AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​

Kichcha Sudeep | National Anthem: ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್​ ಒಳಗೆ ಹಾಡಬೇಕು. ಆದರೆ ಸುದೀಪ್​ ಅವರು ಅಂದಾಜು 65 ಸೆಕೆಂಡ್​ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್​ ಮಾಡಿದ್ದಾರೆ.

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​
ಕಿಚ್ಚ ಸುದೀಪ್​
Follow us
TV9 Web
| Updated By: ಮದನ್​ ಕುಮಾರ್​

Updated on: Aug 16, 2021 | 9:46 AM

ಆ.15ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು (75th Independence Day) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ (National Anthem) ಹಾಡಿ, ಸಿಹಿ ಹಂಚುವ ಮೂಲಕ ಆಚರಣೆ ಜೋರಾಗಿತ್ತು. ಅನೇಕ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್​ (Kichcha Sudeep) ಅವರು ರಾಷ್ಟ್ರಗೀತೆ ಹಾಡಿ, ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡರು. ಅದಕ್ಕೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸುದೀಪ್​ ಅವರು ಭಕ್ತಿ-ಭಾವದಿಂದ ಹಾಡಿದ ಪರಿ ಕಂಡು ಅಭಿಮಾನಿಗಳು ಕೂಡ ಸೆಲ್ಯೂಟ್​ ಮಾಡಿದರು. ಆದರೆ ಕೆಲವರಿಗೆ ಅದರಲ್ಲೊಂದು ತಪ್ಪು ಕಾಣಿಸಿತು!

ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್​ ಒಳಗೆ ಹಾಡಬೇಕು. ಆದರೆ ಸುದೀಪ್​ ಅವರು ಅಂದಾಜು 65 ಸೆಕೆಂಡ್​ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್​ ಮಾಡಿದ್ದಾರೆ. ‘ಸರಿಯಾಗಿ ರಾಷ್ಟ್ರಗೀತೆ ಹಾಡಿ ಸರ್​. ನಿಮ್ಮನ್ನು ತುಂಬಾ ಜನ ಫಾಲೋ ಮಾಡುತ್ತಾರೆ. ನೀವು ಟಾಪ್​ ನಟ ಆಗಿರಬಹುದು. ಆದರೆ 48-52 ಸೆಕೆಂಡ್​ಗಳ ಒಳಗೆ ಹಾಡಬೇಕು ಎನ್ನುವ ಕಾಮನ್​ ಸೆನ್ಸ್​ ಕೂಡ ಇಲ್ವಾ?’ ಎಂಬ ಕಮೆಂಟ್ ಬಂದಿದೆ. ಅದಕ್ಕೆ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು (ಕಮೆಂಟ್​) ತುಂಬ ಒರಟಾಗಿದೆ. ಆದರೂ ಒಪ್ಪಿಕೊಳ್ಳುತ್ತೇನೆ. ನನ್ನ ದೇಶದ ಮೇಲಿನ ಪ್ರೀತಿಯಿಂದ ಏನು ಅನಿಸಿತೋ ಅದನ್ನು ಮಾಡಿದ್ದೇನೆ. ಜೈ ಹಿಂದ್​’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ತಪ್ಪು ಒಪ್ಪಿಕೊಂಡ ಅವರ ನಡೆಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಇದು ನಿಮ್ಮ ದೊಡ್ಡ ಗುಣ. ನೀವು ನಿಜವಾದ ಜಂಟಲ್​ಮನ್​’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.​

ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಟ್ವಿಟರ್​ನಲ್ಲಿ ಅವರಿಗೆ 25 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ ಇದ್ದಾರೆ. ಟ್ವೀಟ್​ಗಳ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಾರೆ. ‘ನೆಗೆಟಿವ್​ ಕಮೆಂಟ್​ ಮಾಡುವವರಿಗೆ ಪ್ರತಿಕ್ರಿಯೆ ನೀಡಬೇಡಿ ಸರ್​’ ಎಂದು ಹಲವು ಅಭಿಮಾನಿಗಳು ಕಿಚ್ಚನ ಬಳಿ ಮನವಿ ಮಾಡಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಮತ್ತು ‘ಕೋಟಿಗೊಬ್ಬ 3’ ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಕೊರೊನಾ ವೈರಸ್​ ಕಾಟ ಕಡಿಮೆ ಆಗಲಿ ಎಂದು ಇಡೀ ಚಿತ್ರರಂಗ ಕಾಯುತ್ತಿದೆ. ಮೂರನೇ ಅಲೆ ಭಯದಿಂದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಆಗಿದೆ.

ಇದನ್ನೂ ಓದಿ:

ಆನ್​ಲೈನ್​ ಕ್ಲಾಸ್​ ಕಿರಿಕಿರಿ ತಪ್ಪಿಸಲು ಇಲ್ಲಿದೆ ಉಪಾಯ; ಕಿಚ್ಚ ಸುದೀಪ್​ ಟ್ರಸ್ಟ್​ ಕಡೆಯಿಂದ ಮಕ್ಕಳಿಗಾಗಿ ಹೊಸ ಆ್ಯಪ್​

ನಿಮ್ಮದು ಸುದೀಪ್​ ಜಾತಿಯೇ ಆಗಿದ್ರಿಂದ ಬಿಗ್​ಬಾಸ್​ ಟ್ರೋಫಿ ಸಿಕ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಮಂಜು ಪಾವಗಡ

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು