AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್​ನಿಂದ ಮತ್ತೊಂದು ಎಡವಟ್ಟು; ತಮಿಳು ಚಿತ್ರದಲ್ಲಿ ರಾಜ್​ಕುಮಾರ್​ ಹೆಸರು

ಗೂಗಲ್​ನಲ್ಲಿ Vikram Vedha Cast ಎಂದು ಸರ್ಚ್​ ಮಾಡಿದರೆ ವಿಜಯ್​ ಸೇತುಪತಿ, ಆರ್​. ಮಾಧವನ್​, ಶ್ರದ್ಧಾ ಶ್ರೀನಾಥ್​ ಜತೆಗೆ ರಾಜ್​ಕುಮಾರ್​ ಹೆಸರು ಕೂಡ ತೋರಿಸುತ್ತಿದೆ.

ಗೂಗಲ್​ನಿಂದ ಮತ್ತೊಂದು ಎಡವಟ್ಟು; ತಮಿಳು ಚಿತ್ರದಲ್ಲಿ ರಾಜ್​ಕುಮಾರ್​ ಹೆಸರು
ಮತ್ತೊಮ್ಮೆ ಸಾಬೀತಾಯ್ತು ಕನ್ನಡಿಗರ ತಾಕತ್ತು; ಅಣ್ಣಾವ್ರ ವಿಚಾರದಲ್ಲಿ ತಪ್ಪು ತಿದ್ದಿಕೊಂಡ ಗೂಗಲ್​
ರಾಜೇಶ್ ದುಗ್ಗುಮನೆ
|

Updated on: Jun 21, 2021 | 6:32 PM

Share

Ugliest Language of India ಎಂದು ಸರ್ಚ್​​ ಮಾಡಿದರೆ ಕನ್ನಡ ಎಂದು ಬರುತ್ತಿತ್ತು. ಈ ಬಗ್ಗೆ ಕನ್ನಡಿಗರು ಸಿಟ್ಟಿಗೆದ್ದು, ದೊಡ್ಡ ಆಂದೋಲನವನ್ನೇ ನಡೆಸಿದರು. ಪರಿಣಾಮ ಗೂಗಲ್​ ಈ ತಪ್ಪನ್ನು ಸರಿಪಡಿಸಿಕೊಂಡಿತ್ತು. ಅಲ್ಲದೆ, ಕನ್ನಡಿಗರಲ್ಲಿ ಕನ್ನಡದಲ್ಲೇ ಕ್ಷಮೆ ಕೇಳಿತ್ತು. ಈಗ ಗೂಗಲ್​ ಮತ್ತೊಂದು ಅಂಥದ್ದೇ ಎಡವಟ್ಟು ಮಾಡಿದ್ದು, ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಹೌದು, ಡಾ. ರಾಜ್​ಕುಮಾರ್​ ವಿಚಾರದಲ್ಲಿ ಗೂಗಲ್​ ಎಡವಟ್ಟೊಂದನ್ನು ಮಾಡಿಕೊಂಡಿದೆ. ವಿಜಯ್​ ಸೇತುಪತಿ ನಟಿಸಿದ ‘ವಿಕ್ರಮ್ ವೇದ’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ರಾಜ್​ಕುಮಾರ್​ ನಟಿಸಿದ್ದಾರೆ ಎಂದು ಗೂಗಲ್​ ಹೇಳುತ್ತಿದೆ. ಪುಷ್ಕರ್​-ಗಾಯತ್ರಿ ನಿರ್ದೇಶನದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಚಿತ್ರ ವಿಜಯ್​ ಸೇತುಪತಿ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್​ ನೀಡಿತ್ತು. ಈ ಚಿತ್ರದಲ್ಲಿ ರಾಜ್​ಕುಮಾರ್​ ನಟಿಸಿದ್ದಾರೆ ಎಂದು ಗೂಗಲ್​ ಹೇಳುತ್ತಿದೆ. ಈ ಎಡವಟ್ಟಿಗೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಗೂಗಲ್​ನಲ್ಲಿ Vikram Vedha Cast ಎಂದು ಸರ್ಚ್​ ಮಾಡಿದರೆ ವಿಜಯ್​ ಸೇತುಪತಿ, ಆರ್​. ಮಾಧವನ್​, ಶ್ರದ್ಧಾ ಶ್ರೀನಾಥ್​ ಜತೆಗೆ ರಾಜ್​ಕುಮಾರ್​ ಹೆಸರು ಕೂಡ ತೋರಿಸುತ್ತಿದೆ. ಹಾಫ್​ ಬಾಯ್ಲ್​ ಅನ್ನೋದು ಪಾತ್ರದ ಹೆಸರು. ಈ ಬಗ್ಗೆ ಈಗ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಅಂದಹಾಗೆ, ವಿಕ್ರಮ್​ ವೇದಾ ಸಿನಿಮಾದಲ್ಲಿ ಹಾಫ್​ ಬಾಯ್ಲ್​ ಎನ್ನುವ ಪಾತ್ರವನ್ನು ರಾಜ್​ಕುಮಾರ್​ ಹೆಸರಿನ ವ್ಯಕ್ತಿ ಮಾಡಿದ್ದಿರಬಹುದು. ಈ ಕಾರಣಕ್ಕೆ ಗೂಗಲ್​ ತಪ್ಪಾಗಿ ಅರ್ಥೈಸಿಕೊಂಡು ವರನಟ ರಾಜ್​ಕುಮಾರ್​ ಹೆಸರು ತೋರಿಸುತ್ತಿದೆ ಎನ್ನಲಾಗುತ್ತಿದೆ.

Ugliest Language of India ಎಂದು ಸರ್ಚ್ ಮಾಡಿದರೆ ಕನ್ನಡ ಎಂದು ಪ್ರದರ್ಶಿಸುತ್ತಿದ್ದ ಬಗ್ಗೆ ಅಪಾರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಗೂಗಲ್ ಈ ಬಗ್ಗೆ ಕ್ಷಮೆ ಯಾಚಿಸಿತ್ತು. ‘ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ ಇಂಟರ್​ನೆಟ್​ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಕ್ರಮ ಕೈಗೊಳ್ಳುತ್ತೇವೆ. ಮತ್ತು ನಮ್ಮ ಅಲ್ಗೋರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲರಾಗಿರುವುದನ್ನು ಮುಂದುವರೆಸುತ್ತೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ’ ಎಂದು ಗೂಗಲ್​ ಹೇಳಿತ್ತು.

ಇದನ್ನೂ ಓದಿ: Ugliest Language in India: ಕನ್ನಡಿಗರ ಸ್ವಾಭಿಮಾನ ಕೆಣಕಿದ ಗೂಗಲ್​; ಕನ್ನಡವನ್ನು ಕೊಳಕು ಭಾಷೆ ಎಂದು ಅಪಮಾನಿಸಿದ ಸರ್ಚ್​ ಎಂಜಿನ್

Ugliest Language of India: ಕನ್ನಡಿಗರ ಕ್ಷಮೆ ಕೇಳಿದ ಗೂಗಲ್​; ಕನ್ನಡದಲ್ಲೇ ಟ್ವೀಟ್​ ಮಾಡಿ ತಪ್ಪೊಪ್ಪಿಕೊಂಡ ಸಂಸ್ಥೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!