AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ

Vikrant Rona Release Date: ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ
ಕಿಚ್ಚ ಸುದೀಪ್
Follow us
ಆಯೇಷಾ ಬಾನು
| Updated By: Digi Tech Desk

Updated on:Apr 15, 2021 | 1:28 PM

ಬೆಂಗಳೂರು: ತಮ್ಮ ಫ್ಯಾನ್ಸ್​ಗಳಿಗೆ ನಟ ಕಿಚ್ಚ ಸುದೀಪ್ ಸಿಹಿ ಸುದ್ದಿ ನೀಡಿದ್ದಾರೆ. ಕೊರೊನಾ ಸಮಸ್ಯೆಯ ನಡುವೆಯೂ ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಕೊರೊನಾ, ಲಾಕ್ ಡೌನ್, ಕರ್ಫ್ಯೂ, 50% ಆಕ್ಯೂಪೆನ್ಸಿ ಆತಂಕದ ನಡುವೆಯೂ ಕಿಚ್ಚ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 01ರಂದು ರಿಲೀಸ್ ಆಗಿತ್ತು. ಬಳಿಕ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಆಸನ ಮಿತಿ ಹೇರಿದ್ದರಿಂದ ಸಿನಿಮಾ ರಿಲೀಸ್​ ಆದ ಒಂದೇ ವಾರಕ್ಕೆ ಚಿತ್ರ ಒಟಿಟಿ ಹಾದಿ ಹಿಡಿದಿತ್ತು. ಸಾಲುಸಾಲು ತೊಂದರೆ ಎದುರಿಸಿತ್ತು. ಈ ಬಗ್ಗೆ ನಟ ಪುನೀತ್ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದರು. ಸದ್ಯ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಏರುತ್ತಿದೆ.

ಹೀಗಾಗಿ ಸರ್ಕಾರ ಟರ್ಫ್ ರೂಲ್ಸ್​ಗಳನ್ನು ಜಾರಿ ಮಾಡುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ತಮ್ಮ  ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ಇನ್ನು ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್​ ರೋಣ ಸಿನಿಮಾದ ಟೈಟಲ್‌ ಪೋಸ್ಟರ್​ನ ಲಾಂಚ್ ಮಾಡಲಾಗಿತ್ತು. ವಿಕ್ರಾಂತ್ ರೋಣನಿಗೆ ನಿರ್ದೇಶಕ ಅನೂಪ್​ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ವಿಕ್ರಾಂತ್ ರೋಣ 3ಡಿ ವರ್ಷನ್ ಆ ಖುಷಿಯ ನಡುವೆಯೇ ಚಿತ್ರ 3ಡಿ ವರ್ಷನ್​ನಲ್ಲಿ ತೆರೆಕಾಣಲಿದೆ. ಕನ್ನಡದಲ್ಲಿ 3ಡಿ ಚಿತ್ರಗಳು ತೆರೆಕಂಡಿರುವುದು ಬೆರಳೆಣಿಕೆಯಷ್ಟು ಮಾತ್ರ ಆಗಿರುವುದರಿಂದ ಇಲ್ಲಿನ ಪ್ರೇಕ್ಷಕರು ಸಹಜವಾಗಿಯೇ ವಿಕ್ರಾಂತ್​ ರೋಣ ಬಿಡುಗಡೆಯನ್ನು ಸಂಭ್ರಮಿಸಲಿದ್ದಾರೆ.

ಇದನ್ನೂ ಓದಿ: ದುಬೈನ ಬುರ್ಜ್ ಖಲೀಫಾದ ಮೇಲೆ.. ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಟೈಟಲ್‌ ಪೋಸ್ಟರ್ ಲಾಂಚ್!

(Vikrant Rona Releasing on August 19th Announced By Kichcha Sudeep)

Published On - 1:05 pm, Thu, 15 April 21

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!