AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ

ಇತ್ತೀಚೆಗೆ ವಿಡಿಯೋ ಮಾಡಿ ಹಾಕಿದ್ದ ವಿಜಯಲಕ್ಷ್ಮೀ ಕರ್ನಾಟಕದಲ್ಲಿರುವ ಜನರು, ಅಭಿಮಾನಿಗಳು ಮತ್ತು ಚಿತ್ರರಂಗದ ಹಿರಿಯ ನಟರು ನನಗೆ ಸಹಾಯ ಮಾಡಿ ಎಂದು ಕೋರಿದ್ದರು.

‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ
ವಿಜಯಲಕ್ಷ್ಮೀ
ರಾಜೇಶ್ ದುಗ್ಗುಮನೆ
|

Updated on: Jun 03, 2021 | 9:30 PM

Share

ನಾಗಮಂಡಲ, ಸೂರ್ಯವಂಶ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯವಾದ ನಟಿ ವಿಜಯಲಕ್ಷ್ಮೀ ಅವರ ಸಹೋದರಿ ಉಷಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಚೆನ್ನೈನಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಷಾ ಅವರಿಗೆ ಸಹಾಯ ಮಾಡುವಂತೆ ಅವರು ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಬಳಿ ಮನವಿ ಮಾಡಿಕೊಂಡಿದ್ದರು. ಈಗ ವಿನೋದ್​ ರಾಜ್​ ಅವರು ಸಹಾಯ ಮಾಡಿದ್ದಾರೆ.

ಉಷಾ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಿಸೋಕೆ ಹಣ ಬೇಕಾಗಿದೆ. . ದಯವಿಟ್ಟು ಇದನ್ನು ಶಿವಣ್ಣ ಅವರ ಗಮನಕ್ಕೆ ತನ್ನಿ ಎಂದು ಕೇಳಿಕೊಳ್ಳುತ್ತೇನೆ. ಇಲ್ಲಿಯೂ ರಜನಿಕಾಂತ್​ ಮುಂತಾದ ದೊಡ್ಡ ನಟರು ಇದ್ದಾರೆ. ಅವರಿಗೆ ಕರ್ನಾಟಕದ ಹಿರಿಯರು ವಿಷಯ ತಿಳಿಸಿದರೆ ನಮಗೆ ಸಹಾಯ ಆಗುತ್ತದೆ. ನನಗೆ ಅದನ್ನು ಒಬ್ಬಳೇ ಹೇಗೆ ಮಾಡಬೇಕು ಎಂದು ಗೊತ್ತಾಗುತ್ತಿಲ್ಲ’ ಎಂದು ಅವರು ಅಸಹಾಯಕತೆ ತೋಡಿಕೊಂಡಿದ್ದರು.

ಈ ಬಗ್ಗೆ ವಿಡಿಯೋ ಮಾಡಿರುವ ವಿಜಯಲಕ್ಷ್ಮೀ, ‘ಉಷಾ ಅವರು ಇಂದು ಮಾತನಾಡಿದ್ದಾರೆ. ವಿನೋದ್​ ರಾಜ್​ ಅವರು ಐದು ಸಾವಿರ ರೂಪಾಯಿ ಸಹಾಯ ಮಾಡಿದ್ದಾರೆ. ಶಿವಣ್ಣ ಅವರು ಆಶೀರ್ವಾದ ಮಾಡಿದ್ದಾರೆ. ನನ್ನ ಕಡೆಯಿಂದ ಏನೋ ತಪ್ಪಾಗಿದ್ದರೂ ಕ್ಷಮಿಸಿ. ನನ್ನ ಮನಸು ತುಂಬಾನೇ ಹಗುರವಾಗಿದೆ’ ಎಂದಿದ್ದಾರೆ.

‘ಯಾರೂ ಸಹಾಯ ಮಾಡಿಲ್ಲ ಅನ್ನೋ ಬೇಸರವಿಲ್ಲ. ಶಿವಣ್ಣ, ಯಶ್​ ಮೊದಲಾದವರ ಆಶೀರ್ವಾದ ಇದೆ. ಕರ್ನಾಟಕದ ಅಭಿಮಾನಿಗಳು ಕರೆ ಮಾಡಿ ಧೈರ್ಯ ತುಂಬಿದರು. ಇದು ನಾನು ಹೃದಯದಿಂದ ಹೇಳುತ್ತಿದ್ದೇನೆ. ನೀವು ಇಲ್ಲದೆ ಇದ್ದರೆ ನಾನು ಅನಾಥೆ. ಭವಿಷ್ಯದ ಬಗ್ಗೆ ನನಗೆ ನಂಬಿಕೆ ಬಂದಿದೆ. ಮಾಧ್ಯಮದವರೂ ನನಗೆ ಸಹಾಯ ಮಾಡಿದ್ದಾರೆ. ಅವರಿಗೂ ಧನ್ಯವಾದ ಎಂದಿದ್ದಾರೆ’ ವಿಜಯಲಕ್ಷ್ಮೀ.

ಇದನ್ನೂ ಓದಿ: ಚಿಂತಾಜನಕ ಸ್ಥಿತಿಯಲ್ಲಿ ‘ಸೂರ್ಯವಂಶ’ ನಟಿ ವಿಜಯಲಕ್ಷ್ಮೀ ಸಹೋದರಿ; ಸಹಾಯಕ್ಕಾಗಿ ಶಿವಣ್ಣನಿಗೆ ಮನವಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ