AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್

Jacqueline Fernandez: ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು

‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯದಿಂದ ಮತ್ತೆ ಸಮನ್ಸ್
ಜಾಕ್ವೆಲಿನ್​ ಫರ್ನಾಂಡಿಸ್
TV9 Web
| Edited By: |

Updated on: Sep 16, 2021 | 3:43 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಿಕ್ರಾಂತ್​ ರೋಣ’ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿದೆ. ಸೆಪ್ಟೆಂಬರ್ 25ರ ಒಳಗೆ ಹೇಳಿಕೆ ದಾಖಲಿಸಲು ಸೂಚಿಸಿದೆ. ಇತ್ತೀಚೆಗೆ ಅವರು ದೆಹಲಿಯ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ ಐದು ಗಂಟೆಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವಿಚಾರಣೆ ವೇಳೆ ಎರಡನೇ ಬಾರಿ ಮತ್ತೆ ಬರುವಂತೆ ಸಮನ್ಸ್​ ನೀಡುತ್ತೇವೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದರು ಎನ್ನಲಾಗಿದೆ. 

ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್​ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್​ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿತ್ತು.

ಸುಕೇಶ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್​ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್​ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.

ಇದನ್ನೂ ಓದಿ: ಗಡಂಗ್​ ರಕ್ಕಮ್ಮನಾಗಿ ಚಂದನವನಕ್ಕೆ ಬಂದ ಜಾಕ್ವೆಲಿನ್​ ಫರ್ನಾಂಡಿಸ್​; ವಿಕ್ರಾಂತ್​ ರೋಣದಲ್ಲಿ ವಿಶೇಷ ಪಾತ್ರ

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ