AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Release Date: ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​; ಟೀಸರ್​ ನೋಡಿ ಸುದೀಪ್​ ಫ್ಯಾನ್ಸ್​ ಖುಷ್​

Vikrant Rona Teaser: ಸುದೀಪ್​ ಅಭಿನಯದ ‘ವಿಕ್ರಾಂತ್​ ರೋಣ’ ಸಿನಿಮಾದ ಟೀಸರ್ ರಿಲೀಸ್​ ಆಗಿದೆ. ಈ ಟೀಸರ್​ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

Vikrant Rona Release Date: ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​; ಟೀಸರ್​ ನೋಡಿ ಸುದೀಪ್​ ಫ್ಯಾನ್ಸ್​ ಖುಷ್​
ಕಿಚ್ಚ ಸುದೀಪ್
TV9 Web
| Updated By: ಮದನ್​ ಕುಮಾರ್​|

Updated on:Apr 02, 2022 | 10:31 AM

Share

ಕಿಚ್ಚ ಸುದೀಪ್ (Kichcha Sudeep)​ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ ಸಿನಿಮಾದ ಹೊಸ ಟೀಸರ್​ ಬಿಡುಗಡೆ ಆಗಿದೆ. ಈ ಮೊದಲೇ ತಿಳಿಸಿದಂತೆ ಇಂದು (ಏ.2) ಬೆಳಗ್ಗೆ 9.55ಕ್ಕೆ ಟೀಸರ್​ ರಿಲೀಸ್​ ಮಾಡಲಾಗಿದೆ. ಹಲವು ಭಾಷೆಯ ಸ್ಟಾರ್​ ನಟರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ‘ವಿಕ್ರಾಂತ್​ ರೋಣ’ ಟೀಸರ್​ (Vikrant Rona Teaser) ರಿಲೀಸ್​ ಮಾಡಿದ್ದಾರೆ. ಈ ಮೂಲಕ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಈ ಸಿನಿಮಾ ಜು.28ರಂದು ರಿಲೀಸ್​ ಆಗಲಿದೆ. ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಈಗಾಗಲೇ ತೆರೆಕಂಡಿರಬೇಕಿತ್ತು. ಆದರೆ ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಹೊಸ ಡೇಟ್​ ತಿಳಿಯಲು ಸುದೀಪ್​ ಫ್ಯಾನ್ಸ್​ ಕಾದು ಕುಳಿತಿದ್ದರು. ಅವರಿಗೆಲ್ಲ ಈ ಟೀಸರ್​ ಮೂಲಕ ಗುಡ್​ ನ್ಯೂಸ್​ ನೀಡಲಾಗಿದೆ. ಜು.28ರಂದು ‘ವಿಕ್ರಾಂತ್​ ರೋಣ’ (Vikrant Rona) ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಡಿಫರೆಂಟ್​ ಗೆಟಪ್​ನಲ್ಲಿ ಸುದೀಪ್​ ಕಾಣಿಸಿಕೊಂಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ 3ಡಿ ವರ್ಷನ್​ನಲ್ಲಿ ಸಿದ್ಧವಾಗಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್​ನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್​ ಲಾಲ್​, ಹಿಂದಿಯಲ್ಲಿ ಸಲ್ಮಾನ್​ ಖಾನ್​, ತೆಲುಗಿನಲ್ಲಿ ಮೆಗಾ ಸ್ಟಾರ್​ ಚಿರಂಜೀವಿ ಹಾಗೂ ಇಂಗ್ಲಿಷ್​ನಲ್ಲಿ ವೀರೇಂದ್ರ ಸೆಹ್ವಾಗ್​ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಟೀಸರ್​ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಕಿಚ್ಚ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಒಂದು ದೀರ್ಘವಾದ ಮತ್ತು ಸುಂದರ ಪಯಣದ ಬಳಿಕ ಈ ವಿಷಯ ತಿಳಿಸಲು ಖುಷಿ ಆಗುತ್ತಿದೆ. ವಿಕ್ರಾಂತ್​ ರೋಣ ಸಿನಿಮಾ ಜುಲೈ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ’ ಎಂದು ಬರೆದುಕೊಳ್ಳುವ ಮೂಲಕ ಕನ್ನಡ ಅವತರಣಿಕೆಯ ಟೀಸರ್ ಅನ್ನು ಕಿಚ್ಚ ಸುದೀಪ್​ ಅವರು ಬಿಡುಗಡೆ ಮಾಡಿದ್ದಾರೆ.

ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಅವರು ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಬೃಹತ್​ ಸೆಟ್​ಗಳನ್ನು ನಿರ್ಮಿಸಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಕಾಡಿನ ಸೆಟ್​ನಲ್ಲಿ ಬಹುತೇಕ ಶೂಟಿಂಗ್​ ನಡೆದಿದೆ. ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸದ್ದು ಮಾಡುತ್ತಲೇ ಇದೆ. ದುಬೈನ ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಟೈಟಲ್​ ಲಾಂಚ್​ ಮಾಡುವ ಮೂಲಕ ಎಲ್ಲರ ಗಮನ ಸೆಳೆಯಲಾಗಿತ್ತು. ಈಗ ಹೊಸ ಟೀಸರ್​ ನೋಡಿದ ಬಳಿಕ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ತುದಿಗಾಲಿನಲ್ಲಿ ನಿಂತು ಕಾಯುವಂತಾಗಿದೆ.

ಇದನ್ನೂ ಓದಿ:

ರಾಯರ ಸನ್ನಿಧಿಯಲ್ಲಿ ನಟ ‘ಕಿಚ್ಚ’ ಸುದೀಪ್​; ಇಲ್ಲಿದೆ ವಿಡಿಯೋ

‘ಯಾಕ್ರಿ ನಿಮಗೆ ಇಷ್ಟು ಗಾಂಚಲಿ ಅಂತ ಕೇಳ್ತಾರೆ, ಎಲ್ಲವೂ ಇವರಿಂದಾನೆ’: ವೇದಿಕೆಯಲ್ಲಿ ಸುದೀಪ್​ ಓಪನ್​ ಮಾತು

Published On - 10:06 am, Sat, 2 April 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!