AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಭಯಾನಕ ಕಥೆಯಲ್ಲಿ ಹೊಸ ಅಧ್ಯಾಯ ಆರಂಭ; ಗಮನ ಸೆಳೆದ ‘ವಿಕ್ರಾಂತ್ ರೋಣ’ ಟ್ರೇಲರ್

‘ವಿಕ್ರಾಂತ್​ ರೋಣ’ ಚಿತ್ರ ಇಷ್ಟೊಂದು ಹೈಪ್ ಪಡೆಯಲು ಹಲವು ಕಾರಣ ಇದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸುದೀಪ್ ಹೆಸರು ಮಾಡಿದ್ದಾರೆ. ಈ ಚಿತ್ರ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗುತ್ತಿದೆ.

Kichcha Sudeep: ಭಯಾನಕ ಕಥೆಯಲ್ಲಿ ಹೊಸ ಅಧ್ಯಾಯ ಆರಂಭ; ಗಮನ ಸೆಳೆದ ‘ವಿಕ್ರಾಂತ್ ರೋಣ’ ಟ್ರೇಲರ್
TV9 Web
| Edited By: |

Updated on:Jun 23, 2022 | 5:27 PM

Share

ಸುದೀಪ್ ನಟನೆಯ (Kichcha Sudeep) ‘ವಿಕ್ರಾಂತ್​ ರೋಣ’ ಸಿನಿಮಾ  ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ರಂಗಿತರಂಗ’ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಕಿಚ್ಚ ಸುದೀಪ್ ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಸಿನಿಮಾ ಶೂಟಿಂಗ್ ಆರಂಭವಾದಾಗಲೇ ಸಾಕಷ್ಟು ನಿರೀಕ್ಷೆ ಇತ್ತು. ಈಗ ಟ್ರೇಲರ್ ನೋಡಿದ ಅಭಿಮಾನಿಗಳಿಗೆ ಈ ನಿರೀಕ್ಷೆ ದುಪ್ಪಟ್ಟಾಗಿದೆ. ‘ವಿಕ್ರಾಂತ್​ ರೋಣ’ ಚಿತ್ರದ ಟ್ರೇಲರ್ (Vikrant Rona Trailer) ಇಂದು (ಜೂನ್ 23) ರಿಲೀಸ್ ಆಗಿದೆ. ಚಿತ್ರ ಹೇಗಿರಲಿದೆ ಎನ್ನುವುದಕ್ಕೆ ಈ ಟ್ರೇಲರ್ ಸಾಕ್ಷ್ಯ ಒದಗಿಸಿದೆ.

‘ವಿಕ್ರಾಂತ್​ ರೋಣ’ ಚಿತ್ರ ಇಷ್ಟೊಂದು ಹೈಪ್ ಪಡೆಯಲು ಹಲವು ಕಾರಣ ಇದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸುದೀಪ್ ಹೆಸರು ಮಾಡಿದ್ದಾರೆ. ಈ ಚಿತ್ರ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗುತ್ತಿದೆ. ಈ ಚಿತ್ರ 3ಡಿಯಲ್ಲಿ ಮೂಡಿ ಬರುತ್ತಿದೆ. ಕನ್ನಡ ಚಿತ್ರರಂಗದ ಪಾಲಿಗೆ 3ಡಿ ಸಿನಿಮಾಗಳು ಅಪರೂಪವೇ. ಈ ಕಾರಣದಿಂದಲೂ ‘ವಿಕ್ರಾಂತ್​ ರೋಣ’ ವಿಶೇಷ ಎನಿಸಿಕೊಂಡಿದೆ.

ಇದನ್ನೂ ಓದಿ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
Image
‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ

‘ಅದೊಂದು ವಿಚಿತ್ರ ಊರು. ಆ ಊರಿನ ಜನ ಭಯಾನಕ ಕಥೆಯನ್ನು ಮುಚ್ಚಿಡಲು ನೋಡುತ್ತಿದ್ದರು. ಕಥೆಯನ್ನು ಮುಚ್ಚಿಡಬಹುದು, ಆದರೆ ಭಯವನ್ನು ಅಲ್ಲ. ಆ ಕಥೆ ಮತ್ತೆ ಶುರುವಾಯಿತು. ಆ ಗುಮ್ಮ ಮತ್ತೆ ಬಂದ’ ಎಂಬ ಸಾಲುಗಳೊಂದಿಗೆ ‘ವಿಕ್ರಾಂತ್ ರೋಣ’ ಚಿತ್ರದ ಟ್ರೇಲರ್ ಆರಂಭ ಆಗುತ್ತದೆ. ಈ ವಿಚಿತ್ರ ಊರಿಗೆ ನಿರೂಪ್ ಭಂಡಾರಿ ಪಾತ್ರ ಹಾಗೂ ಪೊಲೀಸ್ ಅಧಿಕಾರಿಯಾಗಿ ಕಿಚ್ಚ ಸುದೀಪ್ ಪಾತ್ರ ಎಂಟ್ರಿ ಆಗುತ್ತದೆ. ನಂತರ ಏನೆಲ್ಲ ಆಗುತ್ತದೆ ಎಂಬುದನ್ನು ಸಿನಿಮಾದಲ್ಲಿ ಕಣ್ತುಂಬಿಕೊಳ್ಳಬೇಕು.

ಸಿನಿಮಾದ ಟ್ರೇಲರ್ ಸಖತ್ ಥ್ರಿಲ್ಲಿಂಗ್ ಆಗಿದೆ. ಹಲವು ಸಸ್ಪೆನ್ಸ್​ ಅಂಶಗಳನ್ನು ಈ ಟ್ರೇಲರ್ ಒಳಗೊಂಡಿದೆ. ಈ ಟ್ರೇಲರ್ ನೋಡಿದ ಸುದೀಪ್ ಫ್ಯಾನ್ಸ್ ಜುಲೈ 28ಕ್ಕಾಗಿ ಕಾದು ಕೂರುವಂತಾಗಿದೆ. ಹಿನ್ನೆಲೆ ಸಂಗೀತ ಕೂಡ ಟ್ರೇಲರ್​ನಲ್ಲಿ ಗಮನ ಸೆಳೆದಿದೆ. ಒಟ್ಟಾರೆ ಸಿನಿಮಾ ಹೇಗೆ ಮೂಡಿ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆ ನಿರೂಪ್​ ಭಂಡಾರಿ, ನೀತಾ ಅಶೋಕ್​, ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗುತ್ತಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿರುವುದು ಇನ್ನಷ್ಟು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ಶಾಲಿನಿ ಆರ್ಟ್ಸ್​’ ಬ್ಯಾನರ್​ ಮೂಲಕ ಜಾಕ್​ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾಗೆ ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್

Vikrant Rona: ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿ ಮನದ ಮಾತು ತೆರೆದಿಟ್ಟ ಕಿಚ್ಚ ಸುದೀಪ್

Published On - 5:10 pm, Thu, 23 June 22

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ