AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ

Vikrant Rona Release Date: ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ
ಕಿಚ್ಚ ಸುದೀಪ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Apr 15, 2021 | 1:28 PM

Share

ಬೆಂಗಳೂರು: ತಮ್ಮ ಫ್ಯಾನ್ಸ್​ಗಳಿಗೆ ನಟ ಕಿಚ್ಚ ಸುದೀಪ್ ಸಿಹಿ ಸುದ್ದಿ ನೀಡಿದ್ದಾರೆ. ಕೊರೊನಾ ಸಮಸ್ಯೆಯ ನಡುವೆಯೂ ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಕೊರೊನಾ, ಲಾಕ್ ಡೌನ್, ಕರ್ಫ್ಯೂ, 50% ಆಕ್ಯೂಪೆನ್ಸಿ ಆತಂಕದ ನಡುವೆಯೂ ಕಿಚ್ಚ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 01ರಂದು ರಿಲೀಸ್ ಆಗಿತ್ತು. ಬಳಿಕ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಆಸನ ಮಿತಿ ಹೇರಿದ್ದರಿಂದ ಸಿನಿಮಾ ರಿಲೀಸ್​ ಆದ ಒಂದೇ ವಾರಕ್ಕೆ ಚಿತ್ರ ಒಟಿಟಿ ಹಾದಿ ಹಿಡಿದಿತ್ತು. ಸಾಲುಸಾಲು ತೊಂದರೆ ಎದುರಿಸಿತ್ತು. ಈ ಬಗ್ಗೆ ನಟ ಪುನೀತ್ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದರು. ಸದ್ಯ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಏರುತ್ತಿದೆ.

ಹೀಗಾಗಿ ಸರ್ಕಾರ ಟರ್ಫ್ ರೂಲ್ಸ್​ಗಳನ್ನು ಜಾರಿ ಮಾಡುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ತಮ್ಮ  ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ಇನ್ನು ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್​ ರೋಣ ಸಿನಿಮಾದ ಟೈಟಲ್‌ ಪೋಸ್ಟರ್​ನ ಲಾಂಚ್ ಮಾಡಲಾಗಿತ್ತು. ವಿಕ್ರಾಂತ್ ರೋಣನಿಗೆ ನಿರ್ದೇಶಕ ಅನೂಪ್​ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ವಿಕ್ರಾಂತ್ ರೋಣ 3ಡಿ ವರ್ಷನ್ ಆ ಖುಷಿಯ ನಡುವೆಯೇ ಚಿತ್ರ 3ಡಿ ವರ್ಷನ್​ನಲ್ಲಿ ತೆರೆಕಾಣಲಿದೆ. ಕನ್ನಡದಲ್ಲಿ 3ಡಿ ಚಿತ್ರಗಳು ತೆರೆಕಂಡಿರುವುದು ಬೆರಳೆಣಿಕೆಯಷ್ಟು ಮಾತ್ರ ಆಗಿರುವುದರಿಂದ ಇಲ್ಲಿನ ಪ್ರೇಕ್ಷಕರು ಸಹಜವಾಗಿಯೇ ವಿಕ್ರಾಂತ್​ ರೋಣ ಬಿಡುಗಡೆಯನ್ನು ಸಂಭ್ರಮಿಸಲಿದ್ದಾರೆ.

ಇದನ್ನೂ ಓದಿ: ದುಬೈನ ಬುರ್ಜ್ ಖಲೀಫಾದ ಮೇಲೆ.. ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಟೈಟಲ್‌ ಪೋಸ್ಟರ್ ಲಾಂಚ್!

(Vikrant Rona Releasing on August 19th Announced By Kichcha Sudeep)

Published On - 1:05 pm, Thu, 15 April 21

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ