AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 29ಕ್ಕೆ ‘ಅಂದೊಂದಿತ್ತು ಕಾಲ’ ರಿಲೀಸ್: ಹಾಡಿನ ಮೂಲಕ ಮೋಡಿ ಮಾಡಿದ ಸಿನಿಮಾ

ಸಿದ್ ಶ್ರೀರಾಮ್ ಕಂಠದಲ್ಲಿ ಮೂಡಿಬಂದ ‘ಮುಂಗಾರು ಮಳೆಯಲ್ಲಿ..’ ಹಾಡು ಜನಪ್ರಿಯ ಆಗಿದೆ. ಹಾಡಿನ ಮೂಲಕ ‘ಅಂದೊಂದಿತ್ತು ಕಾಲ’ ಸಿನಿಮಾ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಮೂಡುವಂತಾಗಿದೆ. ವಿನಯ್ ರಾಜ್​ಕುಮಾರ್ ಹೀರೋ ಆಗಿ ನಟಿಸಿರುವ ಈ ಸಿನಿಮಾದ ಆಗಸ್ಟ್ 29ರಂದು ತೆರೆಕಾಣಲಿದೆ. ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ..

ಆಗಸ್ಟ್ 29ಕ್ಕೆ ‘ಅಂದೊಂದಿತ್ತು ಕಾಲ’ ರಿಲೀಸ್: ಹಾಡಿನ ಮೂಲಕ ಮೋಡಿ ಮಾಡಿದ ಸಿನಿಮಾ
Aditi Prabhudeva, Vinay Rajkumar
ಮದನ್​ ಕುಮಾರ್​
|

Updated on: Aug 25, 2025 | 12:48 PM

Share

ನಟ ವಿನಯ್ ರಾಜ್​ಕುಮಾರ್ (Vinay Rajkumar) ಹಾಗೂ ನಟಿ ಅದಿತಿ ಪ್ರಭುದೇವ ಅವರು ‘ಅಂದೊಂದಿತ್ತು ಕಾಲ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಕೀರ್ತಿ ಕೃಷ್ಣ ಅವರು ನಿರ್ದೇಶನ ಮಾಡಿರುವ ಈ ಸಿನಿಮಾ ಆಗಸ್ಟ್ 29ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ‘ಭುವನ್ ಸಿನಿಮಾಸ್’ ಮೂಲಕ ಭುವನ್ ಸುರೇಶ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಕೀರ್ತಿ ಕೃಷ್ಣ ಅವರು ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹಾಡುಗಳ ಮೂಲಕ ಈ ಸಿನಿಮಾ ಈಗಾಗಲೇ ಸದ್ದು ಮಾಡಿದೆ. ಪ್ರತಿ ಹಾಡು ಕೂಡ ಭಿನ್ನವಾಗಿ ಮೂಡಿಬಂದಿದ್ದು. ರಾಘವೇಂದ್ರ ವಿ. ಅವರು ‘ಅಂದೊಂದಿತ್ತು ಕಾಲ’ (Andondittu Kaala) ಸಿನಿಮಾಗೆ ಸಂಗೀತ ನೀಡಿದ್ದಾರೆ.

ಧನಂಜಯ್ ರಂಜನ್ ಸಾಹಿತ್ಯದಲ್ಲಿ ಮೂಡಿಬಂದ ‘ಮುಂಗಾರು ಮಳೆಯಲ್ಲಿ…’ ಹಾಡು ಈಗಾಗಲೇ ಸೂಪರ್ ಹಿಟ್ ಆಗಿದೆ. ಆ ಮೂಲಕ ‘ಅಂದೊಂದಿತ್ತು ಕಾಲ’ ಸಿನಿಮಾದ ಮೇಲೆ ನಿರೀಕ್ಷೆ ಮೂಡಿಸಿದೆ. ಗಾಯಕ ಸಿದ್ ಶ್ರೀರಾಮ್ ಧ್ವನಿ ನೀಡಿರುವ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ. ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆಯಲು ಈ ಹಾಡು ಆಹ್ವಾನದ ರೀತಿ ಇದೆ.

ಹಾಡುಗಳ ರೀತಿಯೇ ‘ಅಂದೊಂದಿತ್ತು ಕಾಲ’ ಸಿನಿಮಾದ ಟೀಸರ್ ಮತ್ತು ಟ್ರೇಲರ್ ಸಹ ಬಹಳಷ್ಟು ನಿರೀಕ್ಷೆ ಹುಟ್ಟಲು ಕಾರಣ ಆಗಿದೆ. ಈ ಸಿನಿಮಾದಲ್ಲಿ ವಿನಯ್‍ ರಾಜ್​​ಕುಮಾರ್ ಅವರು 2 ಶೇಡ್ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ವೃತ್ತಿಜೀವನದ ಡಿಫರೆಂಟ್ ಸಿನಿಮಾ ಇದಾಗಲಿದೆ ಎಂದು ಚಿತ್ರತಂಡ ಹೇಳಿದೆ. ಇದು ಓರ್ವ ನಿರ್ದೇಶಕನ ಜೀವನದ ಕಹಾನಿ. ನಿರ್ದೇಶಕ ಕೀರ್ತಿ ಅವರು ಜೀವನದಲ್ಲಿ ಅನುಭವಿಸಿದ ಘಟನೆಗಳು ಹಾಗೂ ಅವರ ಸ್ನೇಹಿತರ ಅನುಭವಗಳು ಸೇರಿ ಈ ಸಿನಿಮಾ ಆಗಿದೆ.

ನಟಿ ಅದಿತಿ ಪ್ರಭುದೇವ ಅವರು ಈ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ನಿರ್ದೇಶಕ ಕೀರ್ತಿ ಹಾಗೂ ನಿರ್ಮಾಪಕ ಸುರೇಶ್‍ ನನಗೆ ಸುಂದರವಾದ ಪಾತ್ರ ನೀಡಿದ್ದಾರೆ. ಈ ಸಿನಿಮಾದಲ್ಲಿ ನನಗೆ ಕಣ್ಣಲ್ಲೇ ಮಾತಾಡುವ ಪಾತ್ರವಿದೆ. ವಿನಯ್‍ ಜೊತೆಗೆ ಬಹಳ ಖುಷಿಯಿಂದ ಕೆಲಸ ಮಾಡಿದ್ದೇನೆ. ಸಂಗೀತ ನಿರ್ದೇಶಕ ರಾಘವೇಂದ್ರ ಬಹಳ ಒಳ್ಳೆಯ ಹಾಡುಗಳನ್ನು ಕೊಟ್ಟಿದ್ದಾರೆ. ಖಂಡಿತವಾಗಿ ಈ ಸಿನಿಮಾ ಎಲ್ಲರಿಗೂ ಇಷ್ಟ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.

ಕಿರುತೆರೆಯ ಖ್ಯಾತಿ ನಟಿ ನಿಶಾ ರವಿಕೃಷ್ಣನ್ ಕೂಡ ಒಂದು ಪ್ರಮುಖವಾದ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ. ಅರುಣಾ ಬಾಲರಾಜ್, ಜಗಪ್ಪ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಅಭಿಷೇಕ್‍ ಕಾಸರಗೋಡು ಅವರು ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ: ಜೊತೆಯಾಗಿ ಫೋಟೋಶೂಟ್ ಮಾಡಿಸಿದ ರಮ್ಯಾ-ವಿನಯ್ ರಾಜ್​ಕುಮಾರ್; ಏನಿದು ಹೊಸ ಅಪ್​ಡೇಟ್

ಈ ಸಿನಿಮಾದಲ್ಲಿ ಐದು ಹಾಡುಗಳಿವೆ. ಎ.ಆರ್. ಕೃಷ್ಣ, ಸುರೇಶ್ ಆರ್ಮುಗಂ ಅವರು ಸಂಕಲನ ಮಾಡಿದ್ದಾರೆ. ರವಿವರ್ಮ ಅವರ ಸಾಹಸ, ರಘು ಆರ್.ಜೆ. ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕ್ರಿಯೇಟಿವ್ ನಿರ್ಮಾಪಕರಾಗಿ ಶಿವು ಗೌಡ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ಲೋಕೇಶ್ ಎನ್. ಕೆಲಸ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ