AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ವಿಜಯ ಸಂಕೇಶ್ವರ ಸಾಧನೆ ಕಟ್ಟಿಕೊಟ್ಟ ‘ವಿಜಯಾನಂದ’ ಸಿನಿಮಾ ಟ್ರೇಲರ್

ವಿಜಯ ಸಂಕೇಶ್ವರ ಕುಟುಂಬ ಈಗಾಗಲೇ ಸಾರಿಗೆ ಹಾಗೂ ಮೀಡಿಯಾಗಳಲ್ಲಿ ಹೆಸರು ಮಾಡಿದೆ. ‘ವಿಜಯಾನಂದ’ ಸಿನಿಮಾ ಮೂಲಕ ಸಿನಿಮಾ ನಿರ್ಮಾಣಕ್ಕೂ ಇಳಿದಿದೆ ಕುಟುಂಬ.

ಉದ್ಯಮಿ ವಿಜಯ ಸಂಕೇಶ್ವರ ಸಾಧನೆ ಕಟ್ಟಿಕೊಟ್ಟ ‘ವಿಜಯಾನಂದ’ ಸಿನಿಮಾ ಟ್ರೇಲರ್
ವಿಜಯ್ ಸಂಕೇಶ್ವರ್
TV9 Web
| Edited By: |

Updated on:Nov 19, 2022 | 8:07 PM

Share

ಡಾ. ವಿಜಯ ಸಂಕೇಶ್ವರ (Vijay Sankeshwar) ಅವರು ವಿಆರ್​ಎಲ್​ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಕೇವಲ ಒಂದು ಲಾರಿಯಿಂದ ಆರಂಭವಾದ ಅವರ ಪಯಣ ಈಗ ದೊಡ್ಡ ಉದ್ಯಮವಾಗಿ ಬೆಳೆದು ನಿಂತಿದೆ. ಅವರು ಸಾವಿರಾರು ಜನರಿಗೆ ಕೆಲಸ ನೀಡಿದ್ದಾರೆ. ಅವರ ಸಾಧನೆ ಅನೇಕರಿಗೆ ಮಾದರಿ ಆಗಿದೆ. ಅವರ ಬಗ್ಗೆ ಬಯೋಪಿಕ್ ಬರಲಿದೆ ಎಂದಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಮೂಡಿತ್ತು. ಡಿಸೆಂಬರ್ 9ರಂದು ಸಿನಿಮಾ ರಿಲೀಸ್ ಆಗಲಿದ್ದು, ಈಗ ಚಿತ್ರದ ಟ್ರೇಲರ್ ರಿಲೀಸ್ ಮಾಡಲಾಗಿದೆ.

ವಿಜಯ ಸಂಕೇಶ್ವರ ಅವರ ಬದುಕಿನ ವಿವರಗಳು ರೋಚಕವಾಗಿವೆ. ಆ ಎಲ್ಲಾ ವಿಚಾರಗಳನ್ನು ಸ್ವತಃ ವಿಜಯ ಸಂಕೇಶ್ವರ ಅವರಿಂದ ಸಂಗ್ರಹಿಸಿ ರಿಷಿಕಾ ಶರ್ಮಾ ಅವರು ಸಿನಿಮಾ ಮಾಡಿದ್ದಾರೆ. ಬಯೋಪಿಕ್ ಮಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ, ಇದನ್ನು ಚಾಲೆಂಜ್ ಆಗಿ ಸ್ವೀಕರಿಸಿ ರಿಷಿಕಾ ಅವರು ‘ವಿಜಯಾನಂದ’ ಮಾಡಿದ್ದಾರೆ. ಟ್ರೇಲರ್ ನೋಡಿದ ನಂತರದಲ್ಲಿ ಸಿನಿಪ್ರಿಯರಿಗೆ ಚಿತ್ರದ ಬಗ್ಗೆ ಇರುವ ನಿರೀಕ್ಷೆ ಹೆಚ್ಚಾಗಿದೆ.

ವಿಜಯ ಸಂಕೇಶ್ವರ ಕುಟುಂಬ ಈಗಾಗಲೇ ಸಾರಿಗೆ ಹಾಗೂ ಮೀಡಿಯಾಗಳಲ್ಲಿ ಹೆಸರು ಮಾಡಿದೆ. ‘ವಿಜಯಾನಂದ’ ಸಿನಿಮಾ ಮೂಲಕ ಸಿನಿಮಾ ನಿರ್ಮಾಣಕ್ಕೂ ಇಳಿದಿದೆ ಕುಟುಂಬ. ಈ ಚಿತ್ರದ ಮೂಲಕ ವಿಜಯ ಸಂಕೇಶ್ವರ ಅವರ ಪುತ್ರ ಆನಂದ ಸಂಕೇಶ್ವರ ಅವರು ಸಿನಿಮಾ ನಿರ್ಮಾಣ ಕ್ಷೇತ್ರಕ್ಕೂ ಕಾಲಿರಿಸಿದ್ದಾರೆ. ‘ವಿಆರ್​ಎಲ್​ ಫಿಲ್ಮ್​ ಪ್ರೊಡಕ್ಷನ್ಸ್​’ ಎಂಬ ಸಂಸ್ಥೆ ಮೂಲಕ ‘ವಿಜಯಾನಂದ’ ಸಿದ್ಧಗೊಂಡಿದೆ.

ಕನ್ನಡದಲ್ಲಿ ಬಯೋಪಿಕ್​ಗಳ ಸಂಖ್ಯೆ ಕಡಿಮೆ. ಕರುನಾಡಿನಲ್ಲಿ ಅನೇಕ ಸಾಧಕರು ಇದ್ದರೂ ಕೂಡ ಅವರ ಜೀವನ ಕಥೆಯನ್ನು ಸಾರುವ ಸಿನಿಮಾಗಳು ಹೆಚ್ಚಾಗಿ ಮೂಡಿಬಂದಿಲ್ಲ. ಈ ಮೊದಲು ‘ಟ್ರಂಕ್’ ಚಿತ್ರ ನಿರ್ದೇಶನ ಮಾಡಿದ್ದ ರಿಷಿಕಾ ಅವರು ಈಗ ಕನ್ನಡದಲ್ಲಿ ಒಂದು ಬಯೋಪಿಕ್ ನೀಡಿದ್ದಾರೆ. ‘ಟ್ರಂಕ್’ ಸಿನಿಮಾಗೆ ಬಣ್ಣ ಹಚ್ಚಿದ್ದ ಉತ್ತರ ಕರ್ನಾಟಕದ ಪ್ರತಿಭಾವಂತ ನಟ ನಿಹಾಲ್ ಅವರು ವಿಜಯ ಸಂಕೇಶ್ವರ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಉದ್ಯಮಿ ವಿಜಯ ಸಂಕೇಶ್ವರ ಬಯೋಪಿಕ್​ ‘ವಿಜಯಾನಂದ’; ಉತ್ತರ ಕರ್ನಾಟಕದ ಪ್ರತಿಭೆಯೇ ಹೀರೋ

ತೆಲುಗು ಮತ್ತು ಮಲಯಾಳಂ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಅವರು ‘ವಿಜಯಾನಂದ’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕೀರ್ತನ್​ ಪೂಜಾರಿ ಛಾಯಾಗ್ರಹಣ, ಹೇಮಂತ್​ ಕುಮಾರ್​ ಡಿ. ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ.

Published On - 8:07 pm, Sat, 19 November 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ