AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಿತ್ ಹೆಗಡೆ ಕಂಠದಲ್ಲಿ ಮೂಡಿಬಂತು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ’ ಹಾಡು

ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಹೊಸ ಹಾಡು ಬಿಡುಗಡೆಯಾಗಿದೆ. ಸಂಜಿತ್ ಹೆಗಡೆ ಕಂಠಸಿರಿಯಲ್ಲಿ ಮೂಡಿಬಂದ ‘ಕಂದಮ್ಮ’ ವಿಡಿಯೋ ಸಾಂಗ್ ಸಖತ್ ವೈರಲ್ ಆಗಿದ್ದು, ವಿನಯ್ ರಾಜ್‌ಕುಮಾರ್ ಹಾಗೂ ಮೋನಿಷಾ ಜೋಡಿ ಗಮನ ಸೆಳೆದಿದೆ. ಚರಣ್ ರಾಜ್ ಮ್ಯೂಸಿಕ್ ಮೆಚ್ಚುಗೆ ಪಡೆದಿದೆ.

ಸಂಜಿತ್ ಹೆಗಡೆ ಕಂಠದಲ್ಲಿ ಮೂಡಿಬಂತು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ’ ಹಾಡು
ವಿನಯ್-ಮೋನಿಷಾ
ರಾಜೇಶ್ ದುಗ್ಗುಮನೆ
|

Updated on: Jul 20, 2026 | 11:37 AM

Share

ಮುಖ್ಯಾಂಶಗಳು

  • ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದಿಂದ ಹೊಸ ಹಾಡು ರಿಲೀಸ್
  • ಮಧುರ ಧ್ವನಿಯಲ್ಲಿ ಮೂಡಿಬಂದ ‘ಕಂದಮ್ಮ’ ಸಾಂಗ್
  • ಸಂಜಿತ್ ಹೆಗಡೆ ಕಂಠಸಿರಿಯಲ್ಲಿ ಅರಳಿದ ಪ್ರೇಮಗೀತೆ

ದುನಿಯಾ ವಿಜಯ್ (Duniya Vijay) ನಟನೆಯ ಜೊತೆಗೆ ನಿರ್ದೇಶನದಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮೊದಲು ‘ಸಲಗ’ ಮತ್ತು ‘ಭೀಮ’ ಚಿತ್ರದ ಮೂಲಕ ರೌಡಿಸಂ ಹಾಗೂ ಡ್ರಗ್ಸ್ ಕಥೆ ಹೇಳಿದ್ದ ದುನಿಯಾ ವಿಜಯ್ ಈ ಬಾರಿ ಒಂದು ಸುಂದರ ಪ್ರೇಮಕಥೆ ಕಟ್ಟಿಕೊಡುವ ಪ್ರಯತ್ನದಲ್ಲಿ ಇದ್ದಾರೆ. ಈಗ ಈ ಚಿತ್ರದ ‘ಕಂದಮ್ಮ, ಕಂದಮ್ಮ..’ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ.

‘ಸಿಟಿ ಲೈಟ್ಸ್’ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಹೀರೋ ಆದರೆ, ದುನಿಯಾ ವಿಜಿ ಅವರ ಪುತ್ರಿ ಮೋನಿಷಾ ನಾಯಕಿ. ಇಬ್ಬರ ಸುಂದರ ಪ್ರೇಮಕಥೆಯನ್ನು ಈ ಹಾಡು ತೆರೆದಿಟ್ಟಿದೆ. ರಾಮ್ ಚರಣ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ಹಾಡು ಗಮನ ಸೆಳೆದಿದೆ. ಈ ಮೊದಲು ರಿಲೀಸ್ ಆಗಿದ್ದ ‘ಬಾವ ಬಾವ’ ಹಾಡು ಗಮನ ಸೆಳೆದಿತ್ತು. ಈಗ ಚಿತ್ರದ ಮತ್ತೊಂದು ಹಾಡು ಬಿಡುಗಡೆ ಆಗಿದ್ದು, ‘ಸಿಟಿ ಲೈಟ್ಸ್’ ಸಿನಿಮಾ ಮ್ಯೂಸಿಕಲಿ ಹಿಟ್ ಆಗುವ ಸೂಚನೆ ಸಿಕ್ಕಿದೆ.

‘ಕಂದಮ್ಮ ಕಂದಮ್ಮ..’ ಹಾಡನ್ನು ಸಂಜಿತ್ ಹೆಗಡೆ ಅವರು ಹಾಡಿದ್ದಾರೆ. ಅವರ ಕಂಠವು ಹಾಡಿನ ತೂಕ ಹೆಚ್ಚಿಸಿದೆ. ನಾಗಾರ್ಜುನ ಶರ್ಮ ಅವರ ಸಾಹಿತ್ಯ ಹಾಡನ್ನು ಮತ್ತಷ್ಟು ಮುದ್ದಾಗಿಸಿದೆ. ಆನಂದ್ ಆಡಿಯೋ ಯೂಟ್ಯೂಬ್​ ಚಾನೆಲ್ ಮೂಲಕ ವಿಡಿಯೋ ಸಾಂಗ್ ಬಿಡುಗಡೆ ಕಂಡಿದೆ.

ಇದನ್ನೂ ಓದಿ:  ‘ಸಿಟಿಲೈಟ್ಸ್‌’ ಹಾಡು ಬಿಡುಗಡೆ: ಹೊಸ ಪ್ರತಿಭೆಗೆ ದುನಿಯಾ ವಿಜಿ ಬೆಂಬಲ

ಹಳ್ಳಿಯಿಂದ ನಗರಕ್ಕೆ ವಲಸೆ ಬರುವ ಕಥಾ ನಾಯಕ ಹಾಗೂ ನಾಯಕಿ ಎದುರಿಸುವ ಸವಾಲುಗಳೇ ಚಿತ್ರದ ಕಥೆ. ‘ಸಿಟಿ ಲೈಟ್ಸ್’ ಚಿತ್ರಕ್ಕೆ ಶಿವಸೇನಾ ಅವರ ಛಾಯಾಗ್ರಹಣ ಇದೆ, ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ದೀಪು ಎಸ್. ಕುಮಾರ್ ಎಡಿಟಿಂಗ್ ಚಿತ್ರಕ್ಕಿದೆ. ದುನಿಯಾ ಟಾಕೀಸ್ ಮತ್ತು ಯಂತ್ರೋದ್ದಾರಕ ಬ್ಯಾನರ್ ಅಡಿಯಲ್ಲಿ ವಿಜಯ್ ಕುಮಾರ್ ಹಾಗೂ ವಿಕ್ರಂ ಆರ್ಯ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ