‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’

ಕಂಠೀರವ ಸ್ಟುಡಿಯೋದಲ್ಲಿ ಕೋರ್ಟ್ ಸೆಟ್ ಹಾಕಿ ‘ಪಾರ್ಥನ್ ಪರಪಂಚ’ ಸಿನಿಮಾಗೆ ಚಿತ್ರೀಕರಣ ಮಾಡಲಾಗುತ್ತಿದೆ. ಶ್ರೀಹರ್ಷ ಎಂ.ಎನ್. ನಿರ್ದೇಶನದ ಈ ಸಿನಿಮಾದಲ್ಲಿ ವಿಕಾಶ್ ಉತ್ತಯ್ಯ, ಮಂದಾರಾ ಮುಂತಾದವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ರಂಗಾಯಣ ರಘು ಅವರು ಲಾಯರ್ ಪಾತ್ರ ಮಾಡುತ್ತಿದ್ದಾರೆ.

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’
Parthan Parapancha Movie Team

Updated on: Jan 26, 2026 | 7:29 PM

ಕಿರುತೆರೆಯ ‘ಅಣ್ಣಯ್ಯ’ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ (Vikash Uthaiah) ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪಾರ್ಥನ್ ಪರಪಂಚ’ (Parthan Parapancha) ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಇದೊಂದು ಕೋರ್ಟ್ ಹಾಲ್ ಡ್ರಾಮಾ ಸಿನಿಮಾ. ಶ್ರೀಹರ್ಷ ಎಂ.ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಿರಿ ಸಿನಿಮಾಸ್’ ಮೂಲಕ ಸೀತಾ ಹರ್ಷವರ್ಧನ್ ಅವರು ನಿರ್ಮಾಣ‌‌ ಮಾಡುತ್ತಿದ್ದಾರೆ. ವಿಕಾಶ್ ಜೊತೆ ಮಂದಾರ, ರಂಗಾಯಣ ರಘು, ಅಮಿತ್, ಸಂಪತ್ ಮೈತ್ರೇಯ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

‘ಪಾರ್ಥನ್ ಪರಪಂಚ’ ಸಿನಿಮಾಗೆ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೋರ್ಟ್ ಸೆಟ್ ಹಾಕಲಾಗಿದೆ. ಅದರಲ್ಲೇ ಸುದ್ದಿಗೋಷ್ಠಿ ಮಾಡಲಾಯಿತು. ಈ ವೇಳೆ ನಿರ್ದೇಶಕ ಶ್ರೀಹರ್ಷ ಮಾತನಾಡಿದರು. ‘ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಇರುವ ಕೋರ್ಟ್ ರೂಮ್ ಡ್ರಾಮಾ. ರಂಗಾಯಣ ರಘು ಅವರು ಡಿಫೆನ್ಸ್ ಲಾಯರ್ ಹಾಗೂ ಸೀತಾ ಅವರು ಪಬ್ಲಿಕ್ ಪ್ರಾಸಿಕ್ಯೂಟರ್ ಪಾತ್ರ ಮಾಡುತ್ತಿದ್ದಾರೆ. ಇಡೀ ಚಿತ್ರದ ಕಥೆ ಬೆಂಗಳೂರಲ್ಲಿ ನಡೆಯುತ್ತದೆ’ ಎಂದು ಅವರು ಹೇಳಿದರು.

ಹೀರೋ ವಿಕಾಶ್ ಅವರು ಮಾತನಾಡಿ, ‘ಇಂದಿನ ಕಾಲಕ್ಕೆ ಹೊಂದುವ ಕಥೆ ಇದು. ರಿಯಾಲಿಟಿಗೆ ಹತ್ತಿರವಾದ ಕಂಟೆಂಟ್ ಹೊಂದಿದೆ. ಒಂದು ಕೇಸ್ ಹೇಗೆ ತಿರುವುಗಳನ್ನು ಪಡೆಯುತ್ತಾ ಹೋಗುತ್ತದೆ ಎಂಬುದನ್ನು ನಿರ್ದೇಶಕರು ಬಹಳ ಚೆನ್ನಾಗಿ ಹೇಳುತ್ತ ಹೋಗಿದ್ದಾರೆ’ ಎಂದರು. ‘ಬ್ಲ್ಯಾಂಕ್’ ಸಿನಿಮಾ ಖ್ಯಾತಿಯ ನಟಿ ಮಂದಾರ ಅವರು ಈ ಸಿನಿಮಾದಲ್ಲಿ ಜೆನ್​ ಜೀ ಹುಡುಗಿಯಾಗಿ ನಟಿಸುತ್ತಿದ್ದಾರೆ.

ರಂಗಾಯಣ ರಘು ಮಾತನಾಡಿ, ‘ನಿರ್ದೇಶಕ ಹರ್ಷ ಈವರೆಗೆ ಯಾರೂ ಗೆಸ್ ಮಾಡಿರದಂಥ ಘಟನೆಯನ್ನು ಯೋಚನೆ ಮಾಡಿದ್ದಾರೆ. ಒಂದು ಕ್ಲೂ ಹಿಂದೆ ಹೋದಾಗ ಏನೇನಾಗುತ್ತೆ ಅನ್ನೋದನ್ನು ಚೆನ್ನಾಗಿ ಹೇಳುತ್ತಿದ್ದಾರೆ. ಟಗರು, ಅಜ್ಞಾತವಾಸಿ, ಶಾಖಾಹಾರಿ ನಂತರ ಇದು ನನಗೆ ಬೇರೆ ರೀತಿಯ ಪಾತ್ರ’ ಎಂದು ಹೇಳಿದರು. ಛಾಯಾಗ್ರಹಾಕ ಜೈಆನಂದ್ ಮಾತನಾಡಿ, ‘45 ದಿನಗಳ ಶೂಟಿಂಗ್ ಪ್ಲಾನ್ ಇದೆ. 25 ದಿನ ಕೋರ್ಟ್ ಹಾಲ್​ನಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ’ ಎಂದರು.

ಇದನ್ನೂ ಓದಿ: ವಿಷ್ಣುಗೆ ವಿಶೇಷ ಗೌರವ ಸಲ್ಲಿಸಿದ ವಿಕಾಶ್ ಉತ್ತಯ್ಯ

‘ಪಾರ್ಥನ್ ಪರಪಂಚ’ ಸಿನಿಮಾಗೆ ಅನಂತ ಆರ್ಯನ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ‘ನಾಲ್ಕು ಹಾಡುಗಳು ಈ ಸಿನಿಮಾದಲ್ಲಿ ಇರಲಿವೆ. ಇಂದೂ ನಾಗರಾಜ್, ಶ್ರೀಹರ್ಷ ಬೆಳ್ಮಣ್ಣು ಹಾಡಿದ್ದಾರೆ. ಜಸ್ಕರಣ್ ಸಿಂಗ್ ಸಹ ಒಂದು ಗೀತೆ ಹಾಡಲಿದ್ದಾರೆ’ ಎಂದು ಅನಂತ ಆರ್ಯನ್ ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us