AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ಪ್ರೇಕ್ಷಕರು ಮೆಚ್ಚಿದ ‘ತ್ರಿವಿಕ್ರಮ’ ಸಿನಿಮಾ; ಹೌಸ್​ಫುಲ್​ ಆಗಿದ್ದಕ್ಕೆ ಚಿತ್ರತಂಡ​ ಹ್ಯಾಪಿ

Vikram Ravichandran | Trivikrama: ಮೊದಲ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಉತ್ತಮ ಸ್ಪಂದನೆ ಕಂಡು ವಿಕ್ರಮ್​ ರವಿಚಂದ್ರನ್​ ಖುಷಿ ಆಗಿದ್ದಾರೆ. ಗೆಲುವಿನ ಬಗ್ಗೆ ನಿರ್ದೇಶಕ ಸಹನಮೂರ್ತಿ, ನಿರ್ಮಾಪಕ ಸೋಮಣ್ಣ ಮಾತನಾಡಿದ್ದಾರೆ.

ಫ್ಯಾಮಿಲಿ ಪ್ರೇಕ್ಷಕರು ಮೆಚ್ಚಿದ ‘ತ್ರಿವಿಕ್ರಮ’ ಸಿನಿಮಾ; ಹೌಸ್​ಫುಲ್​ ಆಗಿದ್ದಕ್ಕೆ ಚಿತ್ರತಂಡ​ ಹ್ಯಾಪಿ
ಆಕಾಂಕ್ಷಾ ಶರ್ಮಾ. ವಿಕ್ರಮ್​, ಸೋಮಣ್ಣ, ಸಹನಮೂರ್ತಿ
TV9 Web
| Edited By: |

Updated on: Jun 30, 2022 | 7:15 AM

Share

ನಟ ರವಿಚಂದ್ರನ್​ (Ravichandran) ಅವರು ಹಲವಾರು ಸಿನಿಮಾಗಳಲ್ಲಿ ಕೌಟುಂಬಿಕ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದುಂಟು. ಈಗ ಅದೇ ಹಾದಿಯಲ್ಲಿ ಅವರ ಪುತ್ರ ವಿಕ್ರಮ್​ ರವಿಚಂದ್ರನ್​ ಕೂಡ ಸಾಗುತ್ತಿದ್ದಾರೆ. ಹೌದು, ವಿಕ್ರಮ್​ ನಟನೆಯ ‘ತ್ರಿವಿಕ್ರಮ’ ಸಿನಿಮಾ ನೋಡಿದ ಫ್ಯಾಮಿಲಿ ಆಡಿಯನ್ಸ್​ ಮೆಚ್ಚಿಕೊಂಡಿದ್ದಾರೆ. ಇದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ವಿಕ್ರಮ್​ ರವಿಚಂದ್ರನ್​ (Vikram Ravichandran) ನಟನೆಯ ಮೊದಲ ಸಿನಿಮಾ ಇದು. ಚೊಚ್ಚಲ ಚಿತ್ರದಲ್ಲೇ ಅವರು ಪ್ರೇಕ್ಷಕರ ಮನೆಮಗನಾಗಲು ಪ್ರಯತ್ನಿಸಿದ್ದಾರೆ. ಜೂನ್​ 24ರಂದು ‘ತ್ರಿವಿಕ್ರಮ’ ಬಿಡುಗಡೆ ಆಯಿತು. ಹಲವು ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಕಾಲೇಜು ವಿದ್ಯಾರ್ಥಿಗಳು ಮಾತ್ರವಲ್ಲದೇ ಮಹಿಳೆಯರು, ಮಕ್ಕಳು ಹಾಗೂ ವಯಸ್ಸಾದವರು ಕೂಡ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿರುವುದರಿಂದ ‘ತ್ರಿವಿಕ್ರಮ’ (Trivikrama) ಬಳಗದವರ ಮುಖದಲ್ಲಿ ನಗು ಮೂಡಿದೆ.

ಈ ಸಿನಿಮಾಗೆ ‘ಸೋಮಣ್ಣ ಟಾಕೀಸ್​’ ಮೂಲಕ ರಾಮ್ಕೋ ಸೋಮಣ್ಣ ಅವರು ಬಂಡವಾಳ ಹೂಡಿದ್ದಾರೆ. ಸಹನಮೂರ್ತಿ ನಿರ್ದೇಶನ ಮಾಡಿದ್ದಾರೆ. ಹಲವು ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಬಗ್ಗೆ ಸೋಮಣ್ಣ ಮಾಹಿತಿ ನೀಡಿದ್ದಾರೆ. ‘ಜನರು ನಮ್ಮ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಮೊದಲ ಮೂರು ದಿನ ನಾವು ಅಂದುಕೊಂಡಿದ್ದಕ್ಕಿಂತಲೂ ಚೆನ್ನಾಗಿ ಕಲೆಕ್ಷನ್​ ಆಗಿದೆ. ಶೋಗಳ ಸಂಖ್ಯೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ವಿಕ್ರಮ್​ ಜೊತೆ ಮತ್ತೊಂದು ಸಿನಿಮಾ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

ನಿರ್ದೇಶಕ ಸಹನಮೂರ್ತಿ ಅವರ ಕಾರ್ಯಕ್ಕೂ ಮೆಚ್ಚುಗೆ ವ್ಯಕ್ತವಾಗಿದೆ. ‘ಸಿನಿಮಾ ನೋಡಿದ ಪ್ರೇಕ್ಷಕರಿಂದ ಪಾಸಿಟಿವ್​ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರದಲ್ಲಿ ಎಲ್ಲ ಎಮೋಷನ್ಸ್​ ಇರುವುದಕ್ಕೆ ಜನರು ಎಂಜಾಯ್​ ಮಾಡುತ್ತಿದ್ದಾರೆ. ಪ್ರೀತಿಗಾಗಿ ಹಂಬಲಿಸುವ ಎಲ್ಲ ಮನಸ್ಸುಗಳಿಗೆ ನಮ್ಮ ಸಿನಿಮಾ ಇಷ್ಟ ಆಗಿದೆ’ ಎಂದು ಸಹನಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ
Image
ಕ್ರೇಜಿಸ್ಟಾರ್ ರವಿಚಂದ್ರನ್​ಗೆ ಡಾಕ್ಟರೇಟ್ ಘೋಷಣೆ ಮಾಡಿದ ಬೆಂಗಳೂರು ನಗರ ವಿವಿ
Image
ರವಿಚಂದ್ರನ್​ ಪುತ್ರ ಕನ್ನಡ ಸರಿಯಾಗಿ ಕಲಿತಿದ್ದು ಹೇಗೆ? ಮನುರಂಜನ್​ ನೀಡಿದ ವಿವರಣೆ ಇಲ್ಲಿದೆ..
Image
‘ಮೆಗಾ ಸ್ಟಾರ್’​ ಚಿರಂಜೀವಿ ಮತ್ತು ರವಿಚಂದ್ರನ್​ ನಡುವಿನ ಸ್ನೇಹ ವಿವರಿಸಲು ಈ ಒಂದು ಘಟನೆ ಸಾಕು
Image
ರವಿಚಂದ್ರನ್​ ಸದಾ ಕಪ್ಪು ಬಟ್ಟೆ ಹಾಕೋದು ಯಾಕೆ? ಎಲ್ಲರ ಎದುರು ಗುಟ್ಟು ರಟ್ಟು ಮಾಡಿದ ಸುದೀಪ್​!

ಆಕಾಂಕ್ಷಾ ಶರ್ಮಾ ಮತ್ತು ವಿಕ್ರಮ್​ ರವಿಚಂದ್ರನ್​ ಅವರು ಜೋಡಿಯಾಗಿ ನಟಿಸಿದ ಈ ಚಿತ್ರದಲ್ಲಿ ಹಲವು ಕಲಾವಿದರು ಅಭಿನಯಿಸಿದ್ದಾರೆ. ಮೊದಲ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಉತ್ತಮ ಸ್ಪಂದನೆ ಕಂಡು ವಿಕ್ರಮ್​ ಅವರು ಖುಷಿ ಆಗಿದ್ದಾರೆ. ‘ನಿರ್ದೇಶಕರು ಹೇಳಿದ ರೀತಿಯಲ್ಲಿ ಪಾತ್ರ ಮಾಡಿದ್ದೇನೆ ಎಂಬ ತೃಪ್ತಿ ಇದೆ. ಸುದೀಪ್​ ಅವರು ಟ್ವೀಟ್​ ಮಾಡಿ ಬೆಂಬಲ ನೀಡಿದ್ದಾರೆ. ಅದರಿಂದ ತುಂಬ ಖುಷಿ ಆಗಿದೆ. ಹಲವು ಸೆಲೆಬ್ರಿಟಿಗಳು ಸಿನಿಮಾ ನೋಡುತ್ತೇನೆ ಅಂತ ಹೇಳಿದ್ದಾರೆ. ನಮಗೆಲ್ಲ ಇದು ಹೊಸದು. ಯಾವುದನ್ನೂ ತಲೆಗೆ ತೆಗೆದುಕೊಳ್ಳಲು ನನಗೆ ಇಷ್ಟ ಇಲ್ಲ. ಮಾಡುವಂತಹ ಕೆಲಸ ಇನ್ನೂ ಇದೆ’ ಎಂದು ವಿಕ್ರಮ್​ ರವಿಚಂದ್ರನ್​ ಹೇಳಿದ್ದಾರೆ.

ಇದನ್ನೂ ಓದಿ: ‘ಹುಡುಗಿಯರನ್ನು ಮುಟ್ಟದೇ ನಿಂಗೆ ಸಿನಿಮಾ ಮಾಡೋಕೆ ಬರಲ್ವಾ?’: ರವಿಚಂದ್ರನ್​ಗೆ ನೇರ ಪ್ರಶ್ನೆ ಕೇಳಿದ್ದ ಪತ್ನಿ

ರವಿಚಂದ್ರನ್​ ಮಗನ ಮದುವೆ ಆಹ್ವಾನ ಪತ್ರಿಕೆಯಲ್ಲಿ ಹೊಸ ನಟಿಯ ಹೆಸರು? ವೈರಲ್​ ಫೋಟೋದ ಅಸಲಿಯತ್ತು ಇಲ್ಲಿದೆ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ