‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ

ಇತ್ತೀಚೆಗೆ ವಿಡಿಯೋ ಮಾಡಿ ಹಾಕಿದ್ದ ವಿಜಯಲಕ್ಷ್ಮೀ ಕರ್ನಾಟಕದಲ್ಲಿರುವ ಜನರು, ಅಭಿಮಾನಿಗಳು ಮತ್ತು ಚಿತ್ರರಂಗದ ಹಿರಿಯ ನಟರು ನನಗೆ ಸಹಾಯ ಮಾಡಿ ಎಂದು ಕೋರಿದ್ದರು.

‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ
ವಿಜಯಲಕ್ಷ್ಮೀ
Follow us
|

Updated on: Jun 03, 2021 | 9:30 PM

ನಾಗಮಂಡಲ, ಸೂರ್ಯವಂಶ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯವಾದ ನಟಿ ವಿಜಯಲಕ್ಷ್ಮೀ ಅವರ ಸಹೋದರಿ ಉಷಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಚೆನ್ನೈನಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಷಾ ಅವರಿಗೆ ಸಹಾಯ ಮಾಡುವಂತೆ ಅವರು ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಬಳಿ ಮನವಿ ಮಾಡಿಕೊಂಡಿದ್ದರು. ಈಗ ವಿನೋದ್​ ರಾಜ್​ ಅವರು ಸಹಾಯ ಮಾಡಿದ್ದಾರೆ.

ಉಷಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಿಸೋಕೆ ಹಣ ಬೇಕಾಗಿದೆ. . ದಯವಿಟ್ಟು ಇದನ್ನು ಶಿವಣ್ಣ ಅವರ ಗಮನಕ್ಕೆ ತನ್ನಿ ಎಂದು ಕೇಳಿಕೊಳ್ಳುತ್ತೇನೆ. ಇಲ್ಲಿಯೂ ರಜನಿಕಾಂತ್​ ಮುಂತಾದ ದೊಡ್ಡ ನಟರು ಇದ್ದಾರೆ. ಅವರಿಗೆ ಕರ್ನಾಟಕದ ಹಿರಿಯರು ವಿಷಯ ತಿಳಿಸಿದರೆ ನಮಗೆ ಸಹಾಯ ಆಗುತ್ತದೆ. ನನಗೆ ಅದನ್ನು ಒಬ್ಬಳೇ ಹೇಗೆ ಮಾಡಬೇಕು ಎಂದು ಗೊತ್ತಾಗುತ್ತಿಲ್ಲ’ ಎಂದು ಅವರು ಅಸಹಾಯಕತೆ ತೋಡಿಕೊಂಡಿದ್ದರು.

ಈ ಬಗ್ಗೆ ವಿಡಿಯೋ ಮಾಡಿರುವ ವಿಜಯಲಕ್ಷ್ಮೀ, ‘ಉಷಾ ಅವರು ಇಂದು ಮಾತನಾಡಿದ್ದಾರೆ. ವಿನೋದ್​ ರಾಜ್​ ಅವರು ಐದು ಸಾವಿರ ರೂಪಾಯಿ ಸಹಾಯ ಮಾಡಿದ್ದಾರೆ. ಶಿವಣ್ಣ ಅವರು ಆಶೀರ್ವಾದ ಮಾಡಿದ್ದಾರೆ. ನನ್ನ ಕಡೆಯಿಂದ ಏನೋ ತಪ್ಪಾಗಿದ್ದರೂ ಕ್ಷಮಿಸಿ. ನನ್ನ ಮನಸು ತುಂಬಾನೇ ಹಗುರವಾಗಿದೆ’ ಎಂದಿದ್ದಾರೆ.

‘ಯಾರೂ ಸಹಾಯ ಮಾಡಿಲ್ಲ ಅನ್ನೋ ಬೇಸರವಿಲ್ಲ. ಶಿವಣ್ಣ, ಯಶ್​ ಮೊದಲಾದವರ ಆಶೀರ್ವಾದ ಇದೆ. ಕರ್ನಾಟಕದ ಅಭಿಮಾನಿಗಳು ಕರೆ ಮಾಡಿ ಧೈರ್ಯ ತುಂಬಿದರು. ಇದು ನಾನು ಹೃದಯದಿಂದ ಹೇಳುತ್ತಿದ್ದೇನೆ. ನೀವು ಇಲ್ಲದೆ ಇದ್ದರೆ ನಾನು ಅನಾಥೆ. ಭವಿಷ್ಯದ ಬಗ್ಗೆ ನನಗೆ ನಂಬಿಕೆ ಬಂದಿದೆ. ಮಾಧ್ಯಮದವರೂ ನನಗೆ ಸಹಾಯ ಮಾಡಿದ್ದಾರೆ. ಅವರಿಗೂ ಧನ್ಯವಾದ ಎಂದಿದ್ದಾರೆ’ ವಿಜಯಲಕ್ಷ್ಮೀ.

ಇದನ್ನೂ ಓದಿ: ಚಿಂತಾಜನಕ ಸ್ಥಿತಿಯಲ್ಲಿ ‘ಸೂರ್ಯವಂಶ’ ನಟಿ ವಿಜಯಲಕ್ಷ್ಮೀ ಸಹೋದರಿ; ಸಹಾಯಕ್ಕಾಗಿ ಶಿವಣ್ಣನಿಗೆ ಮನವಿ

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್