AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ

Vikrant Rona Release Date: ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

Vikrant Rona Release Date: ಕಿಚ್ಚ ಸುದೀಪ್ ಕಡೆಯಿಂದ ಸಿಹಿ ಸುದ್ದಿ! ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ಬಿಡುಗಡೆ
ಕಿಚ್ಚ ಸುದೀಪ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Apr 15, 2021 | 1:28 PM

Share

ಬೆಂಗಳೂರು: ತಮ್ಮ ಫ್ಯಾನ್ಸ್​ಗಳಿಗೆ ನಟ ಕಿಚ್ಚ ಸುದೀಪ್ ಸಿಹಿ ಸುದ್ದಿ ನೀಡಿದ್ದಾರೆ. ಕೊರೊನಾ ಸಮಸ್ಯೆಯ ನಡುವೆಯೂ ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಮಾಡಲಾಗಿದೆ. ಆಗಸ್ಟ್ 19ಕ್ಕೆ ವಿಕ್ರಾಂತ್ ರೋಣ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಕೊರೊನಾ, ಲಾಕ್ ಡೌನ್, ಕರ್ಫ್ಯೂ, 50% ಆಕ್ಯೂಪೆನ್ಸಿ ಆತಂಕದ ನಡುವೆಯೂ ಕಿಚ್ಚ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರವನ್ನ ನಟ ಕಿಚ್ಚ ಸುದೀಪ್ ತಮ್ಮ ಟ್ವಿಟರ್​ ಖಾತೆಯ ಮೂಲಕ ತಿಳಿಸಿದ್ದಾರೆ.

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 01ರಂದು ರಿಲೀಸ್ ಆಗಿತ್ತು. ಬಳಿಕ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಆಸನ ಮಿತಿ ಹೇರಿದ್ದರಿಂದ ಸಿನಿಮಾ ರಿಲೀಸ್​ ಆದ ಒಂದೇ ವಾರಕ್ಕೆ ಚಿತ್ರ ಒಟಿಟಿ ಹಾದಿ ಹಿಡಿದಿತ್ತು. ಸಾಲುಸಾಲು ತೊಂದರೆ ಎದುರಿಸಿತ್ತು. ಈ ಬಗ್ಗೆ ನಟ ಪುನೀತ್ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದರು. ಸದ್ಯ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಏರುತ್ತಿದೆ.

ಹೀಗಾಗಿ ಸರ್ಕಾರ ಟರ್ಫ್ ರೂಲ್ಸ್​ಗಳನ್ನು ಜಾರಿ ಮಾಡುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ತಮ್ಮ  ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ಇನ್ನು ದುಬೈನ ಪ್ರತಿಷ್ಠಿತ ಬುರ್ಜ್ ಖಲೀಫಾ ಕಟ್ಟಡದ ಮೇಲೆ ವಿಕ್ರಾಂತ್​ ರೋಣ ಸಿನಿಮಾದ ಟೈಟಲ್‌ ಪೋಸ್ಟರ್​ನ ಲಾಂಚ್ ಮಾಡಲಾಗಿತ್ತು. ವಿಕ್ರಾಂತ್ ರೋಣನಿಗೆ ನಿರ್ದೇಶಕ ಅನೂಪ್​ ಭಂಡಾರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ವಿಕ್ರಾಂತ್ ರೋಣ 3ಡಿ ವರ್ಷನ್ ಆ ಖುಷಿಯ ನಡುವೆಯೇ ಚಿತ್ರ 3ಡಿ ವರ್ಷನ್​ನಲ್ಲಿ ತೆರೆಕಾಣಲಿದೆ. ಕನ್ನಡದಲ್ಲಿ 3ಡಿ ಚಿತ್ರಗಳು ತೆರೆಕಂಡಿರುವುದು ಬೆರಳೆಣಿಕೆಯಷ್ಟು ಮಾತ್ರ ಆಗಿರುವುದರಿಂದ ಇಲ್ಲಿನ ಪ್ರೇಕ್ಷಕರು ಸಹಜವಾಗಿಯೇ ವಿಕ್ರಾಂತ್​ ರೋಣ ಬಿಡುಗಡೆಯನ್ನು ಸಂಭ್ರಮಿಸಲಿದ್ದಾರೆ.

ಇದನ್ನೂ ಓದಿ: ದುಬೈನ ಬುರ್ಜ್ ಖಲೀಫಾದ ಮೇಲೆ.. ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಟೈಟಲ್‌ ಪೋಸ್ಟರ್ ಲಾಂಚ್!

(Vikrant Rona Releasing on August 19th Announced By Kichcha Sudeep)

Published On - 1:05 pm, Thu, 15 April 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ