಯನ್ನು ಟಾರ್ಗೆಟ್ ಮಾಡಿ ಬಂಧಿತರು ಕೆಟ್ಟ ರೀತಿಯಲ್ಲಿ ಫೋಟೋ ಹಾಕಿ ಕಾಮೆಂಟ್ ಮಾಡಿದ್ದರು ಎಂಬುದು ತಿಳಿದು ಬಂದಿದೆ. ಪೋಸ್ಟ್ ಮಾಡುತ್ತಿರುವುದು ಅಶ್ಲೀಲ ಎಂಬುದು ಗೊತ್ತಿದ್ದೇ ಕಾಮೆಂಟ್ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ಮೊಬೈಲ್ ಅನ್ನು ವಶಪಡಿಸಿಕೊಂಡು ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದ್ದು, ಡೇಟಾ ರಿಟ್ರೀವ್ ಮಾಡಿ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕಾಮೆಂಟ್ ಮಾಡಿದ 12 ಐಡಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ಕಂಪನಿಗಳಿಗೆ ಪತ್ರ ಬರೆಯಲಾಗಿದ್ದು, ಇನ್ನಷ್ಟೇ ಅವರಿಂದ ಉತ್ತರ ಬರಬೇಕಿದೆ. ಸದ್ಯ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸೋದಾಗಿ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ: 25 ವರ್ಷಗಳಲ್ಲಿ ದರ್ಶನ್ ಅಭಿಮಾನಿಗಳಿಗೆ ಎಂದಿಗೂ ಆ ಮಾತು ಹೇಳಿಲ್ಲ; ವಿಜಯಲಕ್ಷ್ಮೀ

ಇತ್ತ ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತಿದ್ದಂತೆ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್​ಗೆ ಜಾಮೀನು ಸಲ್ಲಿಕೆ ಮಾಡಿದ್ದಾರೆ. ಮಾರ್ಚ್ 24ಕ್ಕೆ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕಾಮೆಂಟ್ ಮಾಡಿದ ತಪ್ಪಿಗೆ 66 ದಿನಗಳಿಂದ ಆರು ಆರೋಪಿಗಳು ಜೈಲಿನಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:45 am, Thu, 12 March 26

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ