AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್ ರೋಣ’ ಚಿತ್ರ ಆನ್​​ಲೈನ್​ನಲ್ಲಿ ಸೋರಿಕೆ; ಸುದೀಪ್ ಹೇಳಿದ ಮಾತು ನೆನಪಿಸಿಕೊಂಡ ಫ್ಯಾನ್ಸ್

ಕಿಚ್ಚ ಸುದೀಪ್​ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

‘ವಿಕ್ರಾಂತ್ ರೋಣ’ ಚಿತ್ರ ಆನ್​​ಲೈನ್​ನಲ್ಲಿ ಸೋರಿಕೆ; ಸುದೀಪ್ ಹೇಳಿದ ಮಾತು ನೆನಪಿಸಿಕೊಂಡ ಫ್ಯಾನ್ಸ್
ಸುದೀಪ್
TV9 Web
| Edited By: |

Updated on:Jul 28, 2022 | 3:49 PM

Share

ಚಿತ್ರರಂಗಕ್ಕೆ ಪೈರಸಿ ಅನ್ನೋದು ದೊಡ್ಡ ಶಾಪವಾಗಿದೆ. ದೊಡ್ಡ ಬಜೆಟ್​​ನ ಚಿತ್ರಗಳು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಲೀಕ್ ಆಗುತ್ತಿವೆ. ಇಂದು (ಜುಲೈ 28) ರಿಲೀಸ್ ಆದ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್ ರೋಣ’ ಚಿತ್ರಕ್ಕೂ (Vikrant Rona Movie) ಈಗ ಪೈರಸಿ ಕಾಟ ತಟ್ಟಿದೆ. ಸಿನಿಮಾ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಚಿತ್ರ ಆನ್​ಲೈನ್​ನಲ್ಲಿ ಲೀಕ್ ಆಗಿದೆ. ಇದು ಹಲವು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಇನ್ನೂ ಕೆಲ ಫ್ಯಾನ್ಸ್ ಸುದೀಪ್ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ.

ಕಿಚ್ಚ ಸುದೀಪ್​ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. 3ಡಿಯಲ್ಲಿ ಸಿನಿಮಾ ನೋಡಿದ ಅಭಿಮಾನಿಗಳು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇದರ ಮಧ್ಯೆ ಸಿನಿಮಾ ಪೈರಸಿ ಆಗಿರುವುದು ಅಭಿಮಾನಿ ವಲಯಗಳಲ್ಲಿ ಆತಂಕ ಮೂಡಿಸಿದೆ. ಇದರಿಂದ ಚಿತ್ರದ ಕಲೆಕ್ಷನ್​ಗೆ ಹೊಡೆತ ಬೀಳಬಹುದು ಎಂದು ಹೇಳಲಾಗುತ್ತಿದೆ.

ಸುದೀಪ್ ಅವರು ‘ವಿಕ್ರಾಂತ್ ರೋಣ’ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದರು. ಈ ವೇಳೆ ಅವರಿಗೆ ಪೈರಸಿ ಬಗ್ಗೆಯೂ ಪ್ರಶ್ನೆ ಎದುರಾಗಿತ್ತು. ಆಗ ಮಾತನಾಡುತ್ತಾ, ಅವರು ಪೈರಸಿಗೆ ಹೆದರುವುದಿಲ್ಲ ಎಂದಿದ್ದರು. ಇದಕ್ಕೆ ಕಾರಣ ಸಿನಿಮಾ ಮೇಲೆ ಅವರಿಗೆ ಇದ್ದ ಕಾನ್ಫಿಡೆನ್ಸ್​. ‘ಚಿತ್ರಮಂದಿರದಲ್ಲಿ ಸಿಗುವ ಎಫೆಕ್ಟ್​ ಮೊಬೈಲ್​ನಲ್ಲಿ ಸಿಗುತ್ತಿದೆ ಎಂದಾದರೆ ಮೊಬೈಲ್​ನಲ್ಲೇ ಸಿನಿಮಾ ನೋಡಿ. ಮೊಬೈಲ್​​ನಲ್ಲಿ ನೋಡಿದ್ಮೇಲೆ ಖುಷಿ ಸಿಗದಿದ್ದರೆ ಚಿತ್ರಮಂದಿರಕ್ಕೆ ಬನ್ನಿ’ ಎಂದಿದ್ದರು ಸುದೀಪ್.

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
Vikrant Rona Review: ಸಸ್ಪೆನ್ಸ್ ಕಥೆಯ ‘ರಂಗು’ ಹೆಚ್ಚಿಸಿದ ಸುದೀಪ್-ಅನೂಪ್​; ಇಷ್ಟವಾಗುತ್ತೆ ಕಿಚ್ಚನ ಗೆಟಪ್
Image
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Image
Vikrant Rona Review: ವಿದೇಶಿ ಸೆನ್ಸಾರ್​ ಸದಸ್ಯರಿಂದ ‘ವಿಕ್ರಾಂತ್​ ರೋಣ’ ವಿಮರ್ಶೆ; ಕ್ಲೈಮ್ಯಾಕ್ಸ್​ ಬಗ್ಗೆ ವಿಶೇಷ ಮೆಚ್ಚುಗೆ

ಇದನ್ನೂ ಓದಿ: Vikrant Rona Review: ಸಸ್ಪೆನ್ಸ್ ಕಥೆಯ ‘ರಂಗು’ ಹೆಚ್ಚಿಸಿದ ಸುದೀಪ್-ಅನೂಪ್​; ಇಷ್ಟವಾಗುತ್ತೆ ಕಿಚ್ಚನ ಗೆಟಪ್

ಸುದೀಪ್ ಹೀಗೆ ಹೇಳುವುದಕ್ಕೂ ಕಾರಣ ಇದೆ. ‘ವಿಕ್ರಾಂತ್ ರೋಣ’ ಥಿಯೇಟರ್​ನಲ್ಲೇ ನೋಡಬೇಕಾದಂತಹ ಸಿನಿಮಾ. ಚಿತ್ರದ ಬಹುತೇಕ ಕಥೆ ರಾತ್ರಿ ಅವಧಿಯಲ್ಲೇ ಸಾಗುತ್ತದೆ. ಹೀಗಾಗಿ, ಕತ್ತಲ ಭಾಗವೇ ಹೆಚ್ಚು. ಈ ಚಿತ್ರದ ಥಿಯೇಟರ್ ಪ್ರಿಂಟ್ ನೋಡಿದರೆ ಸಿನಿಮಾ ರುಚಿಸುವುದಿಲ್ಲ. ಈ ಕಾರಣದಿಂದ ಸುದೀಪ್ ಆ ರೀತಿಯಲ್ಲಿ ಹೇಳಿದ್ದರು. ನಿಜವಾದ ಸಿನಿಪ್ರಿಯರು ‘ವಿಕ್ರಾಂತ್​ ರೋಣ’ ಸಿನಿಮಾವನ್ನು ಥಿಯೇಟರ್​ನಲ್ಲೇ ವೀಕ್ಷಿಸುತ್ತಾರೆ ಅನ್ನೋದು ಫ್ಯಾನ್ಸ್ ವಾದ.

Published On - 3:47 pm, Thu, 28 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು