AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್

Jacqueline Fernandez: ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು

‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್
ಜಾಕ್ವೆಲಿನ್​ ಫರ್ನಾಂಡಿಸ್
TV9 Web
| Edited By: |

Updated on: Sep 16, 2021 | 3:43 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಿಕ್ರಾಂತ್​ ರೋಣ’ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದೆ. ಸೆಪ್ಟೆಂಬರ್ 25ರ ಒಳಗೆ ಹೇಳಿಕೆ ದಾಖಲಿಸಲು ಸೂಚಿಸಿದೆ. ಇತ್ತೀಚೆಗೆ ಅವರು ದೆಹಲಿಯ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ ಐದು ಗಂಟೆಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವಿಚಾರಣೆ ವೇಳೆ ಎರಡನೇ ಬಾರಿ ಮತ್ತೆ ಬರುವಂತೆ ಸಮನ್ಸ್​ ನೀಡುತ್ತೇವೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದರು ಎನ್ನಲಾಗಿದೆ. 

ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್​ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್​ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿತ್ತು.

ಸುಕೇಶ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್​ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್​ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.

ಇದನ್ನೂ ಓದಿ: ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು