AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್

Jacqueline Fernandez: ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು

‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್
ಜಾಕ್ವೆಲಿನ್​ ಫರ್ನಾಂಡಿಸ್
TV9 Web
| Edited By: |

Updated on: Sep 16, 2021 | 3:43 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಿಕ್ರಾಂತ್​ ರೋಣ’ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದೆ. ಸೆಪ್ಟೆಂಬರ್ 25ರ ಒಳಗೆ ಹೇಳಿಕೆ ದಾಖಲಿಸಲು ಸೂಚಿಸಿದೆ. ಇತ್ತೀಚೆಗೆ ಅವರು ದೆಹಲಿಯ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ ಐದು ಗಂಟೆಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವಿಚಾರಣೆ ವೇಳೆ ಎರಡನೇ ಬಾರಿ ಮತ್ತೆ ಬರುವಂತೆ ಸಮನ್ಸ್​ ನೀಡುತ್ತೇವೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದರು ಎನ್ನಲಾಗಿದೆ. 

ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್​ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್​ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿತ್ತು.

ಸುಕೇಶ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್​ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್​ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.

ಇದನ್ನೂ ಓದಿ: ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ