AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ರಮ್ ರವಿಚಂದ್ರನ್ ಜೊತೆ ಕೈ ಜೋಡಿಸಿದ ಅಮೃತಾ ಸಿನಿ ಕ್ರಾಫ್ಟ್

ರವಿಚಂದ್ರನ್ ಮಕ್ಕಳಾದ ಮನೋರಂಜನ್ ಮತ್ತು ವಿಕ್ರಮ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿಕ್ರಮ್ ರವಿಚಂದ್ರನ್ ಅವರ ಹೊಸ ಚಿತ್ರಗಳ ಬಗ್ಗೆ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು. ಅಮೃತಾ ಸಿನಿ ಕ್ರಾಫ್ಟ್ ಮೂಲಕ ಉದ್ಯಮಿ ವಿಜಯ್ ಟಾಟಾ ಜೊತೆ ವಿಕ್ರಮ್ ರವಿಚಂದ್ರನ್ ಕೈ ಜೋಡಿಸಿದ್ದಾರೆ.

ವಿಕ್ರಮ್ ರವಿಚಂದ್ರನ್ ಜೊತೆ ಕೈ ಜೋಡಿಸಿದ ಅಮೃತಾ ಸಿನಿ ಕ್ರಾಫ್ಟ್
Vikram Ravichandran Birthday Celebration
ಮದನ್​ ಕುಮಾರ್​
|

Updated on: Aug 24, 2025 | 8:33 AM

Share

ನಟ ವಿಕ್ರಮ್ ರವಿಚಂದ್ರನ್ (Vikram Ravichandran) ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿ ಸಿನಿಮಾಗಳ ಬಗ್ಗೆ ಅಪ್​​ಡೇಟ್ ನೀಡಲಾಯಿತು. ಉದ್ಯಮಿ ವಿಜಯ್ ಟಾಟಾ ಅವರು ತಮ್ಮ ‘ಅಮೃತಾ ಸಿನಿ ಕ್ರಾಫ್ಟ್’ ಮೂಲಕ ವಿಕ್ರಮ್ ಅವರ ಹೊಸ ಸಿನಿಮಾವನ್ನು ನಿರ್ಮಿಸಲು ಮುಂದಾಗಿದ್ದಾರೆ. ಸಿನಿಮಾ ನಿರ್ಮಾಣದ ಜೊತೆಯಲ್ಲಿ ವಿತರಣೆ , ಮಾರ್ಕೆಟಿಂಗ್ ಸೇರಿದಂತೆ ಬೇರೆ ಸಿನಿಮಾಗಳ ಜೊತೆ ಕೈ ಜೋಡಿಸಲು ಅವರು ಸಜ್ಜಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವಿಕ್ರಮ್ ರವಿಚಂದ್ರನ್, ‘ಮುಧೋಳ್’ ಸಿನಿಮಾದ ನಿರ್ಮಾಪಕಿ ರಕ್ಷಾ, ಉದ್ಯಮಿ, ನಿರ್ಮಾಪಕ ವಿಜಯ್ ಟಾಟಾ (Vijay Tata) ಮುಂತಾದವರು ಪಾಲ್ಗೊಂಡಿದ್ದರು.

ಸುದ್ದಿಗೋಷ್ಠಿಯಲ್ಲಿ ವಿಕ್ರಮ್ ರವಿಚಂದ್ರನ್ ಅವರು ಮಾತನಾಡಿದರು. ‘ಸಾಮಾನ್ಯವಾಗಿ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ. ಬೇರೆ ಬೇರೆ ಕೆಲಸದಲ್ಲಿ ತೊಡಗಿಕೊಂಡಿರುತ್ತೇನೆ. ಈ ಬಾರಿ ನನ್ನ ಬರ್ತಡೇ ದಿನವೇ ಒಂದೆರಡು ದೊಡ್ಡ ಅನೌನ್ಸ್ಮೆಂಟ್ ಮಾಡಬೇಕು ಎಂದು ನಮ್ಮ ವಿಜಯ್ ಸರ್ ಹೇಳಿದ್ದರಿಂದ ನಿಮ್ಮ ಮುಂದೆ ಹೇಳಬೇಕೆಂದು ನಿರ್ಧರಿಸಿದ್ದೇವೆ’ ಎಂದು ಅವರು ಮಾತು ಆರಂಭಿಸಿದರು.

‘ನಾನು ಏನೇ ಹೇಳಿದರೂ ರವಿಚಂದ್ರನ್ ಮಗ ಎಂಬುದು ಎಲ್ಲರಿಗೂ ಗೊತ್ತೇ ಇದೆ. ನಾನು 2ನೇ ಸಿನಿಮಾ ಮಾಡಿದಾಗ ನಮ್ಮ ಅಣ್ಣ ನಟಿಸಿದ ‘ಮುಗಿಲು ಪೇಟೆ’ ಸಿನಿಮಾದ ನಿರ್ಮಾಣಕ್ಕೆ ಸಾಥ್ ಕೊಟ್ಟ ನಿರ್ಮಾಪಕಿ ರಕ್ಷಾ ಅವರು ನನಗೂ ಬೆಂಬಲವಾಗಿ ನಿಂತರು. ನನ್ನ ಡ್ರೀಮ್ ಪ್ರಾಜೆಕ್ಟ್​ಗೆ ಸಪೋರ್ಟ್ ಮಾಡುತ್ತಾ ಬಂದಿದ್ದಾರೆ. ನನ್ನ ಹೊಸ ಪ್ರಾಜೆಕ್ಟ್ಗೆ ಟೀಮ್ ಹುಡುಕುತ್ತಿದ್ದಾಗ ಒಬ್ಬ ಟ್ಯಾಲೆಂಟೆಡ್ ವ್ಯಕ್ತಿ ಸಿಕ್ಕರು. ಅವರೇ ನಿರ್ದೇಶಕ ಕಾರ್ತಿಕ್ ರಾಜು’ ಎಂದು ವಿಕ್ರಮ್ ರವಿಚಂದ್ರನ್ ಹೇಳಿದರು.

‘ನಾನು, ನಿರ್ದೇಶಕರು ಹಾಗೂ ನಿರ್ಮಾಪಕರು ಕೂತು ಚರ್ಚೆ ಮಾಡಿದಾಗ ಹುಟ್ಟಿಕೊಂಡ ಸಿನಿಮಾನೇ ‘ಮುಧೋಳ್’. ಎಲ್ಲವೂ ಅಂದುಕೊಂಡಂತೆ ಚೆನ್ನಾಗಿ ನಡೆದಿತ್ತು. ನಮ್ಮ ಪ್ರಕಾರ ಈ ಸಿನಿಮಾ ಬಹಳ ಜನರಿಗೆ ಲೈಫ್ ಆಗಬೇಕು. ನನ್ನನ್ನೂ ಸೇರಿದಂತೆ ಸಿನಿಮಾದ ಡೈರೆಕ್ಟರ್, ಸಂಗೀತ ನಿರ್ದೇಶಕರು, ಎಡಿಟರ್ ಹಾಗೂ ಬಹಳಷ್ಟು ಜನರು ಹೊಸಬರು’ ಎಂದರು ವಿಕ್ರಮ್.

‘ಈ ಸಿನಿಮಾ ಸರಿಯಾದ ಸಮಯದಲ್ಲಿ ದೊಡ್ಡ ಕೊಲಾಬ್ರೇಶನ್ ಮೂಲಕ ಪ್ರೇಕ್ಷಕರ ಮುಂದೆ ಬರಬೇಕು ಎಂಬ ಹುಡುಕಾಟದಲ್ಲಿ ಇದ್ದಾಗ ಡೈರೆಕ್ಟರ್ ಋಷಿ ಹೇಳಿದ ಕಥೆ ಕೇಳಿ ಇಷ್ಟ ಆಯಿತು. ನಿರ್ಮಾಪಕರು ವಿಜಯ್ ಟಾಟಾ ಎಂಬುದು ಗೊತ್ತಾಗಿತು. ಆಗ ಸಿನಿಮಾ ಮಾಡೋಣ ಅಂತ ನಿರ್ಧಾರ ಮಾಡಿದೆ. ಅಮೃತಾ ಸಿನಿ ಕ್ರಾಫ್ಟ್ ಮೂಲಕ ಸಿನಿಮಾ ಅನೌನ್ಸ್ ಆಯಿತು’ ಎಂದು ವಿಕ್ರಮ್ ರವಿಚಂದ್ರನ್ ಹೇಳಿದರು.

ಇದನ್ನೂ ಓದಿ: ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ

‘ಬಳಿಕ ಮುಧೋಳ್ ಬಗ್ಗೆ ಕೂಡ ವಿಜಯ್ ಟಾಟಾ ಕೇಳಿದರು. ಸಿನಿಮಾದ ಕಂಟೆಂಟ್ ತೋರಿಸಿದೆ. ಅವರಿಗೆ ತುಂಬಾ ಇಷ್ಟವಾಯಿತು. ಅಲ್ಲಿಂದ ಸ್ವಲ್ಪ ಬದಲಾವಣೆ ಆಯಿತು. ನಿರ್ಮಾಪಕಿ ರಕ್ಷಾ ಮತ್ತು ವಿಜಯ್ ಚರ್ಚೆ ಮಾಡಿದ ನಂತರ ನಮ್ಮ ತಂಡದ ಜೊತೆ ಅಮೃತಾ ಸಿನಿ ಕ್ರಾಫ್ಟ್ ಸಾಥ್ ನೀಡಿದೆ. ನಮ್ಮ ಮುಧೋಳ್ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಸಹಯೋಗ ಮಾಡಿಕೊಂಡಿದ್ದೇವೆ’ ಎಂದು ವಿಕ್ರಮ್ ರವಿಚಂದ್ರನ್ ಅವರು ಅಪ್​ಡೇಟ್ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ