Vikrant Rona Collection: ಗರಗರ ಗಗ್ಗರ; ಎರಡನೇ ದಿನವೂ ಮುಂದುವರಿದ ‘ವಿಕ್ರಾಂತ್ ರೋಣ’ ಅಬ್ಬರ

‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ತೆರೆಗೆ ಬಂತು. ಮೊದಲ ದಿನ ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಕೆ ಮಾಡಿದ್ದು ಬರೋಬ್ಬರಿ 35 ಕೋಟಿ ರೂಪಾಯಿ. ಕರ್ನಾಟಕ ಒಂದರಲ್ಲೇ ಈ ಚಿತ್ರ 16 ಕೋಟಿ ರೂಪಾಯಿ ಗಳಿಕೆ ಮಾಡಿದ್ದು ವಿಶೇಷ.

Vikrant Rona Collection: ಗರಗರ ಗಗ್ಗರ; ಎರಡನೇ ದಿನವೂ ಮುಂದುವರಿದ ‘ವಿಕ್ರಾಂತ್ ರೋಣ’ ಅಬ್ಬರ
ಸುದೀಪ್​-ಜಾಕ್ವೆಲಿನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 30, 2022 | 3:36 PM

ಮೊದಲ ದಿನ ಒಳ್ಳೆಯ ಓಪನಿಂಗ್ ಪಡೆದ ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಎರಡನೇ ದಿನವಾದ ಶುಕ್ರವಾರ (ಜುಲೈ 29) ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಮೂಲಕ ಚಿತ್ರದ ಅಬ್ಬರ ಎರಡನೇ ದಿನವೂ ಮುಂದುವರಿದಿದೆ. ಸುದೀಪ್ (Sudeep) ಅವರು ಈ ಚಿತ್ರದ ಮೂಲಕ ಒಂದು ದೊಡ್ಡ ಗೆಲುವು ಕಂಡಿದ್ದಾರೆ. ‘ರಂಗಿತರಂಗ’ ಚಿತ್ರದ ಬಳಿಕ ನಿರ್ದೇಶಕ ಅನೂಪ್ ಭಂಡಾರಿ ಅವರು ಮತ್ತೆ ಗೆಲುವಿನ ನಗು ಬೀರಿದ್ದಾರೆ. ಶನಿವಾರ (ಜುಲೈ 30) ಹಾಗೂ ಭಾನುವಾರ (ಜುಲೈ 31) ಚಿತ್ರ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನುತ್ತಿದ್ದಾರೆ ಬಾಕ್ಸ್ ಆಫೀಸ್ ಪಂಡಿತರು.

‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ತೆರೆಗೆ ಬಂತು. ಮೊದಲ ದಿನ ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಕೆ ಮಾಡಿದ್ದು ಬರೋಬ್ಬರಿ 35 ಕೋಟಿ ರೂಪಾಯಿ. ಕರ್ನಾಟಕ ಒಂದರಲ್ಲೇ ಈ ಚಿತ್ರ 16 ಕೋಟಿ ರೂಪಾಯಿ ಗಳಿಕೆ ಮಾಡಿದ್ದು ವಿಶೇಷ. ಉಳಿದಂತೆ ಕಾಲಿವುಡ್, ಟಾಲಿವುಡ್​ನಿಂದ ಚಿತ್ರಕ್ಕೆ ಒಳ್ಳೆಯ ಕಲೆಕ್ಷನ್ ಆಯಿತು. ಹಿಂದಿ ಪ್ರೇಕ್ಷಕರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈಗ ಎರಡನೇ ದಿನದ ಲೆಕ್ಕಾಚಾರ ಸಿಕ್ಕಿದೆ.

ಮೊದಲ ದಿನ ಸಾಕಷ್ಟು ಕಡೆಗಳಲ್ಲಿ ಮುಂಜಾನೆಯಿಂದಲೇ ಫ್ಯಾನ್​ ಶೋ ಇತ್ತು. ಶುಕ್ರವಾರ ನಾರ್ಮಲ್​ ಶೋಗಳು ಮಾತ್ರ ಇದ್ದವು. ಅಲ್ಲದೆ, ಅಂದು ಯಾವುದೇ ರಜೆ ಇರಲಿಲ್ಲ. ಈ ಕಾರಣಕ್ಕೆ ಮೊದಲ ದಿನಕ್ಕಿಂತ ಕೊಂಚ ಕಡಿಮೆ ಗಳಿಕೆ ಆಗಿದೆ. ಈ ಚಿತ್ರ ಶುಕ್ರವಾರ 20-25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಮೂಲಕ ಚಿತ್ರದ ಒಟ್ಟೂ ಗಳಿಕೆ 50 ಕೋಟಿ ರೂಪಾಯಿ ದಾಟಿದೆ. ಮೊದಲ ವೀಕೆಂಡ್​ ಕಳೆಯುವುದರೊಳಗೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

ಇದನ್ನೂ ಓದಿ: ವಿಕ್ರಾಂತ್ ರೋಣ ಚಿತ್ರಕ್ಕೆ ಎಲ್ಲೆಲ್ಲಿ ಎಷ್ಟೆಷ್ಟು ರೇಟಿಂಗ್? ಇಲ್ಲಿದೆ ಪೂರ್ಣ ವಿವರ

ಸುದೀಪ್ ವೃತ್ತಿ ಜೀವನದಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ವಿಶೇಷವಾಗಿದೆ. ಅವರು ನಟಿಸಿದ ಸಿನಿಮಾಗಳ ಪೈಕಿ ಮೊದಲ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿದೆ. ವೀಕೆಂಡ್ ಗಳಿಕೆಯನ್ನೂ ಸೇರಿಸಿದರೆ ಈ ಸಿನಿಮಾ ಹಲವು ದಾಖಲೆಗಳನ್ನು ಬರೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.

‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ‘ರಂಗಿತರಂಗ’ ಚಿತ್ರದ ಶೇಡ್​ನಲ್ಲಿದೆ ಎನ್ನುವ ಮಾತುಗಳು ಕೇಳಿ ಬಂದವು. ಆದರೆ, ಪ್ರೇಕ್ಷಕರು ಇದನ್ನು ನೆಗೆಟಿವ್ ರೀತಿಯಲ್ಲಿ ಸ್ವೀಕರಿಸಿಲ್ಲ. ಈ ಚಿತ್ರದಲ್ಲಿ ಸುದೀಪ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫರ್ನಾಂಡಿಸ್ ಮೊದಲಾದವರು ನಟಿಸಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.

Published On - 9:27 am, Sat, 30 July 22

Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್