AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​​ ಬಳಿಕ ಯಶ್​ಗೆ ಪಾನ್​ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ​

Vimal Pan Masala | Yash: ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲೂ ಯಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಆದರೆ ಆಯ್ಕೆಗಳ ವಿಚಾರದಲ್ಲಿ ಅವರು ತಮ್ಮದೇ ನಿಲುವು ಹೊಂದಿದ್ದಾರೆ.

ಅಕ್ಷಯ್​​ ಬಳಿಕ ಯಶ್​ಗೆ ಪಾನ್​ ಮಸಾಲ ಆಫರ್; ಎಷ್ಟು ಕೋಟಿ ಕೊಟ್ರೂ ಈ ಕೆಲಸ ಮಾಡಲ್ಲ ಎಂದ ನಟ​
ಅಕ್ಷಯ್​ ಕುಮಾರ್​, ಯಶ್
TV9 Web
| Edited By: |

Updated on: Apr 30, 2022 | 1:04 PM

Share

​‘ರಾಕಿಂಗ್​ ಸ್ಟಾರ್​’ ಯಶ್ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ಈಗ ಅವರು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ. ಯಶ್ (Yash)​ ಜೊತೆ ಕೆಲಸ ಮಾಡಲು ದೊಡ್ಡ ದೊಡ್ಡ ಪ್ರೊಡಕ್ಷನ್​ ಕಂಪನಿಗಳು ಕಾದಿವೆ. ಹಾಗೆಯೇ ಅನೇಕ ಬ್ರ್ಯಾಂಡ್​ಗಳಿಂದಲೂ ಅವರಿಗೆ ಆಫರ್​ ಬರುತ್ತಿದೆ. ಆದರೆ ಅವುಗಳನ್ನು ಒಪ್ಪಿಕೊಳ್ಳುವಲ್ಲಿ ಯಶ್​ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಜಾಹೀರಾತುಗಳಲ್ಲಿ ನಟಿಸಿದರೆ ಸ್ಟಾರ್​ ಕಲಾವಿದರಿಗೆ ಬಹುಕೋಟಿ ರೂಪಾಯಿ ಸಂಭಾವನೆ ಸಿಗುತ್ತದೆ. ಆದರೆ ಜನರಿಗೆ ತಪ್ಪು ಸಂದೇಶ ನೀಡಿದರೆ ತೀವ್ರ ಟೀಕೆಗೂ ಗುರಿಯಾಗಬೇಕಾಗುತ್ತದೆ. ಇತ್ತೀಚೆಗೆ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ವಿಮಲ್​ ಪಾನ್​ ಮಸಾಲ (Vimal Pan Masala) ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಟ ಯಶ್​ ಅವರು ಈ ವಿಚಾರದಲ್ಲಿ ಹೆಚ್ಚು ಎಚ್ಚರಿಕೆ ವಹಿಸಿದ್ದಾರೆ.​ ಪಾನ್ ಮಸಾಲ ಕಂಪನಿಯಿಂದ ಬಂದ ಆಫರ್​ ಅನ್ನು ಅವರು ಮುಲಾಜಿಲ್ಲದೇ ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಹೇಳಿಬಂದಿದೆ. ಈ ಬಗ್ಗೆ ‘ಹಿಂದುಸ್ತಾನ್​ ಟೈಮ್ಸ್​’ ವರದಿ ಪ್ರಕಟ ಮಾಡಿದೆ.

ಯಶ್​ ಅವರು ಈಗಾಗಲೇ ಕೆಲವು ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಅವುಗಳಿಂದ ಅವರಿಗೆ ಕೈ ತುಂಬ ಸಂಭಾವನೆ ಸಿಗುತ್ತದೆ. ಹಾಗಂತ ಸಿಕ್ಕ ಸಿಕ್ಕ ಆಫರ್​ಗಳನ್ನೆಲ್ಲ ಅವರು ಒಪ್ಪಿಕೊಳ್ಳುವುದಿಲ್ಲ. ಈ ವಿಚಾರಗಳನ್ನು ಮ್ಯಾನೇಜ್​ ಮಾಡಲು ಒಂದು ಕಂಪನಿ (Exceed Entertainment) ಜೊತೆ ಅವರು ಕೈ ಜೋಡಿಸಿದ್ದಾರೆ. ಆ ಕಂಪನಿಯ ಮುಖ್ಯಸ್ಥರು ನೀಡಿದ ಹೇಳಿಕೆ ಆಧರಿಸಿ ಈ ವರದಿ ಪ್ರಕಟ ಆಗಿದೆ.

‘ಈಗ ನಾವು ದೀರ್ಘಕಾಲದ ಸಹಯೋಗದ ಬಗ್ಗೆ ಆಲೋಚಿಸುತ್ತಿದ್ದೇನೆ. ಇತ್ತೀಚೆಗೆ ನಾವು ಎರಡಂಕಿಯ ಬಹುಕೋಟಿ ರೂಪಾಯಿ ಡೀಲ್​ ತಿರಸ್ಕರಿಸಿದೆವು. ಅದು ಪಾನ್​ ಮಸಾಲ ಕಂಪನಿಯ ಜಾಹೀರಾತು ಆಗಿತ್ತು. ಯಾರ ಜೊತೆ ನಾವು ಕೈಜೋಡಿಸುತ್ತೇವೆ ಎಂಬ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದೇವೆ. ಯಶ್​ ಅವರಿಗೆ ಇರುವ ಪ್ಯಾನ್​ ಇಂಡಿಯಾ ಮಟ್ಟದ ಜನಪ್ರಿಯತೆಯನ್ನು ಗಮನದಲ್ಲಿ ಇಟ್ಟುಕೊಂಡು ಅಭಿಮಾನಿಗಳಿಗೆ ಸರಿಯಾದ ಸಂದೇಶ ನೀಡಲು ಪ್ರಯತ್ನಿಸುತ್ತಿದ್ದೇವೆ’ ಎಂದು Exceed Entertainment ಮ್ಯಾನೇಜರ್​ ಅರುಣ್​ ಬ್ಯಾನರ್ಜಿ ಹೇಳಿದ್ದಾರೆ.

ವಿಮಲ್​ ಪಾನ್​ ಮಸಾಲ ಜಾಹೀರಾತಿನಲ್ಲಿ ಅಕ್ಷಯ್​ ಕುಮಾರ್​, ಶಾರುಖ್​ ಖಾನ್​ ಜಾಗೂ ಅಜಯ್​ ದೇವಗನ್​ ಕಾಣಿಸಿಕೊಂಡಿದ್ದಾರೆ. ಜನರ ಟೀಕೆ ಬಗ್ಗೆ ಅಜಯ್​ ದೇವಗನ್​ ಮತ್ತು ಶಾರುಖ್​ ಖಾನ್​ ತಲೆ ಕೆಡಿಸಿಕೊಂಡಿಲ್ಲ. ಆದರೆ ಅಕ್ಷಯ್ ಕುಮಾರ್​ ಅವರು ಅಭಿಮಾನಿಗಳ ಭಾವನೆಗೆ ಗೌರವ ನೀಡಿ, ಈ ಜಾಹೀರಾತಿನಿಂದ ಹೊರಬಂದಿದ್ದಾರೆ. ಈ ಕುರಿತು ಅವರು ಇತ್ತೀಚೆಗೆ ಪೋಸ್ಟ್​ ಮಾಡಿದ್ದರು.

‘ನನ್ನನ್ನು ಕ್ಷಮಿಸಿ.. ಎಲ್ಲ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ನಾನು ಕ್ಷಮೆ ಕೇಳುತ್ತೇನೆ. ಕಳೆದ ಕೆಲವು ದಿನಗಳಿಂದ ನೀವು ನೀಡಿದ ಪ್ರತಿಕ್ರಿಯೆಗಳು ನನ್ನಲ್ಲಿ ಆಳವಾದ ಪರಿಣಾಮ ಬೀರಿವೆ. ನಾನು ತಂಬಾಕು ಸೇವನೆಯನ್ನು ಉತ್ತೇಜಿಸುವುದಿಲ್ಲ. ವಿಮಲ್​ ಜೊತೆ ನಾನು ಕೈ ಜೋಡಿಸಿರುವುದರ ಕುರಿತು ನಿಮ್ಮ ಪ್ರತಿಕ್ರಿಯೆಗಳನ್ನು ನಾನು ಗೌರವಿಸುತ್ತೇನೆ. ಮಾನವೀಯತೆಯ ಕಾರಣಕ್ಕೆ ನಾನು ಈ ಜಾಹೀರಾತಿನಿಂದ ಹಿಂದೆ ಸರಿಯುತ್ತೇನೆ. ಒಳ್ಳೆಯ ಉದ್ದೇಶಕ್ಕೆ ಇದರ ಸಂಭಾವನೆಯನ್ನು ನೀಡಲು ನಿರ್ಧರಿಸಿದ್ದೇನೆ. ಈಗಾಗಲೇ ಮಾಡಿಕೊಂಡ ಒಪ್ಪಂದದ ಅವಧಿ ಮುಗಿಯುವವರೆಗೂ ಬ್ರ್ಯಾಂಡ್​ನವರು ಆ ಜಾಹೀರಾತನ್ನು ಪ್ರಸಾರ ಮಾಡಬಹುದು. ಆದರೆ ಮುಂಬರುವ ದಿನಗಳಲ್ಲಿ ನಾನು ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ವಹಿಸುತ್ತೇನೆ. ಸದಾ ನಿಮ್ಮ ಪ್ರೀತಿ ಮತ್ತು ಹಾರೈಕೆ ಬಯಸುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್