AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ

ಇತ್ತೀಚೆಗೆ ವಿಡಿಯೋ ಮಾಡಿ ಹಾಕಿದ್ದ ವಿಜಯಲಕ್ಷ್ಮೀ ಕರ್ನಾಟಕದಲ್ಲಿರುವ ಜನರು, ಅಭಿಮಾನಿಗಳು ಮತ್ತು ಚಿತ್ರರಂಗದ ಹಿರಿಯ ನಟರು ನನಗೆ ಸಹಾಯ ಮಾಡಿ ಎಂದು ಕೋರಿದ್ದರು.

‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ
ವಿಜಯಲಕ್ಷ್ಮೀ
ರಾಜೇಶ್ ದುಗ್ಗುಮನೆ
|

Updated on: Jun 03, 2021 | 9:30 PM

Share

ನಾಗಮಂಡಲ, ಸೂರ್ಯವಂಶ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯವಾದ ನಟಿ ವಿಜಯಲಕ್ಷ್ಮೀ ಅವರ ಸಹೋದರಿ ಉಷಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಚೆನ್ನೈನಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಷಾ ಅವರಿಗೆ ಸಹಾಯ ಮಾಡುವಂತೆ ಅವರು ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಬಳಿ ಮನವಿ ಮಾಡಿಕೊಂಡಿದ್ದರು. ಈಗ ವಿನೋದ್​ ರಾಜ್​ ಅವರು ಸಹಾಯ ಮಾಡಿದ್ದಾರೆ.

ಉಷಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಿಸೋಕೆ ಹಣ ಬೇಕಾಗಿದೆ. . ದಯವಿಟ್ಟು ಇದನ್ನು ಶಿವಣ್ಣ ಅವರ ಗಮನಕ್ಕೆ ತನ್ನಿ ಎಂದು ಕೇಳಿಕೊಳ್ಳುತ್ತೇನೆ. ಇಲ್ಲಿಯೂ ರಜನಿಕಾಂತ್​ ಮುಂತಾದ ದೊಡ್ಡ ನಟರು ಇದ್ದಾರೆ. ಅವರಿಗೆ ಕರ್ನಾಟಕದ ಹಿರಿಯರು ವಿಷಯ ತಿಳಿಸಿದರೆ ನಮಗೆ ಸಹಾಯ ಆಗುತ್ತದೆ. ನನಗೆ ಅದನ್ನು ಒಬ್ಬಳೇ ಹೇಗೆ ಮಾಡಬೇಕು ಎಂದು ಗೊತ್ತಾಗುತ್ತಿಲ್ಲ’ ಎಂದು ಅವರು ಅಸಹಾಯಕತೆ ತೋಡಿಕೊಂಡಿದ್ದರು.

ಈ ಬಗ್ಗೆ ವಿಡಿಯೋ ಮಾಡಿರುವ ವಿಜಯಲಕ್ಷ್ಮೀ, ‘ಉಷಾ ಅವರು ಇಂದು ಮಾತನಾಡಿದ್ದಾರೆ. ವಿನೋದ್​ ರಾಜ್​ ಅವರು ಐದು ಸಾವಿರ ರೂಪಾಯಿ ಸಹಾಯ ಮಾಡಿದ್ದಾರೆ. ಶಿವಣ್ಣ ಅವರು ಆಶೀರ್ವಾದ ಮಾಡಿದ್ದಾರೆ. ನನ್ನ ಕಡೆಯಿಂದ ಏನೋ ತಪ್ಪಾಗಿದ್ದರೂ ಕ್ಷಮಿಸಿ. ನನ್ನ ಮನಸು ತುಂಬಾನೇ ಹಗುರವಾಗಿದೆ’ ಎಂದಿದ್ದಾರೆ.

‘ಯಾರೂ ಸಹಾಯ ಮಾಡಿಲ್ಲ ಅನ್ನೋ ಬೇಸರವಿಲ್ಲ. ಶಿವಣ್ಣ, ಯಶ್​ ಮೊದಲಾದವರ ಆಶೀರ್ವಾದ ಇದೆ. ಕರ್ನಾಟಕದ ಅಭಿಮಾನಿಗಳು ಕರೆ ಮಾಡಿ ಧೈರ್ಯ ತುಂಬಿದರು. ಇದು ನಾನು ಹೃದಯದಿಂದ ಹೇಳುತ್ತಿದ್ದೇನೆ. ನೀವು ಇಲ್ಲದೆ ಇದ್ದರೆ ನಾನು ಅನಾಥೆ. ಭವಿಷ್ಯದ ಬಗ್ಗೆ ನನಗೆ ನಂಬಿಕೆ ಬಂದಿದೆ. ಮಾಧ್ಯಮದವರೂ ನನಗೆ ಸಹಾಯ ಮಾಡಿದ್ದಾರೆ. ಅವರಿಗೂ ಧನ್ಯವಾದ ಎಂದಿದ್ದಾರೆ’ ವಿಜಯಲಕ್ಷ್ಮೀ.

ಇದನ್ನೂ ಓದಿ: ಚಿಂತಾಜನಕ ಸ್ಥಿತಿಯಲ್ಲಿ ‘ಸೂರ್ಯವಂಶ’ ನಟಿ ವಿಜಯಲಕ್ಷ್ಮೀ ಸಹೋದರಿ; ಸಹಾಯಕ್ಕಾಗಿ ಶಿವಣ್ಣನಿಗೆ ಮನವಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು