AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 29ಕ್ಕೆ ‘ಅಂದೊಂದಿತ್ತು ಕಾಲ’ ರಿಲೀಸ್: ಹಾಡಿನ ಮೂಲಕ ಮೋಡಿ ಮಾಡಿದ ಸಿನಿಮಾ

ಸಿದ್ ಶ್ರೀರಾಮ್ ಕಂಠದಲ್ಲಿ ಮೂಡಿಬಂದ ‘ಮುಂಗಾರು ಮಳೆಯಲ್ಲಿ..’ ಹಾಡು ಜನಪ್ರಿಯ ಆಗಿದೆ. ಹಾಡಿನ ಮೂಲಕ ‘ಅಂದೊಂದಿತ್ತು ಕಾಲ’ ಸಿನಿಮಾ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಮೂಡುವಂತಾಗಿದೆ. ವಿನಯ್ ರಾಜ್​ಕುಮಾರ್ ಹೀರೋ ಆಗಿ ನಟಿಸಿರುವ ಈ ಸಿನಿಮಾದ ಆಗಸ್ಟ್ 29ರಂದು ತೆರೆಕಾಣಲಿದೆ. ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ..

ಆಗಸ್ಟ್ 29ಕ್ಕೆ ‘ಅಂದೊಂದಿತ್ತು ಕಾಲ’ ರಿಲೀಸ್: ಹಾಡಿನ ಮೂಲಕ ಮೋಡಿ ಮಾಡಿದ ಸಿನಿಮಾ
Aditi Prabhudeva, Vinay Rajkumar
ಮದನ್​ ಕುಮಾರ್​
|

Updated on: Aug 25, 2025 | 12:48 PM

Share

ನಟ ವಿನಯ್ ರಾಜ್​ಕುಮಾರ್ (Vinay Rajkumar) ಹಾಗೂ ನಟಿ ಅದಿತಿ ಪ್ರಭುದೇವ ಅವರು ‘ಅಂದೊಂದಿತ್ತು ಕಾಲ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಕೀರ್ತಿ ಕೃಷ್ಣ ಅವರು ನಿರ್ದೇಶನ ಮಾಡಿರುವ ಈ ಸಿನಿಮಾ ಆಗಸ್ಟ್ 29ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ‘ಭುವನ್ ಸಿನಿಮಾಸ್’ ಮೂಲಕ ಭುವನ್ ಸುರೇಶ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಕೀರ್ತಿ ಕೃಷ್ಣ ಅವರು ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹಾಡುಗಳ ಮೂಲಕ ಈ ಸಿನಿಮಾ ಈಗಾಗಲೇ ಸದ್ದು ಮಾಡಿದೆ. ಪ್ರತಿ ಹಾಡು ಕೂಡ ಭಿನ್ನವಾಗಿ ಮೂಡಿಬಂದಿದ್ದು. ರಾಘವೇಂದ್ರ ವಿ. ಅವರು ‘ಅಂದೊಂದಿತ್ತು ಕಾಲ’ (Andondittu Kaala) ಸಿನಿಮಾಗೆ ಸಂಗೀತ ನೀಡಿದ್ದಾರೆ.

ಧನಂಜಯ್ ರಂಜನ್ ಸಾಹಿತ್ಯದಲ್ಲಿ ಮೂಡಿಬಂದ ‘ಮುಂಗಾರು ಮಳೆಯಲ್ಲಿ…’ ಹಾಡು ಈಗಾಗಲೇ ಸೂಪರ್ ಹಿಟ್ ಆಗಿದೆ. ಆ ಮೂಲಕ ‘ಅಂದೊಂದಿತ್ತು ಕಾಲ’ ಸಿನಿಮಾದ ಮೇಲೆ ನಿರೀಕ್ಷೆ ಮೂಡಿಸಿದೆ. ಗಾಯಕ ಸಿದ್ ಶ್ರೀರಾಮ್ ಧ್ವನಿ ನೀಡಿರುವ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ. ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆಯಲು ಈ ಹಾಡು ಆಹ್ವಾನದ ರೀತಿ ಇದೆ.

ಹಾಡುಗಳ ರೀತಿಯೇ ‘ಅಂದೊಂದಿತ್ತು ಕಾಲ’ ಸಿನಿಮಾದ ಟೀಸರ್ ಮತ್ತು ಟ್ರೇಲರ್ ಸಹ ಬಹಳಷ್ಟು ನಿರೀಕ್ಷೆ ಹುಟ್ಟಲು ಕಾರಣ ಆಗಿದೆ. ಈ ಸಿನಿಮಾದಲ್ಲಿ ವಿನಯ್‍ ರಾಜ್​​ಕುಮಾರ್ ಅವರು 2 ಶೇಡ್ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ವೃತ್ತಿಜೀವನದ ಡಿಫರೆಂಟ್ ಸಿನಿಮಾ ಇದಾಗಲಿದೆ ಎಂದು ಚಿತ್ರತಂಡ ಹೇಳಿದೆ. ಇದು ಓರ್ವ ನಿರ್ದೇಶಕನ ಜೀವನದ ಕಹಾನಿ. ನಿರ್ದೇಶಕ ಕೀರ್ತಿ ಅವರು ಜೀವನದಲ್ಲಿ ಅನುಭವಿಸಿದ ಘಟನೆಗಳು ಹಾಗೂ ಅವರ ಸ್ನೇಹಿತರ ಅನುಭವಗಳು ಸೇರಿ ಈ ಸಿನಿಮಾ ಆಗಿದೆ.

ನಟಿ ಅದಿತಿ ಪ್ರಭುದೇವ ಅವರು ಈ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ನಿರ್ದೇಶಕ ಕೀರ್ತಿ ಹಾಗೂ ನಿರ್ಮಾಪಕ ಸುರೇಶ್‍ ನನಗೆ ಸುಂದರವಾದ ಪಾತ್ರ ನೀಡಿದ್ದಾರೆ. ಈ ಸಿನಿಮಾದಲ್ಲಿ ನನಗೆ ಕಣ್ಣಲ್ಲೇ ಮಾತಾಡುವ ಪಾತ್ರವಿದೆ. ವಿನಯ್‍ ಜೊತೆಗೆ ಬಹಳ ಖುಷಿಯಿಂದ ಕೆಲಸ ಮಾಡಿದ್ದೇನೆ. ಸಂಗೀತ ನಿರ್ದೇಶಕ ರಾಘವೇಂದ್ರ ಬಹಳ ಒಳ್ಳೆಯ ಹಾಡುಗಳನ್ನು ಕೊಟ್ಟಿದ್ದಾರೆ. ಖಂಡಿತವಾಗಿ ಈ ಸಿನಿಮಾ ಎಲ್ಲರಿಗೂ ಇಷ್ಟ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.

ಕಿರುತೆರೆಯ ಖ್ಯಾತಿ ನಟಿ ನಿಶಾ ರವಿಕೃಷ್ಣನ್ ಕೂಡ ಒಂದು ಪ್ರಮುಖವಾದ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ. ಅರುಣಾ ಬಾಲರಾಜ್, ಜಗಪ್ಪ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಅಭಿಷೇಕ್‍ ಕಾಸರಗೋಡು ಅವರು ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ: ಜೊತೆಯಾಗಿ ಫೋಟೋಶೂಟ್ ಮಾಡಿಸಿದ ರಮ್ಯಾ-ವಿನಯ್ ರಾಜ್​ಕುಮಾರ್; ಏನಿದು ಹೊಸ ಅಪ್​ಡೇಟ್

ಈ ಸಿನಿಮಾದಲ್ಲಿ ಐದು ಹಾಡುಗಳಿವೆ. ಎ.ಆರ್. ಕೃಷ್ಣ, ಸುರೇಶ್ ಆರ್ಮುಗಂ ಅವರು ಸಂಕಲನ ಮಾಡಿದ್ದಾರೆ. ರವಿವರ್ಮ ಅವರ ಸಾಹಸ, ರಘು ಆರ್.ಜೆ. ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕ್ರಿಯೇಟಿವ್ ನಿರ್ಮಾಪಕರಾಗಿ ಶಿವು ಗೌಡ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ಲೋಕೇಶ್ ಎನ್. ಕೆಲಸ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!