AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

ಕೊರೊನಾದಿಂದ ಚೇತರಿಸಿಕೊಂಡ ನಂತರವೂ ಆರೋಗ್ಯದಲ್ಲಿ ಏರುಪೇರು ಆಗುತ್ತಲೇ ಇರುತ್ತದೆ. ಆ ಕಾರಣಕ್ಕೆ ಜಿಮ್​ಗೆ ತೆರಳಲು ಸುದೀಪ್​ಗೆ ಸಾಧ್ಯವಾಗಿರಲಿಲ್ಲ. ಈಗ ಅದಕ್ಕೆ ಸೆಡ್ಡು ಹೊಡೆದು ಅವರು ಜಿಮ್​ ಮೆಟ್ಟಿಲು ಹತ್ತಿದ್ದಾರೆ.

ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​
ಕಿಚ್ಚ ಸುದೀಪ್
TV9 Web
| Edited By: |

Updated on: Sep 13, 2021 | 9:27 AM

Share

ನಟ ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಮತ್ತು ‘ಕೋಟಿಗೊಬ್ಬ 3’ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗುತ್ತಿವೆ. ಅವರ ಮುಂದಿನ ಸಿನಿಮಾದ ಬಗ್ಗೆಯೂ ಕೌತುಕ ಮನೆ ಮಾಡಿದೆ. ಅದರ ನಡುವೆ ಒಂದು ಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಸುದೀಪ್​ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಇಷ್ಟು ದಿನಗಳ ಕಾಲ ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಆಗಿದ್ದ ಅವರು ಈಗ ಮತ್ತೆ ಜಿಮ್​ ಬಗ್ಗೆ ಗಮನ ಹರಿಸಿದ್ದಾರೆ. ಹಲವು ದಿನಗಳ ಬಳಿಕ ಅವರು ಜಿಮ್​ಗೆ ತೆರಳಿ ವರ್ಕೌಟ್​ ಆರಂಭಿಸಿದ್ದಾರೆ. ಜಿಮ್​ನಲ್ಲಿ ಕ್ಲಿಕ್ಕಿಸಿದ ಒಂದು ಫೋಟೋವನ್ನು ಕಿಚ್ಚ ಹಂಚಿಕೊಂಡಿದ್ದು, ಅದನ್ನು ಕಂಡ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ.

ಸ್ಟಾರ್​ ನಟರು ಜಿಮ್​ಗೆ ಹೋಗಿ ವರ್ಕೌಟ್​ ಮಾಡುವುದು ವಿಶೇಷವೇನಲ್ಲ. ಆದರೆ ಈ ಫೋಟೋದ ಹಿಂದೆ ಒಂದು ಕಹಾನಿ ಇದೆ. ಇಷ್ಟು ದಿನ ಸುದೀಪ್​ ಅವರನ್ನು ಜಿಮ್​ಗೆ ತೆರಳದಂತೆ ಕಟ್ಟಿ ಹಾಕಿದ್ದು ಕೊರೊನಾ! ಹೌದು, ಅವರಿಗೆ ಕೊವಿಡ್​ ಪಾಸಿಟಿವ್​ ಆಗಿತ್ತು ಎಂಬುದು ತಿಳಿದಿರುವ ವಿಚಾರವೇ. ತಿಂಗಳುಗಟ್ಟಲೆ ವಿಶ್ರಾಂತಿ ಪಡೆದ ಅವರು ಕೊನೆಗೂ ಕೊರೊನಾ ವೈರಸ್​ಅನ್ನು ಮಣಿಸಿದ್ದರು. ಆದರೆ ಗುಣಮುಖರಾದ ಮೇಲೂ ಕೂಡ ವರ್ಕೌಟ್​ ಮಾಡುವುದು ಸುಲಭ ಆಗಿರಲಿಲ್ಲ. ಕೊರೊನಾದಿಂದ ಚೇತರಿಸಿಕೊಂಡ ನಂತರವೂ ಆರೋಗ್ಯದಲ್ಲಿ ಏರುಪೇರು ಆಗುತ್ತಲೇ ಇರುತ್ತದೆ. ಆ ಕಾರಣಕ್ಕೆ ಜಿಮ್​ಗೆ ತೆರಳಲು ಸುದೀಪ್​ಗೆ​ ಸಾಧ್ಯವಾಗಿರಲಿಲ್ಲ. ಈಗ ಅದಕ್ಕೆ ಸೆಡ್ಡು ಹೊಡೆದು ಅವರು ಜಿಮ್​ ಮೆಟ್ಟಿಲು ಹತ್ತಿದ್ದಾರೆ.

‘ಕೊರೊನಾದಿಂದ ಗುಣಮುಖರಾದ ನಂತರವೂ ತಿಂಗಳುಗಟ್ಟಲೆ ಅದರ ಪ್ರಭಾವ ಇದ್ದೇ ಇರುತ್ತದೆ. ವರ್ಕೌಟ್​ ಮಾಡುವುದನ್ನು ನಾನು ತುಂಬ ಎಂಜಾಯ್​ ಮಾಡುತ್ತೇನೆ. ಹಾಗಾಗಿ ಮರಳಿ ಜಿಮ್​ಗೆ ಬರಬೇಕು ಎಂದು ಪ್ರಯತ್ನಿಸುತ್ತಲೇ ಇದ್ದೆ. ಜಿಮ್​ಗೆ ಬಂದು ನನ್ನ ಹಳೇ ದಿನಚರಿಗೆ ಒಗ್ಗಿಕೊಳ್ಳಲು ಖುಷಿ ಎನಿಸುತ್ತಿದೆ. ಅತಿ ಅವಶ್ಯಕತೆ ಇದ್ದಾಗ ನನಗೆ ಬೆಂಬಲ ನೀಡಿದ ವೈದ್ಯರು, ಕುಟುಂಬದವರು, ಸ್ನೇಹಿತರು ಮತ್ತು ಟ್ರೇನರ್​ಗಳಿಗೆ ಧನ್ಯವಾದಗಳು’ ಎಂದು ಸುದೀಪ್​ ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ.

ವೃತ್ತಿಜೀವದನಲ್ಲಿ ‘ಪೈಲ್ವಾನ್​’ ಚಿತ್ರಕ್ಕಾಗಿ ಮೊದಲ ಬಾರಿಗೆ ಸುದೀಪ್​ ಅವರು ಜಿಮ್​ಗೆ ತೆರಳಿದ್ದರು. ಆ ಬಳಿಕ ಅವರಿಗೆ ಅದರಲ್ಲಿ ಆಸಕ್ತಿ ಹೆಚ್ಚಿತು. ಈಗ ಅವರನ್ನು ಮತ್ತೆ ಜಿಮ್​ನಲ್ಲಿ ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ. ರಮ್ಯಾ, ಅರವಿಂದ್​ ಕೆಪಿ ಸೇರಿದಂತೆ ಅನೇಕರು ಈ ಫೋಟೋಗೆ ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Vikrant Rona: ವಿಕ್ರಾಂತ್​ ರೋಣ ಗೆಟಪ್​ನಲ್ಲಿ ಕಂಗೊಳಿಸುತ್ತಿರುವ ಗಣೇಶ; ಹೇಗಿದೆ ನೋಡಿ ಸುದೀಪ್​ ಸಿನಿಮಾ ಕ್ರೇಜ್​

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್​; ಕಿಚ್ಚನ ದರ್ಶನಕ್ಕೆ ಮುಗಿಬಿದ್ದ ಫ್ಯಾನ್ಸ್​

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ