AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀಲ್‌ಚೇರ್‌ ರೋಮಿಯೋ’ ಚಿತ್ರಕ್ಕೆ ಕಿಚ್ಚನ ಸಾಥ್; ಇಡೀ ತಂಡಕ್ಕೆ ಸಿಕ್ತು ಸುದೀಪ್ ಕಡೆಯಿಂದ ಬೆಸ್ಟ್ ವಿಶ್

‘ವೀಲ್‌ಚೇರ್‌ ರೋಮಿಯೋ' ಸಿನಿಮಾ ಬಗ್ಗೆ ಕಿಚ್ಚ ಸುದೀಪ್​ ಟ್ವೀಟ್​ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮಯೂರಿ ಮತ್ತು ರಾಮ್ ಚೇತನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

‘ವೀಲ್‌ಚೇರ್‌ ರೋಮಿಯೋ' ಚಿತ್ರಕ್ಕೆ ಕಿಚ್ಚನ ಸಾಥ್; ಇಡೀ ತಂಡಕ್ಕೆ ಸಿಕ್ತು ಸುದೀಪ್ ಕಡೆಯಿಂದ ಬೆಸ್ಟ್ ವಿಶ್
ಮಯೂರಿ, ರಾಮ್ ಚೇತನ್​
TV9 Web
| Edited By: |

Updated on:May 30, 2022 | 3:16 PM

Share

ಗಾಂಧಿನಗರದ ಅಂಗಳದಲ್ಲೀಗ ಕಾಲಿಲ್ಲದ ರೋಮಿಯೋ ಹಾಗೂ ದೃಷ್ಟಿ ಇಲ್ಲದ ಜೂಲಿಯಟ್ ನಡುವಿನ ಮಧುರ ಪ್ರೇಮಕಥನದ ‘ವೀಲ್‌ಚೇರ್‌ ರೋಮಿಯೋ’ (Wheelchair Romeo) ಸಿನಿಮಾದ್ದೇ ಟಾಕ್. ಟೀಸರ್, ಟ್ರೇಲರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಇಮ್ಮಡಿಗೊಳಿಸಿದ್ದ ಈ ಕನ್ನಡ ಚಿತ್ರವು (Kannada Cinema) ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಕಳೆದ ಶುಕ್ರವಾರ (ಮೇ 27) ಥಿಯೇಟರ್ ನಲ್ಲಿ ಜರ್ನಿ ಶುರು ಮಾಡಿದ್ದ ‘ವೀಲ್‌ಚೇರ್‌ ರೋಮಿಯೋ’ ಸಿನಿಮಾಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸೂಕ್ಷ್ಮ ಹಾಗೂ ಗಂಭೀರ ವಿಷ್ಯವನ್ನು ಹ್ಯೂಮರಾಸ್ಸಾಗಿ ಹೇಳಿರುವ ಅಪರೂಪದ ಕಥೆಗೆ ನಟ ಕಿಚ್ಚ ಸುದೀಪ್ (Kichcha Sudeep) ಬೆಂಬಲ ನೀಡಿದ್ದಾರೆ. ಸಿನಿಮಾಗೆ ಒಳ್ಳೆ ಮಿಮರ್ಶೆ ಸಿಗುತ್ತಿದೆ. ಇಡೀ ‘ವೀಲ್‌ಚೇರ್‌ ರೋಮಿಯೋ’ ತಂಡಕ್ಕೆ ಒಳ್ಳೆದಾಗಲಿ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಸಿದ್ಧ ಸೂತ್ರಗಳಿಂದ ಹೊರ ಬಂದು ನಟರಾಜ್ ಒಳ್ಳೆಯ ಕಥೆಗೆ ಜೀವ ತುಂಬಿದ್ದಾರೆ. ಹೀರೋ ಅಂದ್ರೆ ಸಿಕ್ಸ್ ಪ್ಯಾಕ್ ಇರಬೇಕು. ಆತ ಹೊಡಿಬಡಿ ದೃಶ್ಯಗಳಲ್ಲಿ ಮಿಂಚ್ಬೇಕು. ಹೀರೋಯಿನ್ ಅಂದ್ರೆ ಗ್ಲಾಮರ್ ಎಂಬ ಕಾನ್ಸೆಪ್ಟ್​ಗಳನ್ನು ಪಕ್ಕಕ್ಕಿಟ್ಟು ನಟರಾಜ್, ಕಾಲಿಲ್ಲದ ಹೀರೋ, ಕಣ್ಣು ಕಾಣದ ವೇಶ್ಯೆ ಪಾತ್ರಗಳ ಕಥೆಯನ್ನು ತೆರೆಮೇಲೆ ಸುಂದರವಾಗಿ ಹೆಣೆದಿದ್ದು, ಮೊದಲ ಪ್ರಯತ್ನದಲ್ಲಿ ಚಿತ್ರರಂಗದ ಭರವಸೆಯ ನಿರ್ದೇಶಕ ಅನ್ನೋದನ್ನು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ
Image
Wheel Chair Romeo Movie: ‘ವೀಲ್ ಚೇರ್ ರೋಮಿಯೋ’ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ ಕಿಚ್ಚ ಸುದೀಪ್
Image
ಅಜಯ್ ದೇವಗನ್-ಕಿಚ್ಚ ಸುದೀಪ್ ಬಾಕ್ಸ್ಆಫೀಸ್ ಕ್ಲ್ಯಾಶ್​ಗೆ ಬ್ರೇಕ್​; ರಿಲೀಸ್ ಡೇಟ್ ಮುಂದಕ್ಕೆ
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?

ಗುರು ಕಶ್ಯಪ್ ಪಂಚಿಂಗ್ ಡೈಲಾಗ್ ಬಲದ ಜೊತೆಗೆ ರಾಮ್ ಚೇತನ್, ಮಯೂರಿ, ಸುಚೇಂದ್ರ ಪ್ರಸಾದ್, ರಂಗಾಯಣ ರಘು, ತಬಲನಾಣಿ ಎಲ್ಲರೂ ತಮ್ಮ ಪ್ರಬುದ್ಧ ಅಭಿನಯದ ಮೂಲಕ ಗಮನಸೆಳೆಯುತ್ತಾರೆ. ಭರತ್ ಬಿಜೆ ಸಂಗೀತ ನಿರ್ದೇಶನದ ಹಾಡುಗಳು ಕೇಳುಗರನ್ನು ಮಂತ್ರಮುಗ್ಧರನ್ನಾಗಿ ಮಾಡಿದ್ರೆ, ಸಂತೋಷ್ ಪಾಂಡಿ ಕ್ಯಾಮೆರಾ ಕೆಲಸ ಸೊಗಸಾಗಿ ಮೂಡಿ ಬಂದಿದೆ. ಒಂದೊಳ್ಳೆ ಮನರಂಜನೆ ನೀಡುವ ಸಿನಿಮಾವನ್ನು ತಿಮ್ಮಪ್ಪ ವೆಂಕಟಾಚಲಯ್ಯ ನಿರ್ಮಾಣ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Mon, 30 May 22

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!