AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಕುಟುಂಬದ ಜೊತೆ ಊಟ ಸವಿದ ಬಿಗ್ ಬಾಸ್ ವಿನಯ್; ‘ನೀವೆ ಲಕ್ಕಿ’ ಎಂದ ಫ್ಯಾನ್ಸ್  

ವಿನಯ್ ಗೌಡ ಅವರ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಸುದೀಪ್ ಕುಟುಂಬದ ಜೊತೆ ಅವರು ಊಟ ಸವಿದಿದ್ದಾರೆ. ಸುದೀಪ್, ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜೊತೆ ಇರೋ ಫೋಟೋನ ವಿನಯ್ ಹಂಚಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಕುಟುಂಬದ ಜೊತೆ ಊಟ ಸವಿದ ಬಿಗ್ ಬಾಸ್ ವಿನಯ್; ‘ನೀವೆ ಲಕ್ಕಿ’ ಎಂದ ಫ್ಯಾನ್ಸ್  
ಸುದೀಪ್ ಕುಟುಂಬದ ಜೊತೆ ವಿನಯ್
ರಾಜೇಶ್ ದುಗ್ಗುಮನೆ
|

Updated on: Apr 20, 2024 | 12:17 PM

Share

ವಿನಯ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ (BBK 10) ಸ್ಪರ್ಧಿಸಿದ್ದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಕಿಚ್ಚ ಸುದೀಪ್ ಜೊತೆಯೂ ಅವರು ಆಪ್ತತೆ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್. ವಿನಯ್ ಅವರನ್ನು ಸುದೀಪ್ ಅವರು ಮೆಚ್ಚಿದ್ದರು. ಈಗ ಸುದೀಪ್ ಕುಟುಂಬದ ಜೊತೆ ವಿನಯ್ ಅವರು ಊಟ ಸವಿದಿದ್ದಾರೆ. ಈ ಸಂದರ್ಭದ ಫೋಟೋನ ವಿನಯ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯುಲ್ಲಿ ಸಖತ್ ಅಗ್ರೆಸ್ ಆಗಿ ಕಾಣಿಸಿಕೊಂಡಿದ್ದರು. ಇದು ಅನೇಕರಿಗೆ ಇಷ್ಟ ಆಗಿತ್ತು. ವಿನಯ್ ಗೌಡ ಅವರ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಸುದೀಪ್ ಕುಟುಂಬದ ಜೊತೆ ಅವರು ಊಟ ಸವಿದಿದ್ದಾರೆ. ಸುದೀಪ್, ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜೊತೆ ಇರೋ ಫೋಟೋನ ವಿನಯ್ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ‘ಹಂಬಲ್ ಫ್ಯಾಮಿಲಿ. ಅದ್ಭುತ ಊಟಕ್ಕೆ ಧನ್ಯವಾದ. ಡೆಸರ್ಟ್​ ಅತ್ಯುತ್ತಮವಾಗಿತ್ತು’ ಎಂದು ಬರೆದಿದ್ದಾರೆ ವಿನಯ್. ಈ ಪೋಸ್ಟ್​ಗೆ ಸಾನ್ವಿ ಅವರು ರಿಪ್ಲೈ ಮಾಡಿದ್ದು, ಹಾರ್ಟ್ ಎಮೋಜಿ ಹಾಕಿದ್ದಾರೆ. ಅನೇಕರು ಕಿಚ್ಚ ಅವರ ವಿನಮ್ರತೆ ನೋಡಿ ಖುಷಿ ಪಟ್ಟಿದ್ದಾರೆ. ‘ನೀವೇ ಲಕ್ಕಿ’ ಎಂದು ಅನೇಕರ ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಸ್ಪರ್ಧಿಗಳನ್ನು ಮನೆಯವರಂತೆ ಟ್ರೀಟ್ ಮಾಡುತ್ತಾರೆ. ಅವರ ಬಗ್ಗೆ ಯಾರಾದರೂ ತಪ್ಪಾಗಿ ಮಾತನಾಡಿದರೆ ಅದನ್ನು ಖಂಡಿಸುತ್ತಾರೆ. ಬಿಗ್ ಬಾಸ್ ಸ್ಪರ್ಧಿಗಳು ಕಷ್ಟದಲ್ಲಿದ್ದಾಗ ಅವರಿಗೆ ಸಹಾಯ ಮಾಡಿದ್ದೂ ಇದೆ. ಈಗ ವಿನಯ್ ಗೌಡ ಜೊತೆ ಅವರು ಊಟ ಮಾಡಿರೋದು ವಿಶೇಷ. ವಿನಯ್ ಗೌಡ ಅವರು ‘ಹರ ಹರ ಮಹದೇವ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದರು. ‘ಬಿಗ್ ಬಾಸ್’ ಬಂದ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಿತು. ಒಂದು ವರ್ಗದ ಜನರು ಅವರನ್ನು ಬಹುವಾಗಿ ಇಷ್ಟಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ