AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಪೊಲೀಸರ ದಾರಿ ತಪ್ಪಿಸಿಲ್ಲ’; ನಕಲಿ ಮಚ್ಚು ಕೊಟ್ಟಿದ್ದಕ್ಕೆ ಸ್ಪಷ್ಟನೆ ಕೊಟ್ಟ ರಜತ್

ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ವಿನಯ್ ಗೌಡ ಮತ್ತು ರಜತ್ ಕಿಶನ್ ರೀಲ್ಸ್‌ಗಾಗಿ ಬಳಸಿದ ನಕಲಿ ಮಚ್ಚಿನಿಂದಾಗಿ ಪೊಲೀಸರ ತನಿಖೆ ಎದುರಿಸುತ್ತಿದ್ದಾರೆ. ಪೊಲೀಸರಿಗೆ ಫೈಬರ್ ಮಚ್ಚು ಸಿಕ್ಕಿದ್ದು, ನಿಜವಾದ ಮಚ್ಚು ಕಾಣೆಯಾಗಿದೆ. ಇದರಿಂದಾಗಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರು ತಪ್ಪು ಮಾಡಿಲ್ಲ ಎಂದು ವಾದಿಸಿದ್ದಾರೆ.

‘ನಾವು ಪೊಲೀಸರ ದಾರಿ ತಪ್ಪಿಸಿಲ್ಲ’; ನಕಲಿ ಮಚ್ಚು ಕೊಟ್ಟಿದ್ದಕ್ಕೆ ಸ್ಪಷ್ಟನೆ ಕೊಟ್ಟ ರಜತ್
ರಜತ್ ಕಿಶನ್
ರಾಜೇಶ್ ದುಗ್ಗುಮನೆ
|

Updated on: Mar 26, 2025 | 7:30 AM

Share

ಮಚ್ಚು ಹಿಡಿದು ಸ್ಟೈಲಿಶ್ ಆಗಿ ರೀಲ್ಸ್ ಮಾಡಿದ ವಿನಯ್ ಗೌಡ (Vinay Gowda) ಹಾಗೂ ರಜತ್ ಕಿಶನ್​ಗೆ ಸಂಕಷ್ಟ ಹೆಚ್ಚಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ಇವರು ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದಾರೆ. ನಿಜವಾದ ಮಚ್ಚು ಹಿಡಿದು ರೀಲ್ಸ್ ಮಾಡಿದ್ದಲ್ಲದೆ, ವಿಚಾರಣೆ ವೇಳೆ ಪೊಲೀಸರಿಗೆ ರಬ್ಬರ್ ಮಚ್ಚನ್ನು ನೀಡಿದ್ದಾರೆ. ಇದು ಪೊಲೀಸರ ಸಿಟ್ಟನ್ನು ಹೆಚ್ಚಿಸಿದೆ. ಸದ್ಯ ನಿಜವಾದ ಮಚ್ಚಿಗಾಗಿ ಹುಡುಕಾಟ ನಡೆಯುತ್ತಿದೆ. ಹೀಗಿರುವಾಗಲೇ ರಜತ್ ಹಾಗೂ ವಿನಯ್ ಪೊಲೀಸರ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂದೆಲ್ಲ ವರದಿ ಆಗಿತ್ತು. ಇದಕ್ಕೆ ಸ್ಪಷ್ಟನೆ ಸಿಕ್ಕಿದೆ.

ರೀಲ್ಸ್​ಗೆ ಬಳಕೆ ಮಾಡಿದ್ದು ಅಸಲಿ ಮಚ್ಚಾದರೆ ಪೊಲೀಸರ ಕೈ ಸೇರಿರುವುದು ಫೈಬರ್ ಮಚ್ಚು. ಪರಿಶೀಲನೆ ಬಳಿಕ ಈ ವಿಚಾರ ಹೊರ ಬಿತ್ತು. ವಿನಯ್ ಹಾಗೂ ರಜತ್ ಅವರು ಪೊಲೀಸರನ್ನು ಬಕ್ರಾ ಮಾಡುವ ಕೆಲಸ ಮಾಡಿದ್ದಾರೆ ಎಂದು ವರದಿ ಆದವು. ಆದರೆ, ಇದು ಕಣ್ತಪ್ಪಿನಿಂದ ಆಗಿದ್ದು ಎಂದು ರಜತ್ ಅವರು ಸ್ಪಷ್ಟನೆ ನೀಡಿದ್ದಾರೆ. ಪೊಲೀಸರ ಕೈಗೆ ಫೈಬರ್ ಮಚ್ಚು ಸೇರಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ.

‘ನಾನು ವಿನಯ್ ರೀಲ್ಸ್ ಮಾಡಿದ್ದೆವು. ಕಲಾವಿದರಾಗಿ ರೀಲ್ಸ್ ಮಾಡಿದ್ದು ಅಷ್ಟೇ ಹೊರತು, ಯಾವುದೇ ಕೆಟ್ಟ ಉದ್ದೇಶಕ್ಕೆ ಮಾಡಿಲ್ಲ. ರೀಲ್ಸ್ ಮಾಡಲು ಬಳಸಿದ್ದ ಮಚ್ಚನ್ನು ಸೆಟ್ ಕಡೆಯಿಂದ ಕಳುಹಿಸಿಕೊಟ್ಟಿದ್ದರು. ನಾವು ಪೊಲೀಸರ ಬಳಿ ಇದ್ದ ಕಾರಣ ಅವರು ಯಾವ ಮಚ್ಚು ಕಳುಹಿಸಿ ಕೊಟ್ಟಿದ್ದಾರೆ ಎಂಬುದು ಗೊತ್ತಿರಲಿಲ್ಲ. ನಾವು ನೋಡಿರಲೂ ಇಲ್ಲ. ಪೊಲೀಸರಿಗೆ ಬೇರೆ ಮಚ್ಚು ಹೋಗಿದೆ ಅನ್ನೋದು ಗೊತ್ತಾಯಿತು. ಪೊಲೀಸರ ದಾರಿತಪ್ಪಿಸುವ ಕೆಲಸ ಮಾಡಿಲ್ಲ. ಸೆಟ್ ಪ್ರಾಪರ್ಟಿ ಮಿಸ್ ಆಗಿದೆ, ಕೊಡುತ್ತೇವೆ. ಬೇಕಂತಲೇ ಮಾಡಿಲ್ಲ’ ಎಂದು ಬಂಧನಕ್ಕೂ ಮೊದಲು ರಜತ್ ಹೇಳಿದ್ದಾರೆ.

ಇದನ್ನೂ ಓದಿ
Image
ವಿನಯ್, ರಜತ್​ಗೆ ಹೆಚ್ಚಿದ ಸಂಕಷ್ಟ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
Image
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
Image
ಮಚ್ಚು ಎಲ್ಲಿದೆ ಎಂದು ಪೊಲೀಸರ ಎದುರು ಬಾಯಿಬಿಡದ ರಜತ್‌ ಕಿಶನ್, ವಿನಯ್‌ ಗೌಡ
Image
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ

ಇದನ್ನೂ ಓದಿ: ವಿನಯ್, ರಜತ್​ಗೆ ಹೆಚ್ಚಿದ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ನ್ಯಾಯಾಂಗ ಬಂಧನ

ರಜತ್ ಹಾಗೂ ವಿನಯ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಒಂದು ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿ ಜಡ್ಡ್ ಆದೇಶಿಸಿದ್ದಾರೆ. ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಈ ವೇಳೆ ಪೊಲೀಸ್ ಕಸ್ಟಡಿಗೆ ಕೇಳೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು