AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​

Kichcha Sudeep | National Anthem: ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್​ ಒಳಗೆ ಹಾಡಬೇಕು. ಆದರೆ ಸುದೀಪ್​ ಅವರು ಅಂದಾಜು 65 ಸೆಕೆಂಡ್​ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್​ ಮಾಡಿದ್ದಾರೆ.

‘ರಾಷ್ಟ್ರಗೀತೆ ಬಗ್ಗೆ ಕಾಮನ್​ ಸೆನ್ಸ್​ ಇಲ್ವಾ?’; ಸುದೀಪ್​ಗೆ ನೆಟ್ಟಿಗನ ನೇರ ಪ್ರಶ್ನೆ: ತಪ್ಪೊಪ್ಪಿಕೊಂಡ ಕಿಚ್ಚನ ಉತ್ತರ ಸೂಪರ್​
ಕಿಚ್ಚ ಸುದೀಪ್​
TV9 Web
| Edited By: |

Updated on: Aug 16, 2021 | 9:46 AM

Share

ಆ.15ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು (75th Independence Day) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ (National Anthem) ಹಾಡಿ, ಸಿಹಿ ಹಂಚುವ ಮೂಲಕ ಆಚರಣೆ ಜೋರಾಗಿತ್ತು. ಅನೇಕ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿದ್ದರು. ನಟ ಕಿಚ್ಚ ಸುದೀಪ್​ (Kichcha Sudeep) ಅವರು ರಾಷ್ಟ್ರಗೀತೆ ಹಾಡಿ, ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡರು. ಅದಕ್ಕೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸುದೀಪ್​ ಅವರು ಭಕ್ತಿ-ಭಾವದಿಂದ ಹಾಡಿದ ಪರಿ ಕಂಡು ಅಭಿಮಾನಿಗಳು ಕೂಡ ಸೆಲ್ಯೂಟ್​ ಮಾಡಿದರು. ಆದರೆ ಕೆಲವರಿಗೆ ಅದರಲ್ಲೊಂದು ತಪ್ಪು ಕಾಣಿಸಿತು!

ರಾಷ್ಟ್ರಗೀತೆಯನ್ನು 48ರಿಂದ 52 ಸೆಕೆಂಡ್​ ಒಳಗೆ ಹಾಡಬೇಕು. ಆದರೆ ಸುದೀಪ್​ ಅವರು ಅಂದಾಜು 65 ಸೆಕೆಂಡ್​ಗಳಲ್ಲಿ ಹಾಡಿದರು. ಇದನ್ನು ಗಮನಿಸಿದ ನೆಟ್ಟಿಗರೊಬ್ಬರು ಕೊಂಚ ಖಾರವಾಗಿ ಕಮೆಂಟ್​ ಮಾಡಿದ್ದಾರೆ. ‘ಸರಿಯಾಗಿ ರಾಷ್ಟ್ರಗೀತೆ ಹಾಡಿ ಸರ್​. ನಿಮ್ಮನ್ನು ತುಂಬಾ ಜನ ಫಾಲೋ ಮಾಡುತ್ತಾರೆ. ನೀವು ಟಾಪ್​ ನಟ ಆಗಿರಬಹುದು. ಆದರೆ 48-52 ಸೆಕೆಂಡ್​ಗಳ ಒಳಗೆ ಹಾಡಬೇಕು ಎನ್ನುವ ಕಾಮನ್​ ಸೆನ್ಸ್​ ಕೂಡ ಇಲ್ವಾ?’ ಎಂಬ ಕಮೆಂಟ್ ಬಂದಿದೆ. ಅದಕ್ಕೆ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು (ಕಮೆಂಟ್​) ತುಂಬ ಒರಟಾಗಿದೆ. ಆದರೂ ಒಪ್ಪಿಕೊಳ್ಳುತ್ತೇನೆ. ನನ್ನ ದೇಶದ ಮೇಲಿನ ಪ್ರೀತಿಯಿಂದ ಏನು ಅನಿಸಿತೋ ಅದನ್ನು ಮಾಡಿದ್ದೇನೆ. ಜೈ ಹಿಂದ್​’ ಎಂದು ಸುದೀಪ್​ ಟ್ವೀಟ್​ ಮಾಡಿದ್ದಾರೆ. ತಪ್ಪು ಒಪ್ಪಿಕೊಂಡ ಅವರ ನಡೆಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಇದು ನಿಮ್ಮ ದೊಡ್ಡ ಗುಣ. ನೀವು ನಿಜವಾದ ಜಂಟಲ್​ಮನ್​’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.​

ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಟ್ವಿಟರ್​ನಲ್ಲಿ ಅವರಿಗೆ 25 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​ ಇದ್ದಾರೆ. ಟ್ವೀಟ್​ಗಳ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಾರೆ. ‘ನೆಗೆಟಿವ್​ ಕಮೆಂಟ್​ ಮಾಡುವವರಿಗೆ ಪ್ರತಿಕ್ರಿಯೆ ನೀಡಬೇಡಿ ಸರ್​’ ಎಂದು ಹಲವು ಅಭಿಮಾನಿಗಳು ಕಿಚ್ಚನ ಬಳಿ ಮನವಿ ಮಾಡಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಮತ್ತು ‘ಕೋಟಿಗೊಬ್ಬ 3’ ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಕೊರೊನಾ ವೈರಸ್​ ಕಾಟ ಕಡಿಮೆ ಆಗಲಿ ಎಂದು ಇಡೀ ಚಿತ್ರರಂಗ ಕಾಯುತ್ತಿದೆ. ಮೂರನೇ ಅಲೆ ಭಯದಿಂದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಆಗಿದೆ.

ಇದನ್ನೂ ಓದಿ:

ಆನ್​ಲೈನ್​ ಕ್ಲಾಸ್​ ಕಿರಿಕಿರಿ ತಪ್ಪಿಸಲು ಇಲ್ಲಿದೆ ಉಪಾಯ; ಕಿಚ್ಚ ಸುದೀಪ್​ ಟ್ರಸ್ಟ್​ ಕಡೆಯಿಂದ ಮಕ್ಕಳಿಗಾಗಿ ಹೊಸ ಆ್ಯಪ್​

ನಿಮ್ಮದು ಸುದೀಪ್​ ಜಾತಿಯೇ ಆಗಿದ್ರಿಂದ ಬಿಗ್​ಬಾಸ್​ ಟ್ರೋಫಿ ಸಿಕ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಮಂಜು ಪಾವಗಡ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು